– ಡಾ.ಭಾಗ್ಯವತಿ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮನೋವೈದ್ಯಕೀಯ ವಿಭಾಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ.
ವಿಶ್ವ ಆಟಿಸಂ ಜಾಗೃತಿ ದಿನವು ವಾರ್ಷಿಕವಾಗಿ ಏಪ್ರಿಲ್ 2ರಂದು ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವಾಗಿದ್ದು, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಪ್ರಪಂಚದಾದ್ಯಂತ ಆಟಿಸಂ ವ್ಯಕ್ತಿಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುತ್ತವೆ.
ವಿಶ್ವ ಆಟಿಸಂ ದಿನವು ಕೇವಲ ಏಳು ಅಧಿಕೃತ ಆರೋಗ್ಯ-ನಿರ್ದಿಷ್ಟ ವಿಶ್ವಸಂಸ್ಥೆಯ ದಿನಗಳಲ್ಲಿ ಒಂದಾಗಿದೆ. ಮಕ್ಕಳಲ್ಲಿಯೂ ಆಟಿಸಂ ಕಂಡು ಬರುತ್ತದೆ. ವಿಶ್ವ ಆಟಿಸಂ ಜಾಗೃತಿ ದಿನ ಇದನ್ನು 2007ರಲ್ಲಿ ವಿಶ್ವಸಂಸ್ಥೆ ಅಧಿಕೃತವಾಗಿ ಘೋಷಿಸಿತು. ಈ ದಿನದ ಉದ್ದೇಶ ಆಟಿಸಂ ಇರುವ ವ್ಯಕ್ತಿಗಳಿಗೆ ಸಮಾನ ಹಕ್ಕುಗಳಿಗಾಗಿ ಹೋರಾಡುವುದು ಮತ್ತು ಸಾಮಾಜಿಕ ಸ್ವೀಕೃತಿಯನ್ನು ಹೆಚ್ಚಿಸಿ ಅರಿವು ಮೂಡಿಸುವುದಾಗಿದೆ.
ಆಟಿಸಂ ಒಂದು ನ್ಯೂರೋಡೆವಲಪ್ ಮೆಂಟ್ (ನರಗಳ ಬೆಳವಣಿಗೆ )ಸಂಬಂಧಿತ ವೈಶಿಷ್ಟವಾಗಿದೆ. ಇದು ಮಗು ಬಾಲ್ಯದಲ್ಲಿ ಬೆಳೆಯುವ ಸಂದರ್ಭದಲ್ಲಿ ಕಂಡುಬರುವ ಮೆದುಳಿನ ಬೆಳವಣಿಗೆಯಲ್ಲಿ ಆಗುವ ವ್ಯತ್ಯಾಸದಿಂದಾಗಿ ಅದರ ಸಂವಹನ, ಸಾಮಾಜಿಕ ಪರಸ್ಪರತೆ, ವರ್ತನೆ ಮತ್ತು ಕಲಿಕೆ ಹಾದಿಗಳ ಮೇಲೆ ಪರಿಣಾಮ ಬೀರುತ್ತದೆ.
ಪ್ರತಿ ಮಗುವಿನ ಆಟಿಸಂ ಅನುಭವ ವಿಭಿನ್ನವಾಗಿರಬಹುದು. ಆದರೆ, ಸಾಮಾನ್ಯವಾಗಿ ಕಂಡುಬರುವ ಕೆಲವು ಲಕ್ಷಣಗಳನ್ನು ನಾವು ಕಾಣಬಹುದು.
ಆಟಿಸಂ ಇರುವ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ಶಿಕ್ಷಣ ಕೊಡಿಸಬಹುದು. ಆದರೆ, ಕೆಲವು ಮಕ್ಕಳಿಗೆ ವಿಶೇಷ ಶಿಕ್ಷಣದ ಅಗತ್ಯವಿರುತ್ತದೆ. ಪೋಷಕರು ಮಕ್ಕಳು ಹೇಗೆ ಕಲಿಯುತ್ತಾರೆ ಎಂಬುದನ್ನು ಅರ್ಥೈಸಿಕೊಂಡು ಸಹಾಯ ಮಾಡಬೇಕು. ಆಟಿಸಂ ಇರುವ ಮಕ್ಕಳಿಗೆ ಪ್ರೀತಿ, ಸಹಾನುಭೂತಿ ಮತ್ತು ಸಮರ್ಥ ಬೆಂಬಲ ನೀಡುವುದು ಅತ್ಯಗತ್ಯ. ಹಾಗೆಯೇ ಅವರ ಸಾಮರ್ಥ್ಯಗಳನ್ನು ಗುರುತಿಸಿ ಅವರಿಗೆ ಬೇಕಾದ ಪ್ರೋತ್ಸಾಹವನ್ನು ನೀಡುವುದು ಪೋಷಕರ ಜವಾಬ್ದಾರಿಯಾಗಿದೆ.
ಕುಟುಂಬದ ಸದಸ್ಯರು ಶಿಕ್ಷಕರು ಮತ್ತು ಸ್ನೇಹಿತರು ಇಂತಹ ಮಕ್ಕಳಿಗೆ ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಿಕೊಡಬೇಕು. ಪೋಷಕರು ಸಹಾಯಕರ ಗುಂಪುಗಳಲ್ಲಿ ಸೇರಿಕೊಂಡು ಅನುಭವವನ್ನು ಹಂಚಿಕೊಳ್ಳಬೇಕು. ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದ್ದು ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದೆ ಸಮಾಜದಲ್ಲಿ ಅರ್ಥ ಮಾಡಿಕೊಂಡು ಮುನ್ನಡೆಯಬೇಕು ಆಟಿಸಂ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡು ಜಾಗೃತಿ ಮೂಡಿಸಬೇಕಿದೆ.
ಆಟಿಸಂ ಮಕ್ಕಳ ಪೋಷಕರು ಏನು ಮಾಡಬೇಕು?
ಸಂವಹನ ಸಮಸ್ಯೆಗಳು
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…