ಕೆಲ ಮೂಲಗಳಿಂದ ದೊರೆತ ಅಂಕಿ ಅಂಶಗಳ ಪ್ರಕಾರ 2050ರ ವೇಳೆಗೆ, ಹಿರಿಯ ನಾಗರಿಕರ ಸಂಖ್ಯೆಯು ಒಟ್ಟು ಜನಸಂಖ್ಯೆಯ ಕಾಲು ಭಾಗದಷ್ಟು ಇರುತ್ತದೆ ಎಂದು ಅಂದಾಜಿಸಲಾಗಿದೆ.
ನಿವೃತ್ತಿಯ ನಂತರ ಕುಟುಂಬದಲ್ಲಿ ಒಬ್ಬರ ಆದಾಯವು ಕಡಿಮೆಯಾಗುವುದರಿಂದ, ವೈದ್ಯಕೀಯ ಖರ್ಚು ವೆಚ್ಚಗಳನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಹಾಗಾಗಿ ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲೆಂದೇ ಭಾರತ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.
ಹಿರಿಯ ನಾಗರಿಕರು ಮಾಡುವ ಹೂಡಿಕೆಗೆ ವಾರ್ಷಿಕ ಶೇ.8ರ ದರವನ್ನು ನೀಡುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಧಾನ ಮಂತ್ರಿ ವಯ ವಂದನಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ, ವಿಶೇಷ ವೈದ್ಯಕೀಯ ಆರೈಕೆಯನ್ನು ನೀಡುವ ಗರಿಷ್ಠ ಮೆಡಿಕ್ಲೈಮ್ ಯೋಜನೆಗಳನ್ನು ಆರಂಭಿಸಿದೆ. ಇದರಲ್ಲಿ ದೈಹಿಕ ನೆರವಿನ ಅಗತ್ಯವಿರುವ ಹಿರಿಯ ನಾಗರಿಕರಿಗಾಗಿ ರಾಷ್ಟ್ರೀಯ ವಯೋಶ್ರೀ ಯೋಜನೆ, ಹಿರಿಯ ನಾಗರಿಕರ ಕಲ್ಯಾಣ ನಿಧಿ ಮುಖ್ಯವಾದವುಗಳು.
ಅಂತೆಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅನುಪಮ ಸೇವೆ ಸಲ್ಲಿಸುವ ಹಿರಿಯ ನಾಗರಿಕರನ್ನು ಗುರುತಿಸಿ, ಗೌರವಿಸುವುದಕ್ಕಾಗಿ 2012ರಿಂದ ‘ವಯೋಶ್ರೇಷ್ಠ ಸಮ್ಹಾನ್’ ಪ್ರಶಸ್ತಿಯನ್ನು ನೀಡುತ್ತಿದೆ. ಕೇವಲ ಹಿರಿಯರಿಗೆ ಮಾತ್ರವಲ್ಲದೆ, ಹಿರಿಯ ನಾಗರಿಕರಿಗೆ ಸೇವೆ, ಸೌಲಭ್ಯಗಳನ್ನು ನೀಡುತ್ತಿರುವ ಜಿಲ್ಲಾ ಪಂಚಾಯಿತಿಗಳು ಹಾಗೂ ಈ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳುವ ಸಂಘ ಸಂಸ್ಥೆಗಳಿಗೂ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುತ್ತಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…