Categories: ಅಂಕಣಗಳು

ಹಿರಿಯರಿಗಾಗಿ ಹಲವು ಯೋಜನೆಗಳು

ಕೆಲ ಮೂಲಗಳಿಂದ ದೊರೆತ ಅಂಕಿ ಅಂಶಗಳ ಪ್ರಕಾರ 2050ರ ವೇಳೆಗೆ, ಹಿರಿಯ ನಾಗರಿಕರ ಸಂಖ್ಯೆಯು ಒಟ್ಟು ಜನಸಂಖ್ಯೆಯ ಕಾಲು ಭಾಗದಷ್ಟು ಇರುತ್ತದೆ ಎಂದು ಅಂದಾಜಿಸಲಾಗಿದೆ.

ನಿವೃತ್ತಿಯ ನಂತರ ಕುಟುಂಬದಲ್ಲಿ ಒಬ್ಬರ ಆದಾಯವು ಕಡಿಮೆಯಾಗುವುದರಿಂದ, ವೈದ್ಯಕೀಯ ಖರ್ಚು ವೆಚ್ಚಗಳನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಹಾಗಾಗಿ ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲೆಂದೇ ಭಾರತ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

ಹಿರಿಯ ನಾಗರಿಕರು ಮಾಡುವ ಹೂಡಿಕೆಗೆ ವಾರ್ಷಿಕ ಶೇ.8ರ ದರವನ್ನು ನೀಡುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಧಾನ ಮಂತ್ರಿ ವಯ ವಂದನಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ, ವಿಶೇಷ ವೈದ್ಯಕೀಯ ಆರೈಕೆಯನ್ನು ನೀಡುವ ಗರಿಷ್ಠ ಮೆಡಿಕ್ಲೈಮ್ ಯೋಜನೆಗಳನ್ನು ಆರಂಭಿಸಿದೆ. ಇದರಲ್ಲಿ ದೈಹಿಕ ನೆರವಿನ ಅಗತ್ಯವಿರುವ ಹಿರಿಯ ನಾಗರಿಕರಿಗಾಗಿ ರಾಷ್ಟ್ರೀಯ ವಯೋಶ್ರೀ ಯೋಜನೆ, ಹಿರಿಯ ನಾಗರಿಕರ ಕಲ್ಯಾಣ ನಿಧಿ ಮುಖ್ಯವಾದವುಗಳು.

ಅಂತೆಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅನುಪಮ ಸೇವೆ ಸಲ್ಲಿಸುವ ಹಿರಿಯ ನಾಗರಿಕರನ್ನು ಗುರುತಿಸಿ, ಗೌರವಿಸುವುದಕ್ಕಾಗಿ 2012ರಿಂದ ‘ವಯೋಶ್ರೇಷ್ಠ ಸಮ್ಹಾನ್‌’ ಪ್ರಶಸ್ತಿಯನ್ನು ನೀಡುತ್ತಿದೆ. ಕೇವಲ ಹಿರಿಯರಿಗೆ ಮಾತ್ರವಲ್ಲದೆ, ಹಿರಿಯ ನಾಗರಿಕರಿಗೆ ಸೇವೆ, ಸೌಲಭ್ಯಗಳನ್ನು ನೀಡುತ್ತಿರುವ ಜಿಲ್ಲಾ ಪಂಚಾಯಿತಿಗಳು ಹಾಗೂ ಈ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳುವ ಸಂಘ ಸಂಸ್ಥೆಗಳಿಗೂ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

18 mins ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

1 hour ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

2 hours ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

2 hours ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

3 hours ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

4 hours ago