ಅಂಕಣಗಳು

ಕೋಟ್ಯಂತರ ಮನಸ್ಸುಗಳಲ್ಲಿ ನೆಲೆಯಾಗಿರುವ ರಾಜಶೇಖರ ಕೋಟಿ

ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದರು. ಪ್ರತಿಷ್ಠಿತ ಎನ್‌ಟಿಎಂ ಶಾಲೆ ಉಳಿಸಲು ನಡೆದ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು.

ಇದಲ್ಲದೆ, ಗುಜರಾತ್‌ನ ಕಲ್‌ನಲ್ಲಿ ಸಂಭವಿಸಿದ ಭೂಕಂಪ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪತ್ರಿಕೆ ಮೂಲಕ ದೇಣಿಗೆ ಸಂಗ್ರಹಿಸಿದರು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸಭೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಧಾವಿಸುವ ಮೂಲಕ ಕೋಟಿ ಹೃದಯವೈಶಾಲ್ಯತೆ ಮೆರೆದಿದ್ದರು. ಎಂ.ಜಿ.ರಸ್ತೆ ಬದಿಯಲ್ಲಿ ಬಡ ವ್ಯಾಪಾರಿಗಳಿಗೆ ಮಾರುಕಟ್ಟೆಗೆ ಜಾಗ ಒದಗಿಸಲು ಕೂಡ ಕೋಟಿಯವರು ಸ್ವಂತ ಖರ್ಚಿನಲ್ಲಿ ಹೋರಾಟ ನಡೆಸಿದ್ದರು. ಸಮಾಜ ಘಾತುಕರ ದುಷ್ಕೃತ್ಯದಿಂದ ಸಂತ್ರಸ್ತರಾದ ಹೆಣ್ಣುಮಕ್ಕಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಒಡನಾಡಿ ಸೇವಾ ಸಂಸ್ಥೆ ಹಾಗೂ ಶಕ್ತಿಧಾಮಕ್ಕೂ ರಾಜಶೇಖರ ಕೋಟಿ ಅವರ ಪ್ರೋತ್ಸಾಹ ಅಗಣಿತವಾಗಿತ್ತು. ಮೈಸೂರು ಆಟೋರಿಕ್ಷಾ ಚಾಲಕರ ಸಹಕಾರ ಸಂಘ ಸ್ಥಾಪನೆಯಲ್ಲಿ ಕೋಟಿ ಅವರ ಕೊಡುಗೆ ಸಾಕಷ್ಟಿದೆ. ಆಟೋರಿಕ್ಷಾ ಚಾಲಕರು ಮಿತಿಮೀರಿದ ಬಡ್ಡಿದರದಲ್ಲಿ ಸಾಲ ಮಾಡುವುದನ್ನು ತಪ್ಪಿಸುವುದಕ್ಕಾಗಿ ಕೋಟಿ ಅವರು ಸಂಘ ಹುಟ್ಟುಹಾಕಲು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಿದ್ದರು. ಬಹುತೇಕ ಸಮಾಜದ ಎಲ್ಲ ಸ್ತರದ ಜನರು, ಮಕ್ಕಳ ಏಳಿಗೆಗಾಗಿ ಶ್ರಮಿಸಿದ ಕೋಟಿ ಅವರ 6ನೇ ವರ್ಷದ ಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಹಲವು ಸಂಘ- ಸಂಸ್ಥೆಗಳು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಸ್ಮರಿಸಿದವು.

ಅರ್ಧ ಶತಮಾನ ದಾಟಿ ಮುನ್ನಡೆದಿರುವ ‘ಆಂದೋಲನ’ ದಿನಪತ್ರಿಕೆಯು ಆರಂಭವಾದಾಗಿನಿಂದಲೂ ಸಮಾಜವಾದ, ಸಮತಾವಾದದ ಮೂಸೆಯಲ್ಲಿಯೇ ಬೆಳೆದು ಬಂದಿದೆ. ‘ಆಂದೋಲನ’ದ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ಅಕ್ಷರಶಃ ನೊಂದವರು, ದಮನಿತರು, ಶೋಷಿತರಿಗೆ ಹೆಗಲು ನೀಡಿ ಮೇಲೆತ್ತಲು ಪತ್ರಿಕೆಯ ಮೂಲಕ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಭಾಷೆ, ನೆಲ, ಜಲಕ್ಕೆ ಧಕ್ಕೆ ಒದಗಿದಂತಹ ಸಂದರ್ಭಗಳಲ್ಲಿ ಪತ್ರಿಕೋದ್ಯಮದ ಮೂಲಕ ತಕ್ಕ ಉತ್ತರ ನೀಡಿದ ಕೋಟಿ ಅವರ ಸೇವೆ ಅವಿಸ್ಮರಣೀಯ. ಅಂತಹ ಕೋಟಿ ಅವರು ಭೌತಿಕವಾಗಿ ಮರೆಯಾಗಿ (ನ.23)ಕ್ಕೆ 6 ವರ್ಷಗಳು ಗತಿಸಿ ಹೋಗಿವೆ.

lokesh

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

49 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago