ಅಂಕಣಗಳು

ಕೋಟ್ಯಂತರ ಮನಸ್ಸುಗಳಲ್ಲಿ ನೆಲೆಯಾಗಿರುವ ರಾಜಶೇಖರ ಕೋಟಿ

ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದರು. ಪ್ರತಿಷ್ಠಿತ ಎನ್‌ಟಿಎಂ ಶಾಲೆ ಉಳಿಸಲು ನಡೆದ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು.

ಇದಲ್ಲದೆ, ಗುಜರಾತ್‌ನ ಕಲ್‌ನಲ್ಲಿ ಸಂಭವಿಸಿದ ಭೂಕಂಪ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪತ್ರಿಕೆ ಮೂಲಕ ದೇಣಿಗೆ ಸಂಗ್ರಹಿಸಿದರು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸಭೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಧಾವಿಸುವ ಮೂಲಕ ಕೋಟಿ ಹೃದಯವೈಶಾಲ್ಯತೆ ಮೆರೆದಿದ್ದರು. ಎಂ.ಜಿ.ರಸ್ತೆ ಬದಿಯಲ್ಲಿ ಬಡ ವ್ಯಾಪಾರಿಗಳಿಗೆ ಮಾರುಕಟ್ಟೆಗೆ ಜಾಗ ಒದಗಿಸಲು ಕೂಡ ಕೋಟಿಯವರು ಸ್ವಂತ ಖರ್ಚಿನಲ್ಲಿ ಹೋರಾಟ ನಡೆಸಿದ್ದರು. ಸಮಾಜ ಘಾತುಕರ ದುಷ್ಕೃತ್ಯದಿಂದ ಸಂತ್ರಸ್ತರಾದ ಹೆಣ್ಣುಮಕ್ಕಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಒಡನಾಡಿ ಸೇವಾ ಸಂಸ್ಥೆ ಹಾಗೂ ಶಕ್ತಿಧಾಮಕ್ಕೂ ರಾಜಶೇಖರ ಕೋಟಿ ಅವರ ಪ್ರೋತ್ಸಾಹ ಅಗಣಿತವಾಗಿತ್ತು. ಮೈಸೂರು ಆಟೋರಿಕ್ಷಾ ಚಾಲಕರ ಸಹಕಾರ ಸಂಘ ಸ್ಥಾಪನೆಯಲ್ಲಿ ಕೋಟಿ ಅವರ ಕೊಡುಗೆ ಸಾಕಷ್ಟಿದೆ. ಆಟೋರಿಕ್ಷಾ ಚಾಲಕರು ಮಿತಿಮೀರಿದ ಬಡ್ಡಿದರದಲ್ಲಿ ಸಾಲ ಮಾಡುವುದನ್ನು ತಪ್ಪಿಸುವುದಕ್ಕಾಗಿ ಕೋಟಿ ಅವರು ಸಂಘ ಹುಟ್ಟುಹಾಕಲು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಿದ್ದರು. ಬಹುತೇಕ ಸಮಾಜದ ಎಲ್ಲ ಸ್ತರದ ಜನರು, ಮಕ್ಕಳ ಏಳಿಗೆಗಾಗಿ ಶ್ರಮಿಸಿದ ಕೋಟಿ ಅವರ 6ನೇ ವರ್ಷದ ಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಹಲವು ಸಂಘ- ಸಂಸ್ಥೆಗಳು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಸ್ಮರಿಸಿದವು.

ಅರ್ಧ ಶತಮಾನ ದಾಟಿ ಮುನ್ನಡೆದಿರುವ ‘ಆಂದೋಲನ’ ದಿನಪತ್ರಿಕೆಯು ಆರಂಭವಾದಾಗಿನಿಂದಲೂ ಸಮಾಜವಾದ, ಸಮತಾವಾದದ ಮೂಸೆಯಲ್ಲಿಯೇ ಬೆಳೆದು ಬಂದಿದೆ. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ಅಕ್ಷರಶಃ ನೊಂದವರು, ದಮನಿತರು, ಶೋಷಿತರಿಗೆ ಹೆಗಲು ನೀಡಿ ಮೇಲೆತ್ತಲು ಪತ್ರಿಕೆಯ ಮೂಲಕ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಭಾಷೆ, ನೆಲ, ಜಲಕ್ಕೆ ಧಕ್ಕೆ ಒದಗಿದಂತಹ ಸಂದರ್ಭಗಳಲ್ಲಿ ಪತ್ರಿಕೋದ್ಯಮದ ಮೂಲಕ ತಕ್ಕ ಉತ್ತರ ನೀಡಿದ ಕೋಟಿ ಅವರ ಸೇವೆ ಅವಿಸ್ಮರಣೀಯ. ಅಂತಹ ಕೋಟಿ ಅವರು ಭೌತಿಕವಾಗಿ ಮರೆಯಾಗಿ (ನ.23)ಕ್ಕೆ 6 ವರ್ಷಗಳು ಗತಿಸಿ ಹೋಗಿವೆ.

lokesh

Recent Posts

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

46 mins ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

50 mins ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

52 mins ago

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…

54 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

4 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

4 hours ago