ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದರು. ಪ್ರತಿಷ್ಠಿತ ಎನ್ಟಿಎಂ ಶಾಲೆ ಉಳಿಸಲು ನಡೆದ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು.
ಇದಲ್ಲದೆ, ಗುಜರಾತ್ನ ಕಲ್ನಲ್ಲಿ ಸಂಭವಿಸಿದ ಭೂಕಂಪ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪತ್ರಿಕೆ ಮೂಲಕ ದೇಣಿಗೆ ಸಂಗ್ರಹಿಸಿದರು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸಭೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಧಾವಿಸುವ ಮೂಲಕ ಕೋಟಿ ಹೃದಯವೈಶಾಲ್ಯತೆ ಮೆರೆದಿದ್ದರು. ಎಂ.ಜಿ.ರಸ್ತೆ ಬದಿಯಲ್ಲಿ ಬಡ ವ್ಯಾಪಾರಿಗಳಿಗೆ ಮಾರುಕಟ್ಟೆಗೆ ಜಾಗ ಒದಗಿಸಲು ಕೂಡ ಕೋಟಿಯವರು ಸ್ವಂತ ಖರ್ಚಿನಲ್ಲಿ ಹೋರಾಟ ನಡೆಸಿದ್ದರು. ಸಮಾಜ ಘಾತುಕರ ದುಷ್ಕೃತ್ಯದಿಂದ ಸಂತ್ರಸ್ತರಾದ ಹೆಣ್ಣುಮಕ್ಕಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಒಡನಾಡಿ ಸೇವಾ ಸಂಸ್ಥೆ ಹಾಗೂ ಶಕ್ತಿಧಾಮಕ್ಕೂ ರಾಜಶೇಖರ ಕೋಟಿ ಅವರ ಪ್ರೋತ್ಸಾಹ ಅಗಣಿತವಾಗಿತ್ತು. ಮೈಸೂರು ಆಟೋರಿಕ್ಷಾ ಚಾಲಕರ ಸಹಕಾರ ಸಂಘ ಸ್ಥಾಪನೆಯಲ್ಲಿ ಕೋಟಿ ಅವರ ಕೊಡುಗೆ ಸಾಕಷ್ಟಿದೆ. ಆಟೋರಿಕ್ಷಾ ಚಾಲಕರು ಮಿತಿಮೀರಿದ ಬಡ್ಡಿದರದಲ್ಲಿ ಸಾಲ ಮಾಡುವುದನ್ನು ತಪ್ಪಿಸುವುದಕ್ಕಾಗಿ ಕೋಟಿ ಅವರು ಸಂಘ ಹುಟ್ಟುಹಾಕಲು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಿದ್ದರು. ಬಹುತೇಕ ಸಮಾಜದ ಎಲ್ಲ ಸ್ತರದ ಜನರು, ಮಕ್ಕಳ ಏಳಿಗೆಗಾಗಿ ಶ್ರಮಿಸಿದ ಕೋಟಿ ಅವರ 6ನೇ ವರ್ಷದ ಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಹಲವು ಸಂಘ- ಸಂಸ್ಥೆಗಳು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಸ್ಮರಿಸಿದವು.
ಅರ್ಧ ಶತಮಾನ ದಾಟಿ ಮುನ್ನಡೆದಿರುವ ‘ಆಂದೋಲನ’ ದಿನಪತ್ರಿಕೆಯು ಆರಂಭವಾದಾಗಿನಿಂದಲೂ ಸಮಾಜವಾದ, ಸಮತಾವಾದದ ಮೂಸೆಯಲ್ಲಿಯೇ ಬೆಳೆದು ಬಂದಿದೆ. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ಅಕ್ಷರಶಃ ನೊಂದವರು, ದಮನಿತರು, ಶೋಷಿತರಿಗೆ ಹೆಗಲು ನೀಡಿ ಮೇಲೆತ್ತಲು ಪತ್ರಿಕೆಯ ಮೂಲಕ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಭಾಷೆ, ನೆಲ, ಜಲಕ್ಕೆ ಧಕ್ಕೆ ಒದಗಿದಂತಹ ಸಂದರ್ಭಗಳಲ್ಲಿ ಪತ್ರಿಕೋದ್ಯಮದ ಮೂಲಕ ತಕ್ಕ ಉತ್ತರ ನೀಡಿದ ಕೋಟಿ ಅವರ ಸೇವೆ ಅವಿಸ್ಮರಣೀಯ. ಅಂತಹ ಕೋಟಿ ಅವರು ಭೌತಿಕವಾಗಿ ಮರೆಯಾಗಿ (ನ.23)ಕ್ಕೆ 6 ವರ್ಷಗಳು ಗತಿಸಿ ಹೋಗಿವೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…