ಅಂಕಣಗಳು

ಮನೋರೋಗಿಗಳ ಮಾನವ ಹಕ್ಕುಗಳನ್ನು ಗೌರವಿಸಿ

• ಭ್ರಮರಾಂಬ ಡಿ.ಹೊನ್ನುಗುಡಿ

ಇತ್ತೀಚೆಗೆ ಮಾನಸಿಕ ಸಮಸ್ಯೆಗಳಿಗೆ ತುತ್ತಾಗಿರುವವರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಹೆಚ್ಚಾಗುತ್ತಿದೆ. ಒಂದಲ್ಲ ಒಂದು ರೀತಿಯಲ್ಲಿ ಅವರನ್ನು ಹಿಂಸಿಸಿ ಅವರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಈ ನಡುವೆ ಮಾನಸಿಕ ಸಮಸ್ಯೆಗಳಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ಲಭ್ಯವಿದ್ದರೂ ಅವರಿಗೆ ನಾವು ಸೂಕ್ತವಾದ ಕಡೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸದಿರುವುದೂ ಮಾನವ ಹಕ್ಕುಗಳ ಉಲ್ಲಂಘನೆಯೇ ಆಗಲಿದೆ.

ನಮ್ಮ ಕುಟುಂಬದಲ್ಲೋ ಅಥವಾ ನಮ್ಮ ಆಪ್ತ ವಲಯದಲ್ಲೋ ಯಾರಾದರೂ ಮಾನಸಿಕ ಸಮಸ್ಯೆಯುಳ್ಳವರು ಇದ್ದರೆ ನಾವು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ನುರಿತ ಅಥವಾ ವೃತ್ತಿಪರ ವೈದ್ಯರ ಬಳಿ ಕರೆದುಕೊಂಡು ಹೋಗುವ ಬದಲು ಗುಡಿ, ಮಂದಿರ, ಚರ್ಚ್, ಮಸೀದಿಗಳಿಗೆ ಕರೆದುಕೊಂಡು ಹೋಗಿ ಒಂದು ವಿಭಿನ್ನ ರೀತಿಯ ಚಿಕಿತ್ಸೆ ಕೊಡಿಸಲು ಮುಂದಾಗುತ್ತೇವೆ. ಇದು ಅವರಿಗೆ ಮತ್ತಷ್ಟು ಮಾನಸಿಕ ಅಸಮತೋಲನಕ್ಕೆ ಕಾರಣವಾಗಲಿದೆ. ಇದಷ್ಟೇ ಅಲ್ಲದೆ ಸರಿಯಾಗಿ ಮಾನಸಿಕ ವೈದ್ಯರು ಎಂದು ದೃಢೀಕರಣಗೊಂಡಿರದ, ವೃತ್ತಿಪರರಲ್ಲದ ವೈದ್ಯರ ಬಳಿ ಕರೆದುಕೊಂಡು ಹೋಗುವುದರಿಂದ ಅವರ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

ಮಾನಸಿಕ ಸಮಸ್ಯೆಯುಳ್ಳವರಿಗೆ ಎಲ್ಲಿ ಚಿಕಿತ್ಸೆ ಕೊಡಿಸಬೇಕು?: ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017ರ ಅಡಿಯಲ್ಲಿ ನೋಂದಣಿಯಾಗಿರುವ ಮಾನಸಿಕ ಆರೋಗ್ಯ ತಜ್ಞರ ಬಳಿ ಮಾನಸಿಕ ಸಮಸ್ಯೆಯುಳ್ಳವರನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವುದು ಉತ್ತಮ. ಉದಾ: ಮನೋವೈದ್ಯರು, ಕ್ಲಿನಿಕಲ್ ಸೈಕಾಲಜಿಸ್ಟ್‌ಗಳು, ಮನೋ ಸಾಮಾಜಿಕ ಕಾರ್ಯಕರ್ತರು, ರಿಹಬಿಲಿಟೇಶನ್ ಸೈಕಾಲಜಿ ತಂಡದವರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಬಹುದು. ಇದರ ಹೊರತಾಗಿ ನಾವು ಮಾನಸಿಕ ಸಮಸ್ಯೆಯುಳ್ಳವರನ್ನು ದೇವಸ್ಥಾನ, ಮಸೀದಿ, ಚರ್ಚುಗಳಿಗೆ ಕರೆದುಕೊಂಡು ಹೋಗುವುದರಿಂದ ಅಲ್ಲಿ ಅವರಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ತಿಳಿಯದೆ ಅವರನ್ನು ಕಟ್ಟಿ ಹಾಕುವುದು, ಹೊಡೆಯುವುದು, ಕೂಡಿಹಾಕುವುದು ಮುಂತಾಗಿ ಹಿಂಸಿಸುವುದು ನಡೆಯುತ್ತದೆ. ಇದು ಪ್ರಮುಖವಾಗಿ ಅಲ್ಲಿ ಮಾನಸಿಕ ಸಮಸ್ಯೆಯುಳ್ಳವರ ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ.

ಮನೋರೋಗಿಗಳ ಮೇಲೆ ಮಾನವ ಹಕ್ಕುಗಳನ್ನು ಅವರಿಗೆ ನಿರಾಕರಿಸುವುದರಿಂದ ಅವರು ಒಬ್ಬಂಟಿ ಎಂಬ ಭಾವನೆ ಮೂಡಬಹುದು, ಅವರು ಸಮಾಜದಿಂದ ದೂರ ಉಳಿಯಬಹುದು. ಇದರಿಂದಾಗಿ ತನಗೆ ಯಾರೂ ಇಲ್ಲ ಎಂಬ ಖಿನ್ನತೆಗೆ ಒಳಗಾಗಿ ಅವರಲ್ಲಿ ಕಾಯಿಲೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು. ಜತೆಗೆ ಅವರು ಆತ್ಮಹತ್ಯೆಗೂ ಪ್ರಯತ್ನಿಸಬಹುದು. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಆಪ್ತರಿಲ್ಲದೆ ಅವರು ಹಿಂಸೆಯನ್ನು ಅನುಭವಿಸಬಹುದು. ಈ ರೀತಿಯಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ಅದು ಮನೋರೋಗಿಗಳ ಬದುಕಿನಲ್ಲಿ ಸಾಕಷ್ಟು ಪರಿಣಾಮವನ್ನು ಬೀರಲಿದೆ.

ಒಂದು ಕುಟುಂಬ ಎಂದಾಗ ನಮ್ಮಲ್ಲಿ ಯಾರಾದರೂ ಮಾನಸಿಕ ಸಮಸ್ಯೆಯುಳ್ಳವರು ಇದ್ದರೆ ಅಂತಹವರ ಆರೈಕೆ ಮಾಡುವುದು ಒಂದು ಬಹುಮುಖಿ ಕೆಲಸ. ಇದರಲ್ಲಿ ಮಾನಸಿಕ ಸಮಾಜ ಕಾರ್ಯಕರ್ತರ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ. ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಾವು ಮನೋರೋಗಿಗಳ ಆರೈಕೆ ಮಾಡಬಹುದು. ಮಾನಸಿಕ ಸಮಸ್ಯೆ ಉಳ್ಳವರು ತುಂಬಾ ಸೂಕ್ಷ್ಮವಾಗಿರುವುದರಿಂದ ಅವರಿಗೆ ನಾವು ಚುಚ್ಚು ಮಾತುಗಳನ್ನು ಆಡುವುದು, ನಿಂದನೆ ಮಾಡಬಾರದು. ಕುಟುಂಬ ಅವರನ್ನು ಉತ್ತಮವಾಗಿ ನೋಡಿಕೊಳ್ಳುವ ಮೂಲಕ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಇದು ಕುಟುಂಬ ಮಾತ್ರವಲ್ಲದೇ ಸಮಾಜವೂ ಇಂತಹ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಗಳನ್ನು ಕಂಡಾಗ ಅವರನ್ನು ಸಕಾರಾತ್ಮಕ ದೃಷ್ಟಿಯಿಂದ ನೋಡಬೇಕು. ಅವರಿಗೆ ಸಹಾಯ ಮಾಡಿ ಸರಿಯಾದ ಚಿಕಿತ್ಸೆ ಕೊಡಿಸಬೇಕು. ಆದ್ದರಿಂದ ಒಮ್ಮೆ ಮಾನಸಿಕ ಸಮಸ್ಯೆಯುಳ್ಳ ವ್ಯಕ್ತಿ ಗುಣವಾಗಲು ಒಂದು ಕುಟುಂಬವಾಗಲಿ ಅಥವಾ ಸಮಾಜವಾಗಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಬೇಕು. ಅವರನ್ನು ಎಲ್ಲರೊಂದಿಗೆ ಬೆರೆಯಲು ಬಿಟ್ಟು, ಪ್ರೀತಿ ವಿಶ್ವಾಸದಿಂದ ಕಂಡಾಗ ಮಾತ್ರ ಅವರು ಗುಣವಾಗಲು ಸಾಧ್ಯ. ಪ್ರಜ್ಞಾವಂತ ನಾಗರಿಕ ಸಮಾಜದಲ್ಲಿರುವ ನಾವು ಮಾನಸಿಕ ಸಮಸ್ಯೆಯುಳ್ಳ ವ್ಯಕ್ತಿಯನ್ನು ಕಂಡಾಗ ಅವರನ್ನು ಹಿಂಸಿಸಿ ಅವರ ಹಕ್ಕುಗಳನ್ನು ಕಸಿಯುವ ಬದಲು ಅವರು ಗುಣಮುಖರಾಗಿ ನಮ್ಮಂತೆಯೇ ಜೀವನ ಸಾಗಿಸಲು ಸಹಕರಿಸೋಣ.
b.honnugudi@gmail.com

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

3 hours ago