ಅಂಕಣಗಳು

ಕೋಟ್ಯಂತರ ಮನಸ್ಸುಗಳಲ್ಲಿ ನೆಲೆಯಾಗಿರುವ ರಾಜಶೇಖರ ಕೋಟಿ

ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದರು. ಪ್ರತಿಷ್ಠಿತ ಎನ್‌ಟಿಎಂ ಶಾಲೆ ಉಳಿಸಲು ನಡೆದ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು.

ಇದಲ್ಲದೆ, ಗುಜರಾತ್‌ನ ಕಲ್‌ನಲ್ಲಿ ಸಂಭವಿಸಿದ ಭೂಕಂಪ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪತ್ರಿಕೆ ಮೂಲಕ ದೇಣಿಗೆ ಸಂಗ್ರಹಿಸಿದರು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸಭೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಧಾವಿಸುವ ಮೂಲಕ ಕೋಟಿ ಹೃದಯವೈಶಾಲ್ಯತೆ ಮೆರೆದಿದ್ದರು. ಎಂ.ಜಿ.ರಸ್ತೆ ಬದಿಯಲ್ಲಿ ಬಡ ವ್ಯಾಪಾರಿಗಳಿಗೆ ಮಾರುಕಟ್ಟೆಗೆ ಜಾಗ ಒದಗಿಸಲು ಕೂಡ ಕೋಟಿಯವರು ಸ್ವಂತ ಖರ್ಚಿನಲ್ಲಿ ಹೋರಾಟ ನಡೆಸಿದ್ದರು. ಸಮಾಜ ಘಾತುಕರ ದುಷ್ಕೃತ್ಯದಿಂದ ಸಂತ್ರಸ್ತರಾದ ಹೆಣ್ಣುಮಕ್ಕಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಒಡನಾಡಿ ಸೇವಾ ಸಂಸ್ಥೆ ಹಾಗೂ ಶಕ್ತಿಧಾಮಕ್ಕೂ ರಾಜಶೇಖರ ಕೋಟಿ ಅವರ ಪ್ರೋತ್ಸಾಹ ಅಗಣಿತವಾಗಿತ್ತು. ಮೈಸೂರು ಆಟೋರಿಕ್ಷಾ ಚಾಲಕರ ಸಹಕಾರ ಸಂಘ ಸ್ಥಾಪನೆಯಲ್ಲಿ ಕೋಟಿ ಅವರ ಕೊಡುಗೆ ಸಾಕಷ್ಟಿದೆ. ಆಟೋರಿಕ್ಷಾ ಚಾಲಕರು ಮಿತಿಮೀರಿದ ಬಡ್ಡಿದರದಲ್ಲಿ ಸಾಲ ಮಾಡುವುದನ್ನು ತಪ್ಪಿಸುವುದಕ್ಕಾಗಿ ಕೋಟಿ ಅವರು ಸಂಘ ಹುಟ್ಟುಹಾಕಲು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಿದ್ದರು. ಬಹುತೇಕ ಸಮಾಜದ ಎಲ್ಲ ಸ್ತರದ ಜನರು, ಮಕ್ಕಳ ಏಳಿಗೆಗಾಗಿ ಶ್ರಮಿಸಿದ ಕೋಟಿ ಅವರ 6ನೇ ವರ್ಷದ ಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಹಲವು ಸಂಘ- ಸಂಸ್ಥೆಗಳು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಸ್ಮರಿಸಿದವು.

ಅರ್ಧ ಶತಮಾನ ದಾಟಿ ಮುನ್ನಡೆದಿರುವ ‘ಆಂದೋಲನ’ ದಿನಪತ್ರಿಕೆಯು ಆರಂಭವಾದಾಗಿನಿಂದಲೂ ಸಮಾಜವಾದ, ಸಮತಾವಾದದ ಮೂಸೆಯಲ್ಲಿಯೇ ಬೆಳೆದು ಬಂದಿದೆ. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ಅಕ್ಷರಶಃ ನೊಂದವರು, ದಮನಿತರು, ಶೋಷಿತರಿಗೆ ಹೆಗಲು ನೀಡಿ ಮೇಲೆತ್ತಲು ಪತ್ರಿಕೆಯ ಮೂಲಕ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಭಾಷೆ, ನೆಲ, ಜಲಕ್ಕೆ ಧಕ್ಕೆ ಒದಗಿದಂತಹ ಸಂದರ್ಭಗಳಲ್ಲಿ ಪತ್ರಿಕೋದ್ಯಮದ ಮೂಲಕ ತಕ್ಕ ಉತ್ತರ ನೀಡಿದ ಕೋಟಿ ಅವರ ಸೇವೆ ಅವಿಸ್ಮರಣೀಯ. ಅಂತಹ ಕೋಟಿ ಅವರು ಭೌತಿಕವಾಗಿ ಮರೆಯಾಗಿ (ನ.23)ಕ್ಕೆ 6 ವರ್ಷಗಳು ಗತಿಸಿ ಹೋಗಿವೆ.

lokesh

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

2 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

3 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

3 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

4 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

6 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

7 hours ago