ಮಳೆ ಹನಿಗಳ ನಡುವೆ ಸೌಂದರ್ಯ ಇಮ್ಮಡಿಗೊಳಿಸುವ ಮಾನ್ಸೂನ್ ಔಟ್ಫಿಟ್ಸ್ !

– ಚೈತ್ರಾ ಎನ್ ಭವಾನಿ, ಲೈಫ್ ಸ್ಟೈಲ್ ಜರ್ನಲಿಸ್ಟ್

ಮಾನ್ಸೂನ್ ಬಂತಂದ್ರೆ ಎಲ್ಲೆಲ್ಲೂ ಹಸಿ ಹಸಿಯಾದ ವಾತಾವರಣ. ಮಳೆಯ ಈ ಸೌಂದರ್ಯದೊಂದಿಗೆ ನಾವು ಧರಿಸುವ ಉಡುಗೆಯೂ ಹೊಂದಿಕೊಂಡರೇ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ಬರುವುದರಲ್ಲಿ ಅನುಮಾನವೇ ಇಲ್ಲ. ಹಾಗಾದ್ರೆ ಮಳೆಗಾಲದಲ್ಲಿ ಯಾವೆಲ್ಲಾ ಔಟ್ಫಿಟ್ಗಳು ಸೌಂದರ್ಯ ಇಮ್ಮಡಿಗೊಳಿಸುತ್ತವೆ? ಈ ಎಲ್ಲದರ ಬಗ್ಗೆಯೂ ಒಂದಷ್ಟು ಮಾಹಿತಿ ಇಲ್ಲಿದೆ.

ಶಾರ್ಟ್ ಟಾಪ್ಸ್ ಮತ್ತು ಆ್ಯಂಕಲ್ ಲೆಂತ್ ಲೆಗ್ಗಿನ್ಸ್: ನೀವು ಟ್ರೆಡಿಷನಲ್ ಉಡುಗೆ ಇಷ್ಟಪಡುವವರಾಗಿದ್ದರೆ ಶಾರ್ಟ್ ಟಾಪ್ ಅಥವಾ ಕುರ್ತಿ ಧರಿಸಬಹುದು. ಇದಕ್ಕೆ ಆ?ಯಂಕಲ್ ಲೆಂತ್ ಲೆಗ್ಗಿನ್ಸ್ ಹೊಂದುತ್ತದೆ. ಆ್ಯಂಕಲ್ ಲೆಂತ್ ಲೆಗ್ಗಿನ್ಸ್ ಮಳೆ ನೀರಿನಿಂದ ರಸ್ತೆಯ ಮೇಲೆ ಹರಿಯುವ ಧೂಳು ಮಿಶ್ರಿತ ನೀರಿನಿಂದ ಬಟ್ಟೆ ಹಾಳಾಗಂದಂತೆ ಕಾಪಾಡುತ್ತದೆ.

ನೀ ಲೆಂತ್ ಸ್ಕರ್ಟ್ : ಪೆನ್ಸಿಲ್ ಕಟ್ ಅಥವಾ ಎ ಕಟ್ ನಂತಹ ಸ್ಕರ್ಟ್ ಮಳೆಗಾಲಕ್ಕೆ ಹೊಂದುತ್ತದೆ. ಇದಕ್ಕೆ ದೊಡ್ಡ ಸಾಕ್ಸ್ ಮತ್ತು ವಾಟರ್ ಪ್ರೂಫ್ ಶೂ ಬಳಸುವುದು ಸೂಕ್ತ. ಇದರಿಂದ ಮಳೆಗಾಲದಲ್ಲಿ ಪಾದಗಳ ರಕ್ಷಣೆಯಾಗುತ್ತದೆ.

ಬೇಸಿಕ್ ಜಂಪ್ ಸೂಟ್ : ಮಳೆಗಾಲದಲ್ಲಿ ಬೇಸಿಕ್ ಶಾರ್ಟ್ ಜಂಪ್ ಸೂಟ್ಗಳು ನಿಮ್ಮ ಅಂದವನ್ನು ಹೆಚ್ಚಿಸುತ್ತವೆ. ಮಳೆಗಾಲದ ಬಣ್ಣಗಳಾದ ನೀಲಿ, ಕೆಂಪು, ಹಳದಿ, ಬಿಳಿ ಬಣ್ಣದ ವಸ್ತ್ರಗಳು ಹೆಚ್ಚು ಆಕರ್ಷಕವಾಗಿ ಕಾಣುವುದಲ್ಲದೇ ನಿಮ್ಮ ಸೌಂದರ್ಯವನ್ನು ಇಮ್ಮಡಿ ಗೊಳಿಸುತ್ತದೆ.

ಪೋಲ್ಕಿ ಡಾಟ್ ಟಾಪ್ಸ್ ಅಥವಾ ಸ್ಯಾರಿ : ಪೋಲ್ಕಿ ಡಾಟ್ ಸೀರೆ, ಟಾಪ್ಸ್ ಮೋಡ ಮುಚ್ಚಿದ ವಾತಾವರಣಕ್ಕೆ ವಿಶೇಷ ಮೆರುಗು ನೀಡುತ್ತದೆ, ಅಲ್ಲದೇ ನಿಮ್ಮನ್ನು ಹೈಲೈಟ್ ಮಾಡುತ್ತದೆ.

ವಾಟರ್ ಪ್ರೂಫ್ ಶೂ ಮತ್ತು ಲಾಂಗ್ ಸಾಕ್ಸ್ : ಮಳೆಗಾಲದಲ್ಲಿ ವಾಟರ್ ಪ್ರೂಫ್ ಶೂ ಇರಲೇಬೇಕು. ಅಲ್ಲದೇ ಮಂಡಿಯವರೆಗೂ ಬರುವಂತಹ ಸಾಕ್ಸ್ಗಳನ್ನು ಧರಿಸಿದ್ರೆ ಕಾಲುಗಳ ರಕ್ಷಣೆಯಾಗುತ್ತದೆ. ಜೊತೆಗೆ ಹ್ಯಾಂಡ್ ಗ್ಲೌಸ್ ಮರೆಯಬೇಡಿ. ಜಾಕೆಟ್ಸ್ : ಟೀ ಶರ್ಟ್, ಜೀನ್ಸ್ ಏನೇ ಧರಿಸಿದ್ರೂ ವಾಟರ್ ಪ್ರೂಫ್ ಜಾಕೆಟ್ ಧರಿಸುವುದನ್ನು ಮರೆಯಬೇಡಿ. ಇದು ನಿಮ್ಮ ಲುಕ್ ಅನ್ನು ಬದಲಿಸುವುದರ ಜೊತೆಗೆ ಮಳೆಯಿಂದ ರಕ್ಷಣೆ ನೀಡುತ್ತದೆ.

andolana

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

5 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

9 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

9 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

9 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

9 hours ago