ಅಂಕಣಗಳು

ಸೀತೆ ಹುಟ್ಟಿದ ದಿನ ಹುಟ್ಟಿದ ನನ್ನ ಲಲಿತೆ

ಬೆ.ಸು.ಲಕ್ಷ್ಮೀನಾರಾಯಣ್

ಇಬ್ಬರೂ ಬೆಳೆದು ಬಂದ ವಾತಾವರಣ ಬೇರೆಯಾಗಿದ್ದರಿಂದ ಒಬ್ಬರಿಗೊಬ್ಬರು ಹೊಂದಿಕೊಳ್ಳುವಾಗ, ಬದುಕಿನ ವಾಸ್ತವ ಇಬ್ಬರಿಗೂ ಒಂದು ರೀತಿಯಲ್ಲಿ ಅರ್ಥವಾಗಲು ಒಂದು-ಒಂದೂವರೆ ವರ್ಷ ಬೇಕಾಯಿತು.

ನನ್ನ ಚಿಕ್ಕ ಕೆಲಸ ಸಂಬಳದ ಪಡುವಟ್ಟಲ್ಲಿ ಸಾಧಾರಣ-ಮಧ್ಯಮ-ವರ್ಗದ ಕುಟುಂಬದ ಆಚರಣೆಗಳನ್ನು, ಹಬ್ಬ, ಹರಿದಿನ, ತಿಥಿಗಳನ್ನು ನಿಭಾಯಿಸುತ್ತ ಮಕ್ಕಳನ್ನೂ ನೋಡಿಕೊಂಡದ್ದು ಲಲಿತಳೆ. ಚಿಕ್ಕ ಶಾಲೆಗಳಲ್ಲಿ ಮಕ್ಕಳನ್ನು ಓದಿಸಿದ್ವು. ಕಷ್ಟದ ಬದುಕಿನ ಚಿಂತೆ ಕಾಡದಂತೆ ನಮ್ಮ ಭಜನೆಯ ಹವ್ಯಾಸ, ಸ್ನೇಹಿತರ, ಬಂಧುಗಳ ಸಹವಾಸ ನಮ್ಮನ್ನು ಮುನ್ನಡೆಸಿತು. ಮಕ್ಕಳು ಅವರವರ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡು ಬೆಳೆದರು. ಚನ್ನಾಗಿ ಓದಿ ಒಳ್ಳೆಯ ಕೆಲಸದಲ್ಲಿದ್ದು ಚನ್ನಾಗಿ ಬದುಕುತ್ತಿದ್ದಾರೆ.

ತನ್ನ ತವರಿನಲ್ಲಿ ಒಬ್ಬಳೇ ಮಗಳೆಂದು ಮುಚ್ಚಟೆಯಿಂದ ಬೆಳೆದಿದ್ದ ನಗರದ ನಾಜೂಕುಗಳನ್ನು ನೋಡಿದ್ದ ಈ ವಿದ್ಯಾವಂತ ಹುಡುಗಿ, ನಮ್ಮ ಕೂಡುಕುಟುಂಬದ ಹಳ್ಳಿಮನೆಯಲ್ಲಿ, ಮಡಿಯಾಗಿದ್ದ ನನ್ನ ವಯಸ್ಸಾದ ತಾಯಿಯ ಜೊತೆಯಲ್ಲಿ ಏಗುತ್ತಾಳೋ ಇಲ್ಲವೋ ಎಂದು ಮೊದಲು ಭಯಪಟ್ಟಿದ್ದೆ. ಲಲಿತಾ ಎಲ್ಲ ರೀತಿಯ ಹೊಂದಾಣಿಕೆ ವಾಡಿಕೊಂಡು ನಮ್ಮನ್ನು ಇವತ್ತಿನ ಸುಖವಾದ ಸ್ಥಿತಿಗೆ ತಂದಿದ್ದಾಳೆ. ನನ್ನ ವುಂಸ್ಸಾದ ತಾಯಿುಂನ್ನು ಚೆನ್ನಾಗಿ ನೋಡಿಕೊಂಡಿದ್ದಳು.

ಲಲಿತಳ ತಂದೆ ಅವಳಿಗೆ ನೀನೂ ಸೀತೆ ಹುಟ್ಟಿದ ದಿನ ಹುಟ್ಟಿದವಳು ನಿನಗೆ ಕಷ್ಟದ ಬದುಕು ಎಂದು ಹೇಳಿದ್ದರಂತೆ. ಆ ರೀತಿಯ ತನ್ನ ಮನದ ಭಾರವನ್ನು ತಾನೇ ಹೊತ್ತು, ಹಲ್ಲು ಕಚ್ಚಿ ಬಂದ ಕಷ್ಟಗಳನ್ನು ತಡೆದುಕೊಂಡು, ಮಕ್ಕಳ ಏಳ್ಗೆೆಯೇ ತನ್ನ ಗುರಿ ಎಂದು ಸಂಸಾರವನ್ನು ನಡೆಸಿದಳು. ಆಗೀಗ ನಮ್ಮಲ್ಲಿ ಭಿನ್ನಾಭಿಪ್ರಾಯಗಳು ಇದ್ದರೂ ಅದು ಸಂಸಾರದ ಹದವನ್ನು ಕೆಡಿಸದ ಹಾಗೆ ನೋಡಿಕೊಂಡಳು. ಬೆಂಕಿಯಲ್ಲಿ ಪುಟವಿಟ್ಟರೆ ಚಿನ್ನ ಹೊಳಪು ಪಡೆಯುವಂತೆ ನಮ್ಮ ಕಷ್ಟಗಳ ಬೆಂಕಿಯಲ್ಲಿ ಹಾದು ಈಗ ನಾವು ಸಂತೋಷದ ಚಿನ್ನವನ್ನು ಧರಿಸಿದ್ದೇವೆ. 52 ವರ್ಷಗಳ ಕಾಲದ ದಾಂಪತ್ಯ ಜೀವನದ ಕಷ್ಟ ಕಾಲವನ್ನು ಲಲಿತ ಹೂಡಿದ ಸಹನೆ ಮತ್ತು ಧಾರಣೆಗಳ ಡೆಪಾಸಿಟ್ಟುಗಳ ಮೂಲಕ ಮುನ್ನಡೆಸಿ ಈಗ ಸಂತಸದ ಚಿನ್ನವನ್ನು ನಗದು ಮಾಡಿಕೊಳ್ಳುವ ಕಾಲದಲ್ಲಿದ್ದೇವೆ. ಈಗ ಮೊಮ್ಮಕ್ಕಳೊಂದಿಗೆ ಅವರು ಹೇಳಿಕೊಟ್ಟ ಉನೋ, ಇಸ್ಪೀಟು ಕಲಿತು, ಅವರಿಗೆ ಪಗಡೆ, ಚನ್ನೆಮಣೆ, ಚೌಕಾಬಾರ ಹೇಳಿಕೊಟ್ಟು ಸಂತೋಷದಿಂದ ಕಾಲ ಕಳೆಯುತ್ತಿದ್ದೇವೆ.

andolanait

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

10 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

10 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

10 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

10 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

10 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

10 hours ago