ಐಡಿಯಲ್ ಜಾವಾ ರೋಟರಿ ಶಾಲೆ ಸ್ಥಾಪಿಸಿದ ಶೀಲಾ ಇರಾನಿ ಸ್ಮರಣೆ

ಪರೋಪಕಾರಿ ಮನಸ್ಸನ್ನು ಹೊಂದಿದ್ದ ಶೀಲಾ ಇರಾನಿ ತಮ್ಮ ಸಾಮಾಜಿಕ ಕಾರ್ಯಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿದು ಉಳಿದಿದ್ದಾರೆ. ಶಿಕ್ಷಣ ತಜ್ಞೆ, ಸಂಸದೀಯ ಪಟುವಾಗಿದ್ದ ಶೀಲಾ ಇರಾನಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ನಗರದ ಬೃಂದಾವನ ಬಡಾವಣೆಯಲ್ಲಿರುವ ಚಾಮುಂಡಿ ಮಕ್ಕಳ ಮನೆಯಲ್ಲಿ ಕಳೆದ ಭಾನುವಾರ ನಡೆಸಲಾಯಿತು.
ಹೊಸದಿಲ್ಲಿಯ ಶಿಕ್ಷಕಿ ವೃತ್ತಿಯ ಜತೆಗೆ ಜೀವನ ಪ್ರಾರಂಭಿಸಿದ ಅವರು, ಸೇಂಟ್ ಜಾನ್ಸ್ ಆಂಬುಲೆನ್ಸ್ ಕಾರ್ಪ್ಸ್‌ನಲ್ಲಿ ಸ್ವಯಂಸೇವಕರಾಗಿದ್ದರು. ಅವರ ಸೇವೆಗಾಗಿ ವೈಸ್‌ರಾಯ್ ಪ್ರಮಾಣಪತ್ರವನ್ನೂ ಪಡೆದಿದ್ದರು ಎಂಬುದು ಗಮನಾರ್ಹವಾದದ್ದಾಗಿದೆ.

ಮೈಸೂರು- ರೋಟರಿ ಶಾಲೆ ಆರಂಭ
೧೯೫೧ರಲ್ಲಿ ಮೈಸೂರಿಗೆ ಬಂದ ಅವರು ೧೯೬೮ರಲ್ಲಿ ಐಡಿಯಲ್ ಜಾವಾ ರೋಟರಿ ಶಾಲೆಯನ್ನು ಸ್ಥಾಪಿಸಿದ್ದರು. ಇದು ನಗರದ ಅತ್ಯಂತ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿ ಬೆಳೆಯಿತು.

ಮೈಸೂರಿನಲ್ಲಿ ಚಾಮುಂಡಿ ಮಕ್ಕಳ ಮನೆಯನ್ನು ನಿರ್ಮಿಸಿದ್ದರು. ಅದು ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ಅವರು ೨೦೦೩ರ ಏಪ್ರಿಲ್ ೧೦ರಂದು ನಿಧನರಾದರು.

ರಾಜಕೀಯ
ಕರ್ನಾಟಕ ವಿಧಾನಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ೧೯೬೮ರಲ್ಲಿ ರಾಜಕೀಯ ಜೀವನ ಪ್ರಾರಂಭಿಸಿದ್ದರು. ೧೯೯೩ ಮತ್ತು ೧೯೯೫ರ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿದ್ದರು.

೧೯೯೫ರಲ್ಲಿ ಆಂಗ್ಲೋ?ಇಂಡಿಯನ್ ಕೋಟಾದಲ್ಲಿ ಲೋಕಸಭೆಗೆ ನಾಮನಿರ್ದೇಶನಗೊಂಡರು. ಆಂಗ್ಲೋ-ಇಂಡಿಯನ್ ಅಸೋಸಿೆುೀಂಶನ್‌ನ ಉಪಾಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಸೇವೆ
ಶೀಲಾ ಅವರು ಮಾನವೀಯತೆಗೆ ಮಿಡಿಯುವಂತವರಾಗಿದ್ದು, ಸಾಮಾಜಿಕ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುದ್ದರು. ಮೈಸೂರಿನಲ್ಲಿ ಕುಷ್ಠ ರೋಗಿಗಳಿಗೆ ಚಿಕಿತ್ಸೆ, ಅನಾಥಾಶ್ರಮದ ಉಪಾಧ್ಯಕ್ಷರಾಗಿ, ಹಲವಾರು ಆಸ್ಪತ್ರೆಗಳ ಟ್ರಸ್ಟಿಯಾಗಿ ಕೆಲಸ ಮಾಡಿದ್ದರು. ಪಿ.ಕೆ. ಸ್ಯಾನಿಟೋರಿಯಂನ ಮಂಡಳಿಯಲ್ಲಿದ್ದರು.

ಫರೋಖ್ ಜತೆ ವಿವಾಹ
ಉದ್ಯಮಿ ಫರೋಖ್ ಕೆ. ಇರಾನಿ (ಎಫ್.ಕೆ. ಇರಾನಿ) ಅವರನ್ನು ಶೀಲಾ ವಿವಾಹವಾದರು. ಫರೋಖ್ ಅವರು ಐಡಿಯಲ್ ಜಾವಾ (ಇಂಡಿಯಾ) ಲಿಮಿಟೆಡ್ ಸ್ಥಾಪಿಸಿದರು. ಇದು ಜಾವಾ ಮೋಟಾರ್ ಸೈಕಲ್‌ಗಳು ಮತ್ತು ಪ್ರಸಿದ್ಧ ಯಜ್ಡಿ ರೋಡ್ ಕಿಂಗ್ ಬೈಕ್‌ಗಳನ್ನು ಮಾರಾಟ ಮಾಡುವ ಕಂಪನಿಯಾಗಿತ್ತು. ಈ ದಂಪತಿಗೆ ಪುತ್ರರಾದ ರೈಯಾನ್ ಇರಾನಿ, ಕೈರಸ್ ಎಫ್.ಇರಾನಿ ಮತ್ತು ಪುತ್ರಿ ಮೊರ್ವಾರಿಡ್ ಫೆರ್ನಾಂಡಿಸ್ ಇದ್ದಾರೆ.

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

49 seconds ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago