ಕೆಲ ಮೂಲಗಳಿಂದ ದೊರೆತ ಅಂಕಿ ಅಂಶಗಳ ಪ್ರಕಾರ 2050ರ ವೇಳೆಗೆ, ಹಿರಿಯ ನಾಗರಿಕರ ಸಂಖ್ಯೆಯು ಒಟ್ಟು ಜನಸಂಖ್ಯೆಯ ಕಾಲು ಭಾಗದಷ್ಟು ಇರುತ್ತದೆ ಎಂದು ಅಂದಾಜಿಸಲಾಗಿದೆ.
ನಿವೃತ್ತಿಯ ನಂತರ ಕುಟುಂಬದಲ್ಲಿ ಒಬ್ಬರ ಆದಾಯವು ಕಡಿಮೆಯಾಗುವುದರಿಂದ, ವೈದ್ಯಕೀಯ ಖರ್ಚು ವೆಚ್ಚಗಳನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಹಾಗಾಗಿ ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲೆಂದೇ ಭಾರತ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.
ಹಿರಿಯ ನಾಗರಿಕರು ಮಾಡುವ ಹೂಡಿಕೆಗೆ ವಾರ್ಷಿಕ ಶೇ.8ರ ದರವನ್ನು ನೀಡುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಧಾನ ಮಂತ್ರಿ ವಯ ವಂದನಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ, ವಿಶೇಷ ವೈದ್ಯಕೀಯ ಆರೈಕೆಯನ್ನು ನೀಡುವ ಗರಿಷ್ಠ ಮೆಡಿಕ್ಲೈಮ್ ಯೋಜನೆಗಳನ್ನು ಆರಂಭಿಸಿದೆ. ಇದರಲ್ಲಿ ದೈಹಿಕ ನೆರವಿನ ಅಗತ್ಯವಿರುವ ಹಿರಿಯ ನಾಗರಿಕರಿಗಾಗಿ ರಾಷ್ಟ್ರೀಯ ವಯೋಶ್ರೀ ಯೋಜನೆ, ಹಿರಿಯ ನಾಗರಿಕರ ಕಲ್ಯಾಣ ನಿಧಿ ಮುಖ್ಯವಾದವುಗಳು.
ಅಂತೆಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅನುಪಮ ಸೇವೆ ಸಲ್ಲಿಸುವ ಹಿರಿಯ ನಾಗರಿಕರನ್ನು ಗುರುತಿಸಿ, ಗೌರವಿಸುವುದಕ್ಕಾಗಿ 2012ರಿಂದ ‘ವಯೋಶ್ರೇಷ್ಠ ಸಮ್ಹಾನ್’ ಪ್ರಶಸ್ತಿಯನ್ನು ನೀಡುತ್ತಿದೆ. ಕೇವಲ ಹಿರಿಯರಿಗೆ ಮಾತ್ರವಲ್ಲದೆ, ಹಿರಿಯ ನಾಗರಿಕರಿಗೆ ಸೇವೆ, ಸೌಲಭ್ಯಗಳನ್ನು ನೀಡುತ್ತಿರುವ ಜಿಲ್ಲಾ ಪಂಚಾಯಿತಿಗಳು ಹಾಗೂ ಈ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳುವ ಸಂಘ ಸಂಸ್ಥೆಗಳಿಗೂ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುತ್ತಿದೆ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…