ಅಂಕಣಗಳು

ರಂಜನಿ ರಾಘವನ್ ರಂಗನಟಿ, ಸಿನೆಮಾ ತಾರೆ, ಕವಯಿತ್ರಿ

• ಪ್ರಶಾಂತ್ ಎಸ್.

ರಂಗಭೂಮಿ ಕಲಾವಿದೆಯಾಗಿ ‘ಪುಟ್ಟಗೌರಿ ಮದುವೆ’ ಎಂಬ ಕಿರುತೆರೆ ಧಾರಾವಾಹಿಯ ಮೂಲ ಗೌರಿಯಾಗಿ ಕರುನಾಡಿನ ಮನೆ ಮಾತಾಗಿದ್ದ ರಂಜನಿ ರಾಘವನ್ ತಮ್ಮ ನಟನೆಯ ಮೂಲಕವೇ ಜನಪ್ರಿಯತೆ ಗಿಟ್ಟಿಸಿಕೊಂಡ ಬೆಡಗಿ. ಇತ್ತೀಚೆಗೆ ತೆರೆಕಂಡ ‘ಕನ್ನಡತಿ’ ಧಾರಾವಾಹಿಯ ಭುವಿ ಅಲಿಯಾಸ್ ಸೌಪರ್ಣಿಕಾ ಪಾತ್ರದಲ್ಲಿ ರಂಜನಿ ರಾಘವನ್ ಮಿಂಚಿದ್ದಾರೆ.

ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಬೇಕು ಎಂಬುದು ರಂಜನಿ ರಾಘವನ್‌ ರವರ ಮನದ ಆಶಯ. ಅದರಂತೆ ಈಗ ಅವರ ನಟನಾ ಪ್ರತಿಭೆಗೆ ಪ್ರತಿಫಲವೆಂಬಂತೆ ಇದೀಗ ಅವರ ಅಭಿನಯದ ಮೂರು ಸಿನಿಮಾಗಳು ಸೆಟ್ಟೇರಲು ಸಿದ್ದವಾಗುತ್ತಿವೆ. ‘ಸತ್ಯಂ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅವರು ತಮ್ಮ ಅನುಭವದ ಬಗ್ಗೆ ‘ಆಂದೋಲನ’ ಪತ್ರಿಕೆಯೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

ಸಂತೋಷ್ ಬಾಲರಾಜ್ ನಾಯಕನಾಗಿ ಅಭಿನಯಿಸುತ್ತಿರುವ ‘ಸತ್ಯಂ’ ಒಂದು ಫ್ಯಾಮಿಲಿ ಎಂಟರ್ ಟೇನರ್ ಹಾಗೂ ಮಾಸ್ ಮತ್ತು ಕ್ಲಾಸ್ ಸಿನಿಮಾ ಆಗಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡುವ ಹಾಗೆ ಮೂಡಿಬಂದಿದ್ದು, ಇದರ ಹಾಡುಗಳೂ ಸುಮಧುರವಾಗಿ ಮೂಡಿಬಂದಿವೆ ಎನ್ನುತ್ತಾರೆ ರಂಜನಿ ರಾಘವನ್‌.

ನನಗೆ ಕಥೆಯೇ ಮುಖ್ಯ: ಜನ ನನ್ನನ್ನು ತಮ್ಮ ಮನೆ ಮಗಳಾಗಿ ನೋಡುತ್ತಿದ್ದಾರೆ. ಹಾಗಾಗಿ ನನ್ನ ಪಾತ್ರಗಳ ಆಯ್ಕೆ ಮುಖ್ಯವಾಗಿರುತ್ತದೆ. ನಾನು ಕಥೆಗೆ ಪ್ರಾಮುಖ್ಯತೆ ಕೊಡುತ್ತೇನೆ. ನನ್ನ ಪಾತ್ರ ಮಲಯಾಳಂನಲ್ಲಿ ಸಾಯಿ ಪಲ್ಲವಿ ಒಪ್ಪಿಕೊಳ್ಳುವ ಸಿನಿಮಾದ ರೀತಿ ಇರುತ್ತದೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿನ ನನ್ನ ಪಾತ್ರಗಳೂ ಹಾಗೆಯೇ ಇವೆ. ಪಕ್ಕದ ಮನೆಯ ಹುಡುಗಿ ಎನ್ನುವ ಭಾವನೆ ಮೂಡಿಸುವ ಆಪ್ತವಾಗುವಂಥ ಪಾತ್ರಗಳು ನನ್ನ ಹೆಚ್ಚಿನ ಆಯ್ಕೆಯಾಗಿರುತ್ತವೆ.

ಸಿನಿಮಾದತ್ತ ಗಮನ: ಕನ್ನಡತಿ ಧಾರಾವಾಹಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ರಂಜನಿ ಅವರು ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದವರು. ಆದರೆ ಸಿನಿಮಾ ಬಗ್ಗೆ ಒಂದಷ್ಟು ಕನಸುಗಳನ್ನು ಹೊಂದಿರುವ ಅವರು ಸಿನಿಮಾಗಳಲ್ಲಿಯೂ ಸಾಕಷ್ಟು ಉತ್ತಮ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ.

‘ಸತ್ಯಂ’ ಸಿನಿಮಾ ಒಂದು ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿದ್ದು, ಇದರಲ್ಲಿ ಮಾಸ್ ಮತ್ತು ಕ್ಲಾಸ್ ಎಲ್ಲವೂ ಇದೆ. ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಈ ಸಿನಿಮಾದ ಗೀತಾ ಎನ್ನುವ ಪಾತ್ರ ನನಗೆ ಬಹಳ ಖುಷಿ ಕೊಟ್ಟಿದೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಇದರ ಹಾಡುಗಳು ಸಹ ಬಹಳ ಚೆನ್ನಾಗಿವೆ
-ರಂಜನಿ ರಾಘವನ್
Prashanthsmysore5@gmail.com

andolanait

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

2 hours ago