ಅಂಕಣಗಳು

ರಂಜನಿ ರಾಘವನ್ ರಂಗನಟಿ, ಸಿನೆಮಾ ತಾರೆ, ಕವಯಿತ್ರಿ

• ಪ್ರಶಾಂತ್ ಎಸ್.

ರಂಗಭೂಮಿ ಕಲಾವಿದೆಯಾಗಿ ‘ಪುಟ್ಟಗೌರಿ ಮದುವೆ’ ಎಂಬ ಕಿರುತೆರೆ ಧಾರಾವಾಹಿಯ ಮೂಲ ಗೌರಿಯಾಗಿ ಕರುನಾಡಿನ ಮನೆ ಮಾತಾಗಿದ್ದ ರಂಜನಿ ರಾಘವನ್ ತಮ್ಮ ನಟನೆಯ ಮೂಲಕವೇ ಜನಪ್ರಿಯತೆ ಗಿಟ್ಟಿಸಿಕೊಂಡ ಬೆಡಗಿ. ಇತ್ತೀಚೆಗೆ ತೆರೆಕಂಡ ‘ಕನ್ನಡತಿ’ ಧಾರಾವಾಹಿಯ ಭುವಿ ಅಲಿಯಾಸ್ ಸೌಪರ್ಣಿಕಾ ಪಾತ್ರದಲ್ಲಿ ರಂಜನಿ ರಾಘವನ್ ಮಿಂಚಿದ್ದಾರೆ.

ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಬೇಕು ಎಂಬುದು ರಂಜನಿ ರಾಘವನ್‌ ರವರ ಮನದ ಆಶಯ. ಅದರಂತೆ ಈಗ ಅವರ ನಟನಾ ಪ್ರತಿಭೆಗೆ ಪ್ರತಿಫಲವೆಂಬಂತೆ ಇದೀಗ ಅವರ ಅಭಿನಯದ ಮೂರು ಸಿನಿಮಾಗಳು ಸೆಟ್ಟೇರಲು ಸಿದ್ದವಾಗುತ್ತಿವೆ. ‘ಸತ್ಯಂ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅವರು ತಮ್ಮ ಅನುಭವದ ಬಗ್ಗೆ ‘ಆಂದೋಲನ’ ಪತ್ರಿಕೆಯೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

ಸಂತೋಷ್ ಬಾಲರಾಜ್ ನಾಯಕನಾಗಿ ಅಭಿನಯಿಸುತ್ತಿರುವ ‘ಸತ್ಯಂ’ ಒಂದು ಫ್ಯಾಮಿಲಿ ಎಂಟರ್ ಟೇನರ್ ಹಾಗೂ ಮಾಸ್ ಮತ್ತು ಕ್ಲಾಸ್ ಸಿನಿಮಾ ಆಗಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡುವ ಹಾಗೆ ಮೂಡಿಬಂದಿದ್ದು, ಇದರ ಹಾಡುಗಳೂ ಸುಮಧುರವಾಗಿ ಮೂಡಿಬಂದಿವೆ ಎನ್ನುತ್ತಾರೆ ರಂಜನಿ ರಾಘವನ್‌.

ನನಗೆ ಕಥೆಯೇ ಮುಖ್ಯ: ಜನ ನನ್ನನ್ನು ತಮ್ಮ ಮನೆ ಮಗಳಾಗಿ ನೋಡುತ್ತಿದ್ದಾರೆ. ಹಾಗಾಗಿ ನನ್ನ ಪಾತ್ರಗಳ ಆಯ್ಕೆ ಮುಖ್ಯವಾಗಿರುತ್ತದೆ. ನಾನು ಕಥೆಗೆ ಪ್ರಾಮುಖ್ಯತೆ ಕೊಡುತ್ತೇನೆ. ನನ್ನ ಪಾತ್ರ ಮಲಯಾಳಂನಲ್ಲಿ ಸಾಯಿ ಪಲ್ಲವಿ ಒಪ್ಪಿಕೊಳ್ಳುವ ಸಿನಿಮಾದ ರೀತಿ ಇರುತ್ತದೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿನ ನನ್ನ ಪಾತ್ರಗಳೂ ಹಾಗೆಯೇ ಇವೆ. ಪಕ್ಕದ ಮನೆಯ ಹುಡುಗಿ ಎನ್ನುವ ಭಾವನೆ ಮೂಡಿಸುವ ಆಪ್ತವಾಗುವಂಥ ಪಾತ್ರಗಳು ನನ್ನ ಹೆಚ್ಚಿನ ಆಯ್ಕೆಯಾಗಿರುತ್ತವೆ.

ಸಿನಿಮಾದತ್ತ ಗಮನ: ಕನ್ನಡತಿ ಧಾರಾವಾಹಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ರಂಜನಿ ಅವರು ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದವರು. ಆದರೆ ಸಿನಿಮಾ ಬಗ್ಗೆ ಒಂದಷ್ಟು ಕನಸುಗಳನ್ನು ಹೊಂದಿರುವ ಅವರು ಸಿನಿಮಾಗಳಲ್ಲಿಯೂ ಸಾಕಷ್ಟು ಉತ್ತಮ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ.

‘ಸತ್ಯಂ’ ಸಿನಿಮಾ ಒಂದು ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿದ್ದು, ಇದರಲ್ಲಿ ಮಾಸ್ ಮತ್ತು ಕ್ಲಾಸ್ ಎಲ್ಲವೂ ಇದೆ. ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಈ ಸಿನಿಮಾದ ಗೀತಾ ಎನ್ನುವ ಪಾತ್ರ ನನಗೆ ಬಹಳ ಖುಷಿ ಕೊಟ್ಟಿದೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಇದರ ಹಾಡುಗಳು ಸಹ ಬಹಳ ಚೆನ್ನಾಗಿವೆ
-ರಂಜನಿ ರಾಘವನ್
Prashanthsmysore5@gmail.com

andolanait

Recent Posts

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

24 mins ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

2 hours ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

2 hours ago