ಐಡಿಯಲ್ ಜಾವಾ ರೋಟರಿ ಶಾಲೆ ಸ್ಥಾಪಿಸಿದ ಶೀಲಾ ಇರಾನಿ ಸ್ಮರಣೆ

ಪರೋಪಕಾರಿ ಮನಸ್ಸನ್ನು ಹೊಂದಿದ್ದ ಶೀಲಾ ಇರಾನಿ ತಮ್ಮ ಸಾಮಾಜಿಕ ಕಾರ್ಯಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿದು ಉಳಿದಿದ್ದಾರೆ. ಶಿಕ್ಷಣ ತಜ್ಞೆ, ಸಂಸದೀಯ ಪಟುವಾಗಿದ್ದ ಶೀಲಾ ಇರಾನಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ನಗರದ ಬೃಂದಾವನ ಬಡಾವಣೆಯಲ್ಲಿರುವ ಚಾಮುಂಡಿ ಮಕ್ಕಳ ಮನೆಯಲ್ಲಿ ಕಳೆದ ಭಾನುವಾರ ನಡೆಸಲಾಯಿತು.
ಹೊಸದಿಲ್ಲಿಯ ಶಿಕ್ಷಕಿ ವೃತ್ತಿಯ ಜತೆಗೆ ಜೀವನ ಪ್ರಾರಂಭಿಸಿದ ಅವರು, ಸೇಂಟ್ ಜಾನ್ಸ್ ಆಂಬುಲೆನ್ಸ್ ಕಾರ್ಪ್ಸ್‌ನಲ್ಲಿ ಸ್ವಯಂಸೇವಕರಾಗಿದ್ದರು. ಅವರ ಸೇವೆಗಾಗಿ ವೈಸ್‌ರಾಯ್ ಪ್ರಮಾಣಪತ್ರವನ್ನೂ ಪಡೆದಿದ್ದರು ಎಂಬುದು ಗಮನಾರ್ಹವಾದದ್ದಾಗಿದೆ.

ಮೈಸೂರು- ರೋಟರಿ ಶಾಲೆ ಆರಂಭ
೧೯೫೧ರಲ್ಲಿ ಮೈಸೂರಿಗೆ ಬಂದ ಅವರು ೧೯೬೮ರಲ್ಲಿ ಐಡಿಯಲ್ ಜಾವಾ ರೋಟರಿ ಶಾಲೆಯನ್ನು ಸ್ಥಾಪಿಸಿದ್ದರು. ಇದು ನಗರದ ಅತ್ಯಂತ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿ ಬೆಳೆಯಿತು.

ಮೈಸೂರಿನಲ್ಲಿ ಚಾಮುಂಡಿ ಮಕ್ಕಳ ಮನೆಯನ್ನು ನಿರ್ಮಿಸಿದ್ದರು. ಅದು ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ಅವರು ೨೦೦೩ರ ಏಪ್ರಿಲ್ ೧೦ರಂದು ನಿಧನರಾದರು.

ರಾಜಕೀಯ
ಕರ್ನಾಟಕ ವಿಧಾನಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ೧೯೬೮ರಲ್ಲಿ ರಾಜಕೀಯ ಜೀವನ ಪ್ರಾರಂಭಿಸಿದ್ದರು. ೧೯೯೩ ಮತ್ತು ೧೯೯೫ರ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿದ್ದರು.

೧೯೯೫ರಲ್ಲಿ ಆಂಗ್ಲೋ?ಇಂಡಿಯನ್ ಕೋಟಾದಲ್ಲಿ ಲೋಕಸಭೆಗೆ ನಾಮನಿರ್ದೇಶನಗೊಂಡರು. ಆಂಗ್ಲೋ-ಇಂಡಿಯನ್ ಅಸೋಸಿೆುೀಂಶನ್‌ನ ಉಪಾಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಸೇವೆ
ಶೀಲಾ ಅವರು ಮಾನವೀಯತೆಗೆ ಮಿಡಿಯುವಂತವರಾಗಿದ್ದು, ಸಾಮಾಜಿಕ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುದ್ದರು. ಮೈಸೂರಿನಲ್ಲಿ ಕುಷ್ಠ ರೋಗಿಗಳಿಗೆ ಚಿಕಿತ್ಸೆ, ಅನಾಥಾಶ್ರಮದ ಉಪಾಧ್ಯಕ್ಷರಾಗಿ, ಹಲವಾರು ಆಸ್ಪತ್ರೆಗಳ ಟ್ರಸ್ಟಿಯಾಗಿ ಕೆಲಸ ಮಾಡಿದ್ದರು. ಪಿ.ಕೆ. ಸ್ಯಾನಿಟೋರಿಯಂನ ಮಂಡಳಿಯಲ್ಲಿದ್ದರು.

ಫರೋಖ್ ಜತೆ ವಿವಾಹ
ಉದ್ಯಮಿ ಫರೋಖ್ ಕೆ. ಇರಾನಿ (ಎಫ್.ಕೆ. ಇರಾನಿ) ಅವರನ್ನು ಶೀಲಾ ವಿವಾಹವಾದರು. ಫರೋಖ್ ಅವರು ಐಡಿಯಲ್ ಜಾವಾ (ಇಂಡಿಯಾ) ಲಿಮಿಟೆಡ್ ಸ್ಥಾಪಿಸಿದರು. ಇದು ಜಾವಾ ಮೋಟಾರ್ ಸೈಕಲ್‌ಗಳು ಮತ್ತು ಪ್ರಸಿದ್ಧ ಯಜ್ಡಿ ರೋಡ್ ಕಿಂಗ್ ಬೈಕ್‌ಗಳನ್ನು ಮಾರಾಟ ಮಾಡುವ ಕಂಪನಿಯಾಗಿತ್ತು. ಈ ದಂಪತಿಗೆ ಪುತ್ರರಾದ ರೈಯಾನ್ ಇರಾನಿ, ಕೈರಸ್ ಎಫ್.ಇರಾನಿ ಮತ್ತು ಪುತ್ರಿ ಮೊರ್ವಾರಿಡ್ ಫೆರ್ನಾಂಡಿಸ್ ಇದ್ದಾರೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago