ಅಂಕಣಗಳು

ರಂಜನಿ ರಾಘವನ್ ರಂಗನಟಿ, ಸಿನೆಮಾ ತಾರೆ, ಕವಯಿತ್ರಿ

• ಪ್ರಶಾಂತ್ ಎಸ್.

ರಂಗಭೂಮಿ ಕಲಾವಿದೆಯಾಗಿ ‘ಪುಟ್ಟಗೌರಿ ಮದುವೆ’ ಎಂಬ ಕಿರುತೆರೆ ಧಾರಾವಾಹಿಯ ಮೂಲ ಗೌರಿಯಾಗಿ ಕರುನಾಡಿನ ಮನೆ ಮಾತಾಗಿದ್ದ ರಂಜನಿ ರಾಘವನ್ ತಮ್ಮ ನಟನೆಯ ಮೂಲಕವೇ ಜನಪ್ರಿಯತೆ ಗಿಟ್ಟಿಸಿಕೊಂಡ ಬೆಡಗಿ. ಇತ್ತೀಚೆಗೆ ತೆರೆಕಂಡ ‘ಕನ್ನಡತಿ’ ಧಾರಾವಾಹಿಯ ಭುವಿ ಅಲಿಯಾಸ್ ಸೌಪರ್ಣಿಕಾ ಪಾತ್ರದಲ್ಲಿ ರಂಜನಿ ರಾಘವನ್ ಮಿಂಚಿದ್ದಾರೆ.

ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಬೇಕು ಎಂಬುದು ರಂಜನಿ ರಾಘವನ್‌ ರವರ ಮನದ ಆಶಯ. ಅದರಂತೆ ಈಗ ಅವರ ನಟನಾ ಪ್ರತಿಭೆಗೆ ಪ್ರತಿಫಲವೆಂಬಂತೆ ಇದೀಗ ಅವರ ಅಭಿನಯದ ಮೂರು ಸಿನಿಮಾಗಳು ಸೆಟ್ಟೇರಲು ಸಿದ್ದವಾಗುತ್ತಿವೆ. ‘ಸತ್ಯಂ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅವರು ತಮ್ಮ ಅನುಭವದ ಬಗ್ಗೆ ‘ಆಂದೋಲನ’ ಪತ್ರಿಕೆಯೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ.

ಸಂತೋಷ್ ಬಾಲರಾಜ್ ನಾಯಕನಾಗಿ ಅಭಿನಯಿಸುತ್ತಿರುವ ‘ಸತ್ಯಂ’ ಒಂದು ಫ್ಯಾಮಿಲಿ ಎಂಟರ್ ಟೇನರ್ ಹಾಗೂ ಮಾಸ್ ಮತ್ತು ಕ್ಲಾಸ್ ಸಿನಿಮಾ ಆಗಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡುವ ಹಾಗೆ ಮೂಡಿಬಂದಿದ್ದು, ಇದರ ಹಾಡುಗಳೂ ಸುಮಧುರವಾಗಿ ಮೂಡಿಬಂದಿವೆ ಎನ್ನುತ್ತಾರೆ ರಂಜನಿ ರಾಘವನ್‌.

ನನಗೆ ಕಥೆಯೇ ಮುಖ್ಯ: ಜನ ನನ್ನನ್ನು ತಮ್ಮ ಮನೆ ಮಗಳಾಗಿ ನೋಡುತ್ತಿದ್ದಾರೆ. ಹಾಗಾಗಿ ನನ್ನ ಪಾತ್ರಗಳ ಆಯ್ಕೆ ಮುಖ್ಯವಾಗಿರುತ್ತದೆ. ನಾನು ಕಥೆಗೆ ಪ್ರಾಮುಖ್ಯತೆ ಕೊಡುತ್ತೇನೆ. ನನ್ನ ಪಾತ್ರ ಮಲಯಾಳಂನಲ್ಲಿ ಸಾಯಿ ಪಲ್ಲವಿ ಒಪ್ಪಿಕೊಳ್ಳುವ ಸಿನಿಮಾದ ರೀತಿ ಇರುತ್ತದೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿನ ನನ್ನ ಪಾತ್ರಗಳೂ ಹಾಗೆಯೇ ಇವೆ. ಪಕ್ಕದ ಮನೆಯ ಹುಡುಗಿ ಎನ್ನುವ ಭಾವನೆ ಮೂಡಿಸುವ ಆಪ್ತವಾಗುವಂಥ ಪಾತ್ರಗಳು ನನ್ನ ಹೆಚ್ಚಿನ ಆಯ್ಕೆಯಾಗಿರುತ್ತವೆ.

ಸಿನಿಮಾದತ್ತ ಗಮನ: ಕನ್ನಡತಿ ಧಾರಾವಾಹಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ರಂಜನಿ ಅವರು ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದವರು. ಆದರೆ ಸಿನಿಮಾ ಬಗ್ಗೆ ಒಂದಷ್ಟು ಕನಸುಗಳನ್ನು ಹೊಂದಿರುವ ಅವರು ಸಿನಿಮಾಗಳಲ್ಲಿಯೂ ಸಾಕಷ್ಟು ಉತ್ತಮ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ.

‘ಸತ್ಯಂ’ ಸಿನಿಮಾ ಒಂದು ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿದ್ದು, ಇದರಲ್ಲಿ ಮಾಸ್ ಮತ್ತು ಕ್ಲಾಸ್ ಎಲ್ಲವೂ ಇದೆ. ಗೀತಾ ಎಂಬ ಮಲೆನಾಡಿನ ಹುಡುಗಿಯ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಈ ಸಿನಿಮಾದ ಗೀತಾ ಎನ್ನುವ ಪಾತ್ರ ನನಗೆ ಬಹಳ ಖುಷಿ ಕೊಟ್ಟಿದೆ. ಬಹಳ ಆಸಕ್ತಿದಾಯಕ ಕಥೆ ಹೊಂದಿರುವ ಈ ಸಿನಿಮಾ ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಇದರ ಹಾಡುಗಳು ಸಹ ಬಹಳ ಚೆನ್ನಾಗಿವೆ
-ರಂಜನಿ ರಾಘವನ್
Prashanthsmysore5@gmail.com

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

7 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

17 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

21 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

21 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

22 hours ago