ಅಂಕಣಗಳು

ಅಣ್ಣನ ನೋಡುವ ನೆಪದಲ್ಲಿ ಬಂದಿದ್ದ ಕಿರಾತಕ

• ಕೀರ್ತನ ಎಂ.

ತಾರಾ, ಹೊಳೆಯುವ ಮೊಗದವಳು. ಚಂದಿರನ ನಗು, ಮುಗಿಲಿನ ಶುಭ್ರ ಬಿಳುಪಿನ ಚೆಲುವೆ. ತನ್ನ ಪುಟ್ಟ ಕುಟುಂಬವೇ ಅವಳ ಪ್ರಪಂಚ, ಆ ಪ್ರಪಂಚದಲ್ಲಿ ಅಣ್ಣನ ಸ್ನೇಹಿತನ ಆಗಮನವಾಗಿತ್ತು. ಏಳು ವರ್ಷಗಳು ಇರುವವಳು ಅವನನ್ನು ಬಾಯಿ ತುಂಬಾ ಅಣ್ಣ ಎಂದು ಕರೆಯುತ್ತಿದ್ದಳು. ಏಷ್ಟು ವರ್ಷ… ಅಂದು ಅವಳು ಮೈನೆರೆದು ಸರಿಯಾಗಿ ಎರಡು ತಿಂಗಳುಗಳು ಕಳೆದಿತ್ತು. ಶಾಲೆಯಲ್ಲಿ ಕಾಡಿ ಬೇಡಿ ಮೂರು ವಾರ ರಜೆ ಗಿಟ್ಟಿಸಿ ಅದ್ಧೂರಿಯಾಗಿ ಆರತಿ ಶಾಸ್ತ್ರವನ್ನೂ ಮಾಡಿ ಮುಗಿಸಿದ್ದರು. ಆ ದಿನ ಕಾರ್ಯಕ್ರಮಕ್ಕೆ ಬಂದವನು ಮರಳಿ ಗೆಳೆಯನನ್ನು ಭೇಟಿ ಆಗುವ ನೆಪದಲ್ಲಿ ಮನೆಗೆ ಬಂದಿದ್ದ. ಅದೂ ತಾರ ಒಬ್ಬಳೇ ಇದ್ದ ಹೊತ್ತಲ್ಲಿ! ‘ಅಣ್ಣ…’ಬಾಗಿಲು ತೆಗೆದವಳು ಖುಷಿಯಿಂದ ಅವನ ಬಳಿ ಬಂದಳು.

ಮನೆಯಲ್ಲಿ ಯಾರೂ ಇಲ್ಲದ ಹೊತ್ತು ಎಲ್ಲಿ ನಿನ್ನ ಅಣ್ಣ? ಆಂಟಿ ಅಂಕಲ್‌ ಇಲ್ವಾ?’ ಎಂದು ಕೇಳುತ್ತ ಅವಳ ಹೆಗಲು ಬಳಸುತ್ತಾ ಒಳ ಬಂದ.

‘ಇಲ್ಲ ಅಪ್ಪ ಕೆಲಸಕ್ಕೆ ಹೋಗಿದ್ದಾರೆ ಅಮ್ಮ ಸಂತೆಗೆ ಹೋಗಿದ್ದಾರೆ. ಅಣ್ಣ ಇನ್ನೇನು ಬರಬಹುದು’ ಎಂದವಳ ಮಾತು ಕೇಳುತ್ತ ಅವಳನ್ನು ಪಕ್ಕದಲ್ಲಿ ಕೂರಿಸಿಕೊಂಡು ತಾನು ಅಂಟಿಕೊಂಡು ಕುಳಿತ. ಹೆಗಲು ಬಳಸಿದ ಕೈ ನಿಧಾನವಾಗಿ ಕೆಳಜಾರಲು ಇರುಸುಮುರಿಸು ಅವಳಿಗೆ.

‘ಅಣ್ಣ ಇರು ಕಾಫಿ ತರ್ತಿನಿ’ ನಾಜೂಕಾಗಿ ಬಿಡಿಸಿಕೊಂಡು ಅಲ್ಲಿಂದ ಎದ್ದು ಬಂದವಳಿಗೆ ಮೊದಲ ಬಾರಿ ಅವನ ಸ್ಪರ್ಶ ಅಹಿತವಾಯಿತು.
ತಪ್ಪಿಸಿಕೊಂಡೆ ಎಂದುಕೊಳ್ಳುವಾಗ ಹಿಂದೆ ಬಂದವನು ತಪ್ಪಿಸಿಕೊಳ್ಳಲು ಆಗದಂತೆ ಕಚಗುಳಿ ಕೊಡುವ ನೆಪದಲ್ಲಿ ಅವಳ ಮೈ ಪೂರಾ ಸ್ಪರ್ಶಿಸುತ್ತಿದ್ದ. ಅವಳಿಗೂ ಏನೋ ಸರಿಯಿಲ್ಲ ಎನ್ನುವುದು ಅರ್ಥವಾಗಲು ‘ಅಣ್ಣ ಬಿಡಿ’ ಎಂದು ಕೂಗುತ್ತ ಹೇಗೋ ಬಿಡಿಸಿಕೊಂಡಳು.

ಮತ್ತೊಮ್ಮೆ ಅವಳ ಬಳಿ ಬರುವವನ ತಡೆದಿದ್ದು ಅಷ್ಟರಲ್ಲಿ ಹೊರಗೆ ಕೇಳಿದ ಅವಳ ತಾಯಿಯ ಸದ್ದು. ಅವನು ಹೊರ ನಡೆದ ತಕ್ಷಣ ದೀರ್ಘವಾಗಿ ಉಸಿರೆಳೆದುಕೊಂಡ ತಾರಾ ಏನೂ ನಡೆದಿಲ್ಲ ಎನ್ನುವಂತೆ ಇಬ್ಬರಿಗೂ ಕಾಫಿ ನೀಡಿದಳು. ಆದಷ್ಟು ಅವನಿಂದ ಅಂತರ ಕಾಯ್ದುಕೊಳ್ಳುತ್ತಾ ಇದ್ದಳು. ಆದರೆ ಅವನು ಎಲ್ಲರ ಕಣ್ಣಪ್ಪಿಸಿ ತನ್ನ ಚಪಲ ತೀರಿಸಿಕೊಳ್ಳುತ್ತಾ ಇದ್ದ. ಅವಳ ಕುಟುಂಬದವರು ಅವನ ಮೇಲಿಟ್ಟಿದ್ದ ನಂಬಿಕೆಯೇ ಅವನಿಗೆ ಅಸ್ತವಾಗಿತ್ತು. ಅವಳಿಗೂ ಮನೆಯಲ್ಲಿ ಹೇಳುವ ಧೈರ್ಯವಿಲ್ಲ. ದಿನೇ ದಿನೇ ಅವನ ಉಪಟಳ ಹೆಚ್ಚಾಗಿ ಒಮ್ಮೆಯಂತೂ ಅತಿಯಾಗಿ ವರ್ತಿಸಿ ಪೂರ್ತಿಯಾಗಿ ಹೆದರುವಂತೆ ಮಾಡಿದ್ದ.

ಇನ್ನು ಸುಮ್ಮನಿದ್ದರೆ ಆಗದು ಎಂದು ಯೋಚಿಸಿದ ತಾರ ವರ್ಷಗಳಿಂದ ಸಹಿಸಿದ್ದ ಅವನ ಕಾಟವನ್ನು ತಾನು ಪಿಯುಸಿ ಸೇರಿದಾಗ ಮನೆಯಲ್ಲಿ ಹೇಳುವ ನಿರ್ಧಾರ ಮಾಡಿ ತಾಯಿಗೆ ಭಯದಲ್ಲೇ ಎಲ್ಲವನ್ನೂ ಹೇಳಿದಳು.
‘ಮೊದಲೇ ಏಕೆ ಹೇಳಲಿಲ್ಲ ನೀನು? ಇನ್ನು ಅವನ ಹತ್ತಿರ ಹೋಗಬೇಡ’ ಎಂದು ಅವನಿಗೆ ಬೈದುಕೊಳ್ಳುತ್ತಾ ಇವಳಿಗೂ ಗದರಿದರು ಅಮ್ಮ. ಅದಾದ ಮೇಲೆ ಅವಳು ಓದಿನ ಸಲುವಾಗಿ ಬೇರೆ ಊರಿಗೆ ತೆರಳಿದಳು. ಅವನ ಕಾಟ ತಪ್ಪಿತ್ತು. ಅಲ್ಲಿಂದ ಹೊರ ಬಂದ ಮೇಲೆ ಅದು ಅವಳನ್ನು ಮಾನಸಿಕವಾಗಿ ಕಾಡಲು ಶುರುವಾಗಿ ಪುರುಷರನ್ನು ಕಂಡರೆ ವಿಚಿತ್ರ ಭಯ ಹುಟ್ಟಿಕೊಂಡಿತು. ಅದೊಂದು ದುಃಸ್ವಪ್ನವಾಗಿ ಜೀವನ ಪೂರ್ತಿ ತಾರಾಳನ್ನು ಕಾಡಿತು ಅವಳ ದಾಂಪತ್ಯ ಜೀವನವನ್ನೂ ಹಾಳು ಮಾಡಿತು…

ಅಂದು ತಾರ ಹೇಳಿಕೊಂಡಾಗ ಏನೂ ಅರಿಯದ ಅವಳ ಬದಲಾಗಿ ಅವಳ ತಾಯಿ ದನಿ ಏರಿಸಿದ್ದರೂ ಕೂಡ ಅದು ಅವಳನ್ನು ಜೀವನ ಪೂರ್ತಿ ಕಾಡುತ್ತಾ ಇರಲಿಲ್ಲವೇನೋ. ಕೇವಲ ತಂದೆ ತಾಯಿ ಪಾತ್ರ ಮಾತ್ರವೇ ಇದೆಯೇ ಇದರಲ್ಲಿ? ಖಂಡಿತ ಇಲ್ಲ. ಸಮಾಜದ ಪಾತ್ರವೂ ಇದೆ ಅಲ್ಲವೇ?
keerthana.manju.guha6@gmail.com

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

15 hours ago