ಮಳೆ ಹನಿಗಳ ನಡುವೆ ಸೌಂದರ್ಯ ಇಮ್ಮಡಿಗೊಳಿಸುವ ಮಾನ್ಸೂನ್ ಔಟ್ಫಿಟ್ಸ್ !

– ಚೈತ್ರಾ ಎನ್ ಭವಾನಿ, ಲೈಫ್ ಸ್ಟೈಲ್ ಜರ್ನಲಿಸ್ಟ್

ಮಾನ್ಸೂನ್ ಬಂತಂದ್ರೆ ಎಲ್ಲೆಲ್ಲೂ ಹಸಿ ಹಸಿಯಾದ ವಾತಾವರಣ. ಮಳೆಯ ಈ ಸೌಂದರ್ಯದೊಂದಿಗೆ ನಾವು ಧರಿಸುವ ಉಡುಗೆಯೂ ಹೊಂದಿಕೊಂಡರೇ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ಬರುವುದರಲ್ಲಿ ಅನುಮಾನವೇ ಇಲ್ಲ. ಹಾಗಾದ್ರೆ ಮಳೆಗಾಲದಲ್ಲಿ ಯಾವೆಲ್ಲಾ ಔಟ್ಫಿಟ್ಗಳು ಸೌಂದರ್ಯ ಇಮ್ಮಡಿಗೊಳಿಸುತ್ತವೆ? ಈ ಎಲ್ಲದರ ಬಗ್ಗೆಯೂ ಒಂದಷ್ಟು ಮಾಹಿತಿ ಇಲ್ಲಿದೆ.

ಶಾರ್ಟ್ ಟಾಪ್ಸ್ ಮತ್ತು ಆ್ಯಂಕಲ್ ಲೆಂತ್ ಲೆಗ್ಗಿನ್ಸ್: ನೀವು ಟ್ರೆಡಿಷನಲ್ ಉಡುಗೆ ಇಷ್ಟಪಡುವವರಾಗಿದ್ದರೆ ಶಾರ್ಟ್ ಟಾಪ್ ಅಥವಾ ಕುರ್ತಿ ಧರಿಸಬಹುದು. ಇದಕ್ಕೆ ಆ?ಯಂಕಲ್ ಲೆಂತ್ ಲೆಗ್ಗಿನ್ಸ್ ಹೊಂದುತ್ತದೆ. ಆ್ಯಂಕಲ್ ಲೆಂತ್ ಲೆಗ್ಗಿನ್ಸ್ ಮಳೆ ನೀರಿನಿಂದ ರಸ್ತೆಯ ಮೇಲೆ ಹರಿಯುವ ಧೂಳು ಮಿಶ್ರಿತ ನೀರಿನಿಂದ ಬಟ್ಟೆ ಹಾಳಾಗಂದಂತೆ ಕಾಪಾಡುತ್ತದೆ.

ನೀ ಲೆಂತ್ ಸ್ಕರ್ಟ್ : ಪೆನ್ಸಿಲ್ ಕಟ್ ಅಥವಾ ಎ ಕಟ್ ನಂತಹ ಸ್ಕರ್ಟ್ ಮಳೆಗಾಲಕ್ಕೆ ಹೊಂದುತ್ತದೆ. ಇದಕ್ಕೆ ದೊಡ್ಡ ಸಾಕ್ಸ್ ಮತ್ತು ವಾಟರ್ ಪ್ರೂಫ್ ಶೂ ಬಳಸುವುದು ಸೂಕ್ತ. ಇದರಿಂದ ಮಳೆಗಾಲದಲ್ಲಿ ಪಾದಗಳ ರಕ್ಷಣೆಯಾಗುತ್ತದೆ.

ಬೇಸಿಕ್ ಜಂಪ್ ಸೂಟ್ : ಮಳೆಗಾಲದಲ್ಲಿ ಬೇಸಿಕ್ ಶಾರ್ಟ್ ಜಂಪ್ ಸೂಟ್ಗಳು ನಿಮ್ಮ ಅಂದವನ್ನು ಹೆಚ್ಚಿಸುತ್ತವೆ. ಮಳೆಗಾಲದ ಬಣ್ಣಗಳಾದ ನೀಲಿ, ಕೆಂಪು, ಹಳದಿ, ಬಿಳಿ ಬಣ್ಣದ ವಸ್ತ್ರಗಳು ಹೆಚ್ಚು ಆಕರ್ಷಕವಾಗಿ ಕಾಣುವುದಲ್ಲದೇ ನಿಮ್ಮ ಸೌಂದರ್ಯವನ್ನು ಇಮ್ಮಡಿ ಗೊಳಿಸುತ್ತದೆ.

ಪೋಲ್ಕಿ ಡಾಟ್ ಟಾಪ್ಸ್ ಅಥವಾ ಸ್ಯಾರಿ : ಪೋಲ್ಕಿ ಡಾಟ್ ಸೀರೆ, ಟಾಪ್ಸ್ ಮೋಡ ಮುಚ್ಚಿದ ವಾತಾವರಣಕ್ಕೆ ವಿಶೇಷ ಮೆರುಗು ನೀಡುತ್ತದೆ, ಅಲ್ಲದೇ ನಿಮ್ಮನ್ನು ಹೈಲೈಟ್ ಮಾಡುತ್ತದೆ.

ವಾಟರ್ ಪ್ರೂಫ್ ಶೂ ಮತ್ತು ಲಾಂಗ್ ಸಾಕ್ಸ್ : ಮಳೆಗಾಲದಲ್ಲಿ ವಾಟರ್ ಪ್ರೂಫ್ ಶೂ ಇರಲೇಬೇಕು. ಅಲ್ಲದೇ ಮಂಡಿಯವರೆಗೂ ಬರುವಂತಹ ಸಾಕ್ಸ್ಗಳನ್ನು ಧರಿಸಿದ್ರೆ ಕಾಲುಗಳ ರಕ್ಷಣೆಯಾಗುತ್ತದೆ. ಜೊತೆಗೆ ಹ್ಯಾಂಡ್ ಗ್ಲೌಸ್ ಮರೆಯಬೇಡಿ. ಜಾಕೆಟ್ಸ್ : ಟೀ ಶರ್ಟ್, ಜೀನ್ಸ್ ಏನೇ ಧರಿಸಿದ್ರೂ ವಾಟರ್ ಪ್ರೂಫ್ ಜಾಕೆಟ್ ಧರಿಸುವುದನ್ನು ಮರೆಯಬೇಡಿ. ಇದು ನಿಮ್ಮ ಲುಕ್ ಅನ್ನು ಬದಲಿಸುವುದರ ಜೊತೆಗೆ ಮಳೆಯಿಂದ ರಕ್ಷಣೆ ನೀಡುತ್ತದೆ.

andolana

Recent Posts

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

30 mins ago

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

56 mins ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

2 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

2 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

2 hours ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

2 hours ago