ಅಂಕಣಗಳು

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು

ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ ಒಂದು ಪರಿ ಹಾರ ಕಂಡುಕೊಳ್ಳುವುದು ಅತ್ಯಗತ್ಯ. ನಾನು ೮೩ ವರ್ಷ ವಯಸ್ಸಿನವನು. ನಾಯಿಗಳೊಂದಿಗೇ ಬೆಳೆದವನು. ಕೆಲವೊಮ್ಮೆ ಅವು ಅನಾರೋಗ್ಯದಿಂದ ನನ್ನನ್ನು ಕಚ್ಚಿರುವ ಘಟನೆಗಳೂ ನಡೆದಿವೆ. ಬೀದಿಗಳಲ್ಲಿ ನನ್ನ ನಾಯಿಗಳನ್ನು ರಕ್ಷಿಸಲು ಪ್ರಯತ್ನಿಸುವಾಗ ಕೆಲವೊಮ್ಮೆ ಬೀದಿ ನಾಯಿಗಳಿಂದ ಕಚ್ಚಿಸಿಕೊಂಡು ಹಲವಾರು ಬಾರಿ ರೇಬಿಸ್ ನಿರೋಧಕ ಚುಚ್ಚುಮದ್ದುಗಳನ್ನೂ ಹಾಕಿಸಿಕೊಂಡಿದ್ದೇನೆ. ನಮ್ಮ ಜಮೀನು/ಎಸ್ಟೇಟ್‌ನಲ್ಲಿ ಕಾಡು ನಾಯಿಗಳ ಜೊತೆಗೂ ನಾನು ಅನುಭವವನ್ನು ಹೊಂದಿದ್ದೇನೆ. ನ್ಯಾಯಾಂಗ ತೀರ್ಪುಗಳ ಸಾಧಕ/ಬಾಧಕಗಳ ವಿಚಾರಕ್ಕೆ ಹೋಗದೆ, ಮಾನವೀಯ ದೃಷ್ಟಿಯ ಆಧಾರದ ಮೇಲೆ ಈ ಕೆಳಗಿನ ಸಲಹೆಗಳನ್ನು ನೀಡುತ್ತಿದ್ದೇನೆ

ಎಲ್ಲೆಲ್ಲಿ ಬೀದಿ ನಾಯಿಗಳು ಅಪಾಯವಾಗಿ ಪರಿಣಮಿಸಿವೆಯೋ ಅಲ್ಲೆಲ್ಲ…:

೧ ಬೀದಿನಾಯಿಗಳನ್ನು ಹಿಡಿಯಿರಿ, ಪಶುವೈದ್ಯರಿಂದ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಅನಾರೋಗ್ಯದಿಂದ ಬಳಲುತ್ತಿರುವ ಶ್ವಾನಗಳನ್ನು ಆರೋಗ್ಯವಂತ ನಾಯಿಗಳಿಂದ ಬೇರ್ಪಡಿಸಿ, ಆರೋಗ್ಯವಂತ ನಾಯಿಗಳ ಕಿವಿಗೆ ಒಂದು ಗುರುತಿನ ಸಂಖ್ಯೆಯೊಂದಿಗೆ ಜಿಪಿಎಸ್ ಟ್ಯಾಗ್ ಅನ್ನು ಅಳವಡಿಸಿ

೨ ಬೀದಿ ನಾಯಿಗಳನ್ನು ದತ್ತು ಪಡೆಯಲು ಶ್ವಾನಪ್ರಿಯರನ್ನು ಆಹ್ವಾನಿಸುವ ಬಗ್ಗೆ ಆಗಾಗ್ಗೆ ಪತ್ರಿಕಾ ಪ್ರಕಟಣೆಗಳನ್ನು ಹೊರಡಿಸಬಹುದು. ದತ್ತು ಪಡೆಯುವವರ ಆಧಾರ್ ಸಂಖ್ಯೆ ಇತ್ಯಾದಿಗಳನ್ನು ಪಡೆದು ನೋಂದಣಿ ಮಾಡಿಕೊಡಬಹುದು. ಆದರೆ, ನಾಯಿಯನ್ನು ಮತ್ತೆ ಬೀದಿಗಿಳಿಯಲು ಬಿಡುವುದಿಲ್ಲ ಮತ್ತು ಹಾಗೊಮ್ಮೆ ಬಿಟ್ಟು ಉಲ್ಲಂಘಿ ಸಿದರೆ ಅದಕ್ಕೆ ದತ್ತು ಪಡೆದವರೇ ಜವಾಬ್ದಾರರಾಗುತ್ತಾರೆ ಎಂದು ಮುಚ್ಚಳಿಕೆ ಬರೆಸಿಕೊಳ್ಳಬೇಕು

೩ ಶ್ವಾನಪ್ರಿಯರು ಉಳಿದ ಆರೋಗ್ಯವಂತ ನಾಯಿಗಳನ್ನು ಸೂಕ್ತ ಕಾಳಜಿ ಮತ್ತು ತಪಾಸಣೆಯೊಂದಿಗೆ ಆಶ್ರಯ ಕೇಂದ್ರಗಳಲ್ಲಿ ನೋಡಿಕೊಳ್ಳಬಹುದು

೪ ಆರೋಗ್ಯವಂತ ನಾಯಿಗಳ ಸಂಖ್ಯೆ ಹೆಚ್ಚಿದ್ದರೆ ಅಥವಾ ಅವು ನಿರ್ವಹಿಸಲು ಸಾಧ್ಯವಾಗದಷ್ಟು ಸಂಖ್ಯೆಯಲ್ಲಿದ್ದರೆ, ಅವುಗಳನ್ನು ದಟ್ಟವಾದ ಅರಣ್ಯ ಪ್ರದೇಶಗಳಿಗೆ ಕರೆದೊಯ್ದು ಬಿಡುವ ಮೂಲಕ ಹುಲಿ, ಚಿರತೆ ಮುಂತಾದ ಕಾಡು ಪ್ರಾಣಿಗಳಿಗೆ ಸುರಕ್ಷಿತ ಆಹಾರವಾಗುವಂತೆ ಮಾಡಬಹುದು. ನಾಯಿ ಮಾಂಸವನ್ನು ಕಾಡುಪ್ರಾಣಿಗಳು ಸೇವಿಸುವ ಬಗ್ಗೆ ಕೆಲವರು ಕಳವಳ ವ್ಯಕ್ತಪಡಿಸಬಹುದು. ಆದರೆ, ಆಹಾರಕ್ಕಾಗಿ ಹಳ್ಳಿಗಳ ಮೇಲೆ ದಾಳಿ ಮಾಡುವಾಗ ಕಾಡು ಪ್ರಾಣಿಗಳು ನಾಯಿಗಳನ್ನು ಕೂಡ ಹೊತ್ತೊಯ್ಯುವುದು ನಿಜವಷ್ಟೇ. ಕಾಡಿನ ಬಳಿ ಕುರಿ/ಹಸುಗಳನ್ನು ಮೇಯಿಸುವ ರೈತರ ಮೇಲೆ ಹಸಿವಿನಿಂದ ಕಂಗೆಟ್ಟ ಕಾಡು ಪ್ರಾಣಿಗಳು ದಾಳಿ ನಡೆಸುತ್ತಿವೆ; ಅವರನ್ನು ಕೊಲ್ಲುತ್ತಿವೆ, ತಿನ್ನುತ್ತಿವೆ. ಅವು ಎಷ್ಟಾದರೂ ಮಾಂಸಾಹಾರ ಪ್ರಾಣಿಗಳು, ಎಷ್ಟೇ ಹಸಿವಾದರೂ ಅವು ಹುಲ್ಲು ತಿನ್ನುವುದುಂಟೇ? ಪ್ರಾಣಿಗಳ ಜೀವಕ್ಕಿಂತ ಮನುಷ್ಯರ ಜೀವ ಹೆಚ್ಚು ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮೇಲಿನ ಸಲಹೆಗಳನ್ನು ನೀಡಲಾಗಿದೆ. ಪ್ರಾಣಿಗಳ ಮೇಲಿನ ಕ್ರೌರ್ಯವು ಒಳ್ಳೆಯದಲ್ಲ ಸರಿ. ಆದರೆ ಭಾರತ ಗೋಮಾಂಸದ ಅಗ್ರ ರಫ್ತುದಾರ ದೇಶ ಗಳಲ್ಲಿ ಒಂದೆಂಬ ಅಂಶವೂ ಇಲ್ಲಿ ಗಮನಾರ್ಹವಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

3 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

4 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

6 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

9 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

10 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

16 hours ago