Categories: ಅಂಕಣಗಳು

ಹೂ ಮಾರುವ ದೇವರ ಗುಡ್ಡ ಸಿದ್ದಪ್ಪಾಜಿ

• ಕೀರ್ತಿ ಬೈಂದೂರು

ಸಂಜೆಗತ್ತಲ ಹೊತ್ತಿನಲ್ಲಿ ಹೂವಿನ ದೊಡ್ಡ ಬುಟ್ಟಿಯನ್ನು ಹ್ಯಾಂಡಲ್ ಬಾರ್ ಮೇಲಿಟ್ಟು, ಸೈಕಲ್ ತುಳಿಯುತ್ತಾ ಸಿದ್ದಪ್ಪಾಜಿ ಅವರು ಮಾನಸ ಗಂಗೋತ್ರಿ ಹಾದಿಯ ಮಾರ್ಗವಾಗಿ ಪಡುವಾರಹಳ್ಳಿಗೆ ಸಾಗುತ್ತಿದ್ದರು. ನಲವತ್ತೈದು ವರ್ಷಗಳಿಂದ ಹೂಗಳೇ ತನ್ನ ಬದುಕಿನ ಆಧಾರವೆಂದು ಇವರು ಹೇಳುತ್ತಿದ್ದರೆ, ಹೂಂಗುಟ್ಟುವ ರೀತಿಯಲ್ಲಿ ಸೇವಂತಿಗೆ, ಮೈಸೂರು ಮಲ್ಲಿಗೆ, ಜಾಜಿ ಹೂಗಳೆಲ್ಲ ಬುಟ್ಟಿಯಲ್ಲಿ ನಗು ಬೀರುತ್ತಿದ್ದವು.

ಸಿದ್ದಪ್ಪಾಜಿ ಅವರ ತಾತ ಕಾಡಲೆಯುತ್ತಾ, ತುಳಸಿ ಎಲೆಗಳನ್ನು ಆಯ್ದು ತಂದು, ಮಾಲೆ ಕಟ್ಟುತ್ತಿದ್ದರು. ನಂತರ ಇವರ ತಂದೆ ಚಿಕ್ಕಣ್ಣ ಅವರು ಹೂ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡರು. ತಂದೆಯವರ ಜೊತೆಗೂಡಿ ಹೂ ಕಟ್ಟಲು ಆರಂಭಿಸಿದಾಗ ಸಿದ್ದಪ್ಪಾಜಿ ಅವರು ಆರೇಳು ವರ್ಷದ ಹುಡುಗ ತಂದೆ ವ್ಯಾಪಾರಕ್ಕೆಂದು ಕಟ್ಟಿದ ಹೂಗಳು ಮನದೇವರಿಗೂ ಸಮರ್ಪಿತವಾಗುತ್ತಿದ್ದವು. ತಂದೆಯ ಜೊತೆ ತಾಯಿಯೂ ಕೂಡಿಕೊಂಡು ಹೂ ಕಟ್ಟುತ್ತಿದ್ದರೂ ತಂದೆಯ ‘ಕೈ’ಗಾರಿಕೆಯೇ ವಿಶೇಷ ಎನ್ನುತ್ತಾರೆ ಸಿದ್ಧಪ್ಪಾಜಿ.

ಒಂದು ಮಾರು ಹೂವಿಗೆ ಇಪ್ಪತ್ತೈದು ಪೈಸೆ ಇದ್ದ ಕಾಲದಲ್ಲಿ ಸಿದ್ದಪ್ಪಾಜಿ ಅವರು ವ್ಯಾಪಾರಕ್ಕಿಳಿದಿದ್ದರು. ನಾಲ್ಕನೇ ತರಗತಿ ಓದುತ್ತಿದ್ದ ಹುಡುಗ ಸಿದ್ದಪ್ಪಾಜಿ ಅವರಿಗೆ ದುಡಿಮೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಯಿತು. ಇಂದಿಗೂ ಬೆಳಗಿನ ಜಾವ ನಾಲ್ಕು ಗಂಟೆಗೆ ಎದ್ದು, ಚಾಮುಂಡೇಶ್ವರಿ ಟಾಕಿಸ್ ಪಕ್ಕದಲ್ಲಿ ಮಾರುವವರಿಂದ ಸೇವಂತಿಗೆ ಹೂ, ಮಲಿಗೆ ಮೊಗ್ಗುಗಳನ್ನು ಪಡೆದು, ಆರು ಗಂಟೆಯ ಹೊತ್ತಿಗೆ ಸೈಕಲ್ ಸವಾರಿಯೊಂದಿಗೆ ಇವರ ದಿನದ ದುಡಿಮೆ ಆರಂಭವಾಗುತ್ತದೆ. ಬೆಳಗಿನ ಹೂವಿನ ವ್ಯಾಪಾರ ಮುಗಿಯುವಾಗ ಸಮಯ ಹತ್ತೂವರೆಯಾಗಿರುತ್ತದೆ. ಹನ್ನೊಂದರಿಂದ ಸಂಜೆ ನಾಲ್ಕೂವರೆಯವರೆಗೆ ಮಲ್ಲಿಗೆ ಮೊಗ್ಗುಗಳನ್ನು ಕಟ್ಟಿ ಮಾಲೆಯಾಗಿಸುತ್ತಾರೆ. ಮತ್ತೆ ಸಂಜೆ ಐದು ಗಂಟೆಗೆ ಇನ್ನೊಂದು ಸುತ್ತಿನ ಸವಾರಿ! ಜನತಾನಗರ, ಅಕ್ಷಯ ಭಂಡಾರ್, ವಿಜಯಶ್ರೀಪುರ, ಜಯಲಕ್ಷ್ಮೀಪುರಂ, ಗಂಗೋತ್ರಿ ಮಾರ್ಗಗಳಲ್ಲಿ ಸಿದ್ದಪ್ಪಾಜಿ ಅವರು ಹೆಚ್ಚಾಗಿ ಸಂಚರಿಸುತ್ತಾರೆ.

ಮೂವತ್ತು ವರ್ಷಗಳ ಹಿಂದೆ ಸಿದ್ದಪ್ಪಾಜಿ ಅವರು ಸಿದ್ದಪ್ಪಾಜಿ ದೇವರಗುಡ್ಡರಾದರು. ಅಂದಿನಿಂದ ಇಂದಿನವರೆಗೂ ಬಿಸಿಲು, ಮಳೆ, ಚಳಿ ಎಂಬುದನ್ನು ಲೆಕ್ಕಿಸದೆ ಕಾಲಿಗೆ ಚಪ್ಪಲಿ ಮೆಟ್ಟುವುದನ್ನೇ ನಿಲ್ಲಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿರುವವರು, ‘ಹೂವಿಗೆಷ್ಟಪ್ಪಾ? ಎಂದು ಕೇಳುವುದು ಸಹಜ ಹಾಗಂದ ತಕ್ಷಣವೆ ಸೈಕಲ್ ನಿಲ್ಲಿಸಿ, ಕಾಲೂರಿ, ಮುಳ್ಳು ಚುಚ್ಚಿಸಿಕೊಂಡ ಉದಾಹರಣೆಗಳು ಬೇಕಾದಷ್ಟಿವೆ. ಕತ್ತಲು ಆವರಿಸುತ್ತಿದ್ದರೂ ಮಣ್ಣು, ದೂಳಿನ ಕಣಗಳನ್ನು ಅಂಟಿಸಿಕೊಂಡ ವಾದಗಳು ಸಿದ್ದಪ್ಪಾಜೆ ಅವರ ಶ್ರಮಸಂಸ್ಕೃತಿಯನ್ನು ಸಾರುತ್ತಿದ್ದವು. ರಾಗಿಮುದ್ದ ಸೊಪ್ಪು-ಕಾಳಿನ ಸಾರು ತನ್ನ ಶಕ್ತಿಯ ಗುಟ್ಟೆನ್ನುವ ಸಿದ್ದಪ್ಪಾಜಿ ಅವರಿಗೀಗ ಅರವತ್ತೊಂದರ ಪ್ರಾಯ, ಹೂವಿನ ವ್ಯಾಪಾರ ತನ್ನ ಬದುಕನ್ನು ಎಂದೂ ಮಂಕಾಗಿಸಿಲ್ಲ. ಹೆಂಡತಿ, ಮಕ್ಕಳ ಹೊಟ್ಟೆಯನ್ನು ಪೊರೆಯುತ್ತಿರುವದೇ ಇದು. ಹೂವಿನ ವ್ಯಾಪಾರವನ್ನು ಯಾರು ಬೇಕಾದರೂ ಮಾಡಬಹುದು. ಇವತ್ತು ಕೇವಲ 500 ರೂಪಾಯಿ ಬಂಡವಾಳ ಹಾಕಿದರೂ ಸಾಕು, ನಾಳೆಗೆ ಅದೇ ಹಣ ಸಾವಿರ ರೂಪಾಯಿಯಾಗುತ್ತದೆ. ಹೂವಿನ ವ್ಯಾಪಾರದಲ್ಲಿ ಸುಲಭ ದುಡ್ಡು ಸಂಪಾದಿಸಬಹುದು. ಆದರೆ ಇವತ್ತು ಬಂದ ಲಾಭ ನಾಳೆಯೂ ಬರುತ್ತದೆಂಬ ನಿರೀಕ್ಷೆ ಇಟ್ಟುಕೊಳ್ಳಬಾರದು ಎಂದು ತಮ್ಮ ಅನುಭವವನ್ನು ಹಂಚಿಕೊಳ್ಳುವ ಸಿದ್ದಪ್ಪಾಜಿ, ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಎಂಬ ಕಿವಿ ಮಾತನ್ನೂ ಹೇಳುತ್ತಾರೆ.

‘ನಿಮ್ಮ ದುಡಿಮೆಯಲ್ಲಿ ಒಂದಷ್ಟು ಕೂಡಿಟ್ಟು, ಸ್ಕೂಟರ್ ತೆಗೆದುಕೊಳ್ಳಬಹುದಲ್ಲಾ’ ಎಂದು ಅನೇಕರು ಸಲಹೆ ನೀಡಿದ್ದರು. ಅದಕ್ಕಿವರು ‘ಜೀವನಪೂರ್ತಿ ನನ್ ಜೊತೆಗೆ ನನ್ ರಥನೂ ಇರ್ಬೇಕು’ ಎನ್ನುತ್ತಾ, ಸೈಕಲ್ ಜೊತೆಗಿನ ಬಾಂಧವ್ಯವನ್ನು ಸ್ಮರಿಸಿಕೊಳ್ಳುತ್ತಾರೆ.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago