ಅಂಕಣಗಳು

ರಂಜನಿ ರಾಘವನ್ ರಂಗನಟಿ, ಸಿನೆಮಾ ತಾರೆ, ಕವಯಿತ್ರಿ

• ಪ್ರಶಾಂತ್ ಎಸ್.

ರಂಗಭೂಮಿ ಕಲಾವಿದೆಯಾಗಿ ‘ಪುಟ್ಟಗೌರಿ ಮದುವೆ’ ಎಂಬ ಕಿರುತೆರೆ ಧಾರಾವಾಹಿಯ ಮೂಲ ಗೌರಿಯಾಗಿ ಕರುನಾಡಿನ ಮನೆ ಮಾತಾಗಿದ್ದ ರಂಜನಿ ರಾಘವನ್ ತಮ್ಮ ನಟನೆಯ ಮೂಲಕವೇ ಜನಪ್ರಿಯತೆ ಗಿಟ್ಟಿಸಿಕೊಂಡ ಬೆಡಗಿ. ಇತ್ತೀಚೆಗೆ ತೆರೆಕಂಡ ‘ಕನ್ನಡತಿ’ ಧಾರಾವಾಹಿಯ ಭುವಿ ಅಲಿಯಾಸ್ ಸೌಪರ್ಣಿಕಾ ಪಾತ್ರದಲ್ಲಿ ರಂಜನಿ ರಾಘವನ್ ಮಿಂಚಿದ್ದಾರೆ.

ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಬೇಕು ಎಂಬುದು ರಂಜನಿ ರಾಘವನ್‌ ರವರ ಮನದ ಆಶಯ. ಅದರಂತೆ ಈಗ ಅವರ ನಟನಾ ಪ್ರತಿಭೆಗೆ ಪ್ರತಿಫಲವೆಂಬಂತೆ ಇದೀಗ ಅವರ ಅಭಿನಯದ ಮೂರು ಸಿನಿಮಾಗಳು ಸೆಟ್ಟೇರಲು ಸಿದ್ದವಾಗುತ್ತಿವೆ. ‘ಸತ್ಯಂ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅವರು ತಮ್ಮ ಅನುಭವದ ಬಗ್ಗೆ ‘ಆಂದೋಲನ’ ಪತ್ರಿಕೆಯೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

ಸಂತೋಷ್ ಬಾಲರಾಜ್ ನಾಯಕನಾಗಿ ಅಭಿನಯಿಸುತ್ತಿರುವ ‘ಸತ್ಯಂ’ ಒಂದು ಫ್ಯಾಮಿಲಿ ಎಂಟರ್ ಟೇನರ್ ಹಾಗೂ ಮಾಸ್ ಮತ್ತು ಕ್ಲಾಸ್ ಸಿನಿಮಾ ಆಗಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡುವ ಹಾಗೆ ಮೂಡಿಬಂದಿದ್ದು, ಇದರ ಹಾಡುಗಳೂ ಸುಮಧುರವಾಗಿ ಮೂಡಿಬಂದಿವೆ ಎನ್ನುತ್ತಾರೆ ರಂಜನಿ ರಾಘವನ್‌.

ನನಗೆ ಕಥೆಯೇ ಮುಖ್ಯ: ಜನ ನನ್ನನ್ನು ತಮ್ಮ ಮನೆ ಮಗಳಾಗಿ ನೋಡುತ್ತಿದ್ದಾರೆ. ಹಾಗಾಗಿ ನನ್ನ ಪಾತ್ರಗಳ ಆಯ್ಕೆ ಮುಖ್ಯವಾಗಿರುತ್ತದೆ. ನಾನು ಕಥೆಗೆ ಪ್ರಾಮುಖ್ಯತೆ ಕೊಡುತ್ತೇನೆ. ನನ್ನ ಪಾತ್ರ ಮಲಯಾಳಂನಲ್ಲಿ ಸಾಯಿ ಪಲ್ಲವಿ ಒಪ್ಪಿಕೊಳ್ಳುವ ಸಿನಿಮಾದ ರೀತಿ ಇರುತ್ತದೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿನ ನನ್ನ ಪಾತ್ರಗಳೂ ಹಾಗೆಯೇ ಇವೆ. ಪಕ್ಕದ ಮನೆಯ ಹುಡುಗಿ ಎನ್ನುವ ಭಾವನೆ ಮೂಡಿಸುವ ಆಪ್ತವಾಗುವಂಥ ಪಾತ್ರಗಳು ನನ್ನ ಹೆಚ್ಚಿನ ಆಯ್ಕೆಯಾಗಿರುತ್ತವೆ.

ಸಿನಿಮಾದತ್ತ ಗಮನ: ಕನ್ನಡತಿ ಧಾರಾವಾಹಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ರಂಜನಿ ಅವರು ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದವರು. ಆದರೆ ಸಿನಿಮಾ ಬಗ್ಗೆ ಒಂದಷ್ಟು ಕನಸುಗಳನ್ನು ಹೊಂದಿರುವ ಅವರು ಸಿನಿಮಾಗಳಲ್ಲಿಯೂ ಸಾಕಷ್ಟು ಉತ್ತಮ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ.

‘ಸತ್ಯಂ’ ಸಿನಿಮಾ ಒಂದು ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿದ್ದು, ಇದರಲ್ಲಿ ಮಾಸ್ ಮತ್ತು ಕ್ಲಾಸ್ ಎಲ್ಲವೂ ಇದೆ. ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಈ ಸಿನಿಮಾದ ಗೀತಾ ಎನ್ನುವ ಪಾತ್ರ ನನಗೆ ಬಹಳ ಖುಷಿ ಕೊಟ್ಟಿದೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಇದರ ಹಾಡುಗಳು ಸಹ ಬಹಳ ಚೆನ್ನಾಗಿವೆ
-ರಂಜನಿ ರಾಘವನ್
Prashanthsmysore5@gmail.com

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

7 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

18 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

37 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

59 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago