Categories: ಅಂಕಣಗಳು

ಹಿರಿಯರಿಗಾಗಿ ಹಲವು ಯೋಜನೆಗಳು

ಕೆಲ ಮೂಲಗಳಿಂದ ದೊರೆತ ಅಂಕಿ ಅಂಶಗಳ ಪ್ರಕಾರ 2050ರ ವೇಳೆಗೆ, ಹಿರಿಯ ನಾಗರಿಕರ ಸಂಖ್ಯೆಯು ಒಟ್ಟು ಜನಸಂಖ್ಯೆಯ ಕಾಲು ಭಾಗದಷ್ಟು ಇರುತ್ತದೆ ಎಂದು ಅಂದಾಜಿಸಲಾಗಿದೆ.

ನಿವೃತ್ತಿಯ ನಂತರ ಕುಟುಂಬದಲ್ಲಿ ಒಬ್ಬರ ಆದಾಯವು ಕಡಿಮೆಯಾಗುವುದರಿಂದ, ವೈದ್ಯಕೀಯ ಖರ್ಚು ವೆಚ್ಚಗಳನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಹಾಗಾಗಿ ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲೆಂದೇ ಭಾರತ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

ಹಿರಿಯ ನಾಗರಿಕರು ಮಾಡುವ ಹೂಡಿಕೆಗೆ ವಾರ್ಷಿಕ ಶೇ.8ರ ದರವನ್ನು ನೀಡುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಧಾನ ಮಂತ್ರಿ ವಯ ವಂದನಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ, ವಿಶೇಷ ವೈದ್ಯಕೀಯ ಆರೈಕೆಯನ್ನು ನೀಡುವ ಗರಿಷ್ಠ ಮೆಡಿಕ್ಲೈಮ್ ಯೋಜನೆಗಳನ್ನು ಆರಂಭಿಸಿದೆ. ಇದರಲ್ಲಿ ದೈಹಿಕ ನೆರವಿನ ಅಗತ್ಯವಿರುವ ಹಿರಿಯ ನಾಗರಿಕರಿಗಾಗಿ ರಾಷ್ಟ್ರೀಯ ವಯೋಶ್ರೀ ಯೋಜನೆ, ಹಿರಿಯ ನಾಗರಿಕರ ಕಲ್ಯಾಣ ನಿಧಿ ಮುಖ್ಯವಾದವುಗಳು.

ಅಂತೆಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅನುಪಮ ಸೇವೆ ಸಲ್ಲಿಸುವ ಹಿರಿಯ ನಾಗರಿಕರನ್ನು ಗುರುತಿಸಿ, ಗೌರವಿಸುವುದಕ್ಕಾಗಿ 2012ರಿಂದ ‘ವಯೋಶ್ರೇಷ್ಠ ಸಮ್ಹಾನ್‌’ ಪ್ರಶಸ್ತಿಯನ್ನು ನೀಡುತ್ತಿದೆ. ಕೇವಲ ಹಿರಿಯರಿಗೆ ಮಾತ್ರವಲ್ಲದೆ, ಹಿರಿಯ ನಾಗರಿಕರಿಗೆ ಸೇವೆ, ಸೌಲಭ್ಯಗಳನ್ನು ನೀಡುತ್ತಿರುವ ಜಿಲ್ಲಾ ಪಂಚಾಯಿತಿಗಳು ಹಾಗೂ ಈ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳುವ ಸಂಘ ಸಂಸ್ಥೆಗಳಿಗೂ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

2 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

3 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

3 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

3 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

3 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

3 hours ago