ಅಂಕಣಗಳು

ರಂಜನಿ ರಾಘವನ್ ರಂಗನಟಿ, ಸಿನೆಮಾ ತಾರೆ, ಕವಯಿತ್ರಿ

• ಪ್ರಶಾಂತ್ ಎಸ್.

ರಂಗಭೂಮಿ ಕಲಾವಿದೆಯಾಗಿ ‘ಪುಟ್ಟಗೌರಿ ಮದುವೆ’ ಎಂಬ ಕಿರುತೆರೆ ಧಾರಾವಾಹಿಯ ಮೂಲ ಗೌರಿಯಾಗಿ ಕರುನಾಡಿನ ಮನೆ ಮಾತಾಗಿದ್ದ ರಂಜನಿ ರಾಘವನ್ ತಮ್ಮ ನಟನೆಯ ಮೂಲಕವೇ ಜನಪ್ರಿಯತೆ ಗಿಟ್ಟಿಸಿಕೊಂಡ ಬೆಡಗಿ. ಇತ್ತೀಚೆಗೆ ತೆರೆಕಂಡ ‘ಕನ್ನಡತಿ’ ಧಾರಾವಾಹಿಯ ಭುವಿ ಅಲಿಯಾಸ್ ಸೌಪರ್ಣಿಕಾ ಪಾತ್ರದಲ್ಲಿ ರಂಜನಿ ರಾಘವನ್ ಮಿಂಚಿದ್ದಾರೆ.

ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಬೇಕು ಎಂಬುದು ರಂಜನಿ ರಾಘವನ್‌ ರವರ ಮನದ ಆಶಯ. ಅದರಂತೆ ಈಗ ಅವರ ನಟನಾ ಪ್ರತಿಭೆಗೆ ಪ್ರತಿಫಲವೆಂಬಂತೆ ಇದೀಗ ಅವರ ಅಭಿನಯದ ಮೂರು ಸಿನಿಮಾಗಳು ಸೆಟ್ಟೇರಲು ಸಿದ್ದವಾಗುತ್ತಿವೆ. ‘ಸತ್ಯಂ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅವರು ತಮ್ಮ ಅನುಭವದ ಬಗ್ಗೆ ‘ಆಂದೋಲನ’ ಪತ್ರಿಕೆಯೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

ಸಂತೋಷ್ ಬಾಲರಾಜ್ ನಾಯಕನಾಗಿ ಅಭಿನಯಿಸುತ್ತಿರುವ ‘ಸತ್ಯಂ’ ಒಂದು ಫ್ಯಾಮಿಲಿ ಎಂಟರ್ ಟೇನರ್ ಹಾಗೂ ಮಾಸ್ ಮತ್ತು ಕ್ಲಾಸ್ ಸಿನಿಮಾ ಆಗಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡುವ ಹಾಗೆ ಮೂಡಿಬಂದಿದ್ದು, ಇದರ ಹಾಡುಗಳೂ ಸುಮಧುರವಾಗಿ ಮೂಡಿಬಂದಿವೆ ಎನ್ನುತ್ತಾರೆ ರಂಜನಿ ರಾಘವನ್‌.

ನನಗೆ ಕಥೆಯೇ ಮುಖ್ಯ: ಜನ ನನ್ನನ್ನು ತಮ್ಮ ಮನೆ ಮಗಳಾಗಿ ನೋಡುತ್ತಿದ್ದಾರೆ. ಹಾಗಾಗಿ ನನ್ನ ಪಾತ್ರಗಳ ಆಯ್ಕೆ ಮುಖ್ಯವಾಗಿರುತ್ತದೆ. ನಾನು ಕಥೆಗೆ ಪ್ರಾಮುಖ್ಯತೆ ಕೊಡುತ್ತೇನೆ. ನನ್ನ ಪಾತ್ರ ಮಲಯಾಳಂನಲ್ಲಿ ಸಾಯಿ ಪಲ್ಲವಿ ಒಪ್ಪಿಕೊಳ್ಳುವ ಸಿನಿಮಾದ ರೀತಿ ಇರುತ್ತದೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿನ ನನ್ನ ಪಾತ್ರಗಳೂ ಹಾಗೆಯೇ ಇವೆ. ಪಕ್ಕದ ಮನೆಯ ಹುಡುಗಿ ಎನ್ನುವ ಭಾವನೆ ಮೂಡಿಸುವ ಆಪ್ತವಾಗುವಂಥ ಪಾತ್ರಗಳು ನನ್ನ ಹೆಚ್ಚಿನ ಆಯ್ಕೆಯಾಗಿರುತ್ತವೆ.

ಸಿನಿಮಾದತ್ತ ಗಮನ: ಕನ್ನಡತಿ ಧಾರಾವಾಹಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ರಂಜನಿ ಅವರು ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದವರು. ಆದರೆ ಸಿನಿಮಾ ಬಗ್ಗೆ ಒಂದಷ್ಟು ಕನಸುಗಳನ್ನು ಹೊಂದಿರುವ ಅವರು ಸಿನಿಮಾಗಳಲ್ಲಿಯೂ ಸಾಕಷ್ಟು ಉತ್ತಮ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ.

‘ಸತ್ಯಂ’ ಸಿನಿಮಾ ಒಂದು ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿದ್ದು, ಇದರಲ್ಲಿ ಮಾಸ್ ಮತ್ತು ಕ್ಲಾಸ್ ಎಲ್ಲವೂ ಇದೆ. ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಈ ಸಿನಿಮಾದ ಗೀತಾ ಎನ್ನುವ ಪಾತ್ರ ನನಗೆ ಬಹಳ ಖುಷಿ ಕೊಟ್ಟಿದೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಇದರ ಹಾಡುಗಳು ಸಹ ಬಹಳ ಚೆನ್ನಾಗಿವೆ
-ರಂಜನಿ ರಾಘವನ್
Prashanthsmysore5@gmail.com

andolanait

Recent Posts

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

3 mins ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

27 mins ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

42 mins ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

1 hour ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

1 hour ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

2 hours ago