Categories: ಅಂಕಣಗಳು

ಹೂ ಮಾರುವ ದೇವರ ಗುಡ್ಡ ಸಿದ್ದಪ್ಪಾಜಿ

• ಕೀರ್ತಿ ಬೈಂದೂರು

ಸಂಜೆಗತ್ತಲ ಹೊತ್ತಿನಲ್ಲಿ ಹೂವಿನ ದೊಡ್ಡ ಬುಟ್ಟಿಯನ್ನು ಹ್ಯಾಂಡಲ್ ಬಾರ್ ಮೇಲಿಟ್ಟು, ಸೈಕಲ್ ತುಳಿಯುತ್ತಾ ಸಿದ್ದಪ್ಪಾಜಿ ಅವರು ಮಾನಸ ಗಂಗೋತ್ರಿ ಹಾದಿಯ ಮಾರ್ಗವಾಗಿ ಪಡುವಾರಹಳ್ಳಿಗೆ ಸಾಗುತ್ತಿದ್ದರು. ನಲವತ್ತೈದು ವರ್ಷಗಳಿಂದ ಹೂಗಳೇ ತನ್ನ ಬದುಕಿನ ಆಧಾರವೆಂದು ಇವರು ಹೇಳುತ್ತಿದ್ದರೆ, ಹೂಂಗುಟ್ಟುವ ರೀತಿಯಲ್ಲಿ ಸೇವಂತಿಗೆ, ಮೈಸೂರು ಮಲ್ಲಿಗೆ, ಜಾಜಿ ಹೂಗಳೆಲ್ಲ ಬುಟ್ಟಿಯಲ್ಲಿ ನಗು ಬೀರುತ್ತಿದ್ದವು.

ಸಿದ್ದಪ್ಪಾಜಿ ಅವರ ತಾತ ಕಾಡಲೆಯುತ್ತಾ, ತುಳಸಿ ಎಲೆಗಳನ್ನು ಆಯ್ದು ತಂದು, ಮಾಲೆ ಕಟ್ಟುತ್ತಿದ್ದರು. ನಂತರ ಇವರ ತಂದೆ ಚಿಕ್ಕಣ್ಣ ಅವರು ಹೂ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡರು. ತಂದೆಯವರ ಜೊತೆಗೂಡಿ ಹೂ ಕಟ್ಟಲು ಆರಂಭಿಸಿದಾಗ ಸಿದ್ದಪ್ಪಾಜಿ ಅವರು ಆರೇಳು ವರ್ಷದ ಹುಡುಗ ತಂದೆ ವ್ಯಾಪಾರಕ್ಕೆಂದು ಕಟ್ಟಿದ ಹೂಗಳು ಮನದೇವರಿಗೂ ಸಮರ್ಪಿತವಾಗುತ್ತಿದ್ದವು. ತಂದೆಯ ಜೊತೆ ತಾಯಿಯೂ ಕೂಡಿಕೊಂಡು ಹೂ ಕಟ್ಟುತ್ತಿದ್ದರೂ ತಂದೆಯ ‘ಕೈ’ಗಾರಿಕೆಯೇ ವಿಶೇಷ ಎನ್ನುತ್ತಾರೆ ಸಿದ್ಧಪ್ಪಾಜಿ.

ಒಂದು ಮಾರು ಹೂವಿಗೆ ಇಪ್ಪತ್ತೈದು ಪೈಸೆ ಇದ್ದ ಕಾಲದಲ್ಲಿ ಸಿದ್ದಪ್ಪಾಜಿ ಅವರು ವ್ಯಾಪಾರಕ್ಕಿಳಿದಿದ್ದರು. ನಾಲ್ಕನೇ ತರಗತಿ ಓದುತ್ತಿದ್ದ ಹುಡುಗ ಸಿದ್ದಪ್ಪಾಜಿ ಅವರಿಗೆ ದುಡಿಮೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಯಿತು. ಇಂದಿಗೂ ಬೆಳಗಿನ ಜಾವ ನಾಲ್ಕು ಗಂಟೆಗೆ ಎದ್ದು, ಚಾಮುಂಡೇಶ್ವರಿ ಟಾಕಿಸ್ ಪಕ್ಕದಲ್ಲಿ ಮಾರುವವರಿಂದ ಸೇವಂತಿಗೆ ಹೂ, ಮಲಿಗೆ ಮೊಗ್ಗುಗಳನ್ನು ಪಡೆದು, ಆರು ಗಂಟೆಯ ಹೊತ್ತಿಗೆ ಸೈಕಲ್ ಸವಾರಿಯೊಂದಿಗೆ ಇವರ ದಿನದ ದುಡಿಮೆ ಆರಂಭವಾಗುತ್ತದೆ. ಬೆಳಗಿನ ಹೂವಿನ ವ್ಯಾಪಾರ ಮುಗಿಯುವಾಗ ಸಮಯ ಹತ್ತೂವರೆಯಾಗಿರುತ್ತದೆ. ಹನ್ನೊಂದರಿಂದ ಸಂಜೆ ನಾಲ್ಕೂವರೆಯವರೆಗೆ ಮಲ್ಲಿಗೆ ಮೊಗ್ಗುಗಳನ್ನು ಕಟ್ಟಿ ಮಾಲೆಯಾಗಿಸುತ್ತಾರೆ. ಮತ್ತೆ ಸಂಜೆ ಐದು ಗಂಟೆಗೆ ಇನ್ನೊಂದು ಸುತ್ತಿನ ಸವಾರಿ! ಜನತಾನಗರ, ಅಕ್ಷಯ ಭಂಡಾರ್, ವಿಜಯಶ್ರೀಪುರ, ಜಯಲಕ್ಷ್ಮೀಪುರಂ, ಗಂಗೋತ್ರಿ ಮಾರ್ಗಗಳಲ್ಲಿ ಸಿದ್ದಪ್ಪಾಜಿ ಅವರು ಹೆಚ್ಚಾಗಿ ಸಂಚರಿಸುತ್ತಾರೆ.

ಮೂವತ್ತು ವರ್ಷಗಳ ಹಿಂದೆ ಸಿದ್ದಪ್ಪಾಜಿ ಅವರು ಸಿದ್ದಪ್ಪಾಜಿ ದೇವರಗುಡ್ಡರಾದರು. ಅಂದಿನಿಂದ ಇಂದಿನವರೆಗೂ ಬಿಸಿಲು, ಮಳೆ, ಚಳಿ ಎಂಬುದನ್ನು ಲೆಕ್ಕಿಸದೆ ಕಾಲಿಗೆ ಚಪ್ಪಲಿ ಮೆಟ್ಟುವುದನ್ನೇ ನಿಲ್ಲಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿರುವವರು, ‘ಹೂವಿಗೆಷ್ಟಪ್ಪಾ? ಎಂದು ಕೇಳುವುದು ಸಹಜ ಹಾಗಂದ ತಕ್ಷಣವೆ ಸೈಕಲ್ ನಿಲ್ಲಿಸಿ, ಕಾಲೂರಿ, ಮುಳ್ಳು ಚುಚ್ಚಿಸಿಕೊಂಡ ಉದಾಹರಣೆಗಳು ಬೇಕಾದಷ್ಟಿವೆ. ಕತ್ತಲು ಆವರಿಸುತ್ತಿದ್ದರೂ ಮಣ್ಣು, ದೂಳಿನ ಕಣಗಳನ್ನು ಅಂಟಿಸಿಕೊಂಡ ವಾದಗಳು ಸಿದ್ದಪ್ಪಾಜೆ ಅವರ ಶ್ರಮಸಂಸ್ಕೃತಿಯನ್ನು ಸಾರುತ್ತಿದ್ದವು. ರಾಗಿಮುದ್ದ ಸೊಪ್ಪು-ಕಾಳಿನ ಸಾರು ತನ್ನ ಶಕ್ತಿಯ ಗುಟ್ಟೆನ್ನುವ ಸಿದ್ದಪ್ಪಾಜಿ ಅವರಿಗೀಗ ಅರವತ್ತೊಂದರ ಪ್ರಾಯ, ಹೂವಿನ ವ್ಯಾಪಾರ ತನ್ನ ಬದುಕನ್ನು ಎಂದೂ ಮಂಕಾಗಿಸಿಲ್ಲ. ಹೆಂಡತಿ, ಮಕ್ಕಳ ಹೊಟ್ಟೆಯನ್ನು ಪೊರೆಯುತ್ತಿರುವದೇ ಇದು. ಹೂವಿನ ವ್ಯಾಪಾರವನ್ನು ಯಾರು ಬೇಕಾದರೂ ಮಾಡಬಹುದು. ಇವತ್ತು ಕೇವಲ 500 ರೂಪಾಯಿ ಬಂಡವಾಳ ಹಾಕಿದರೂ ಸಾಕು, ನಾಳೆಗೆ ಅದೇ ಹಣ ಸಾವಿರ ರೂಪಾಯಿಯಾಗುತ್ತದೆ. ಹೂವಿನ ವ್ಯಾಪಾರದಲ್ಲಿ ಸುಲಭ ದುಡ್ಡು ಸಂಪಾದಿಸಬಹುದು. ಆದರೆ ಇವತ್ತು ಬಂದ ಲಾಭ ನಾಳೆಯೂ ಬರುತ್ತದೆಂಬ ನಿರೀಕ್ಷೆ ಇಟ್ಟುಕೊಳ್ಳಬಾರದು ಎಂದು ತಮ್ಮ ಅನುಭವವನ್ನು ಹಂಚಿಕೊಳ್ಳುವ ಸಿದ್ದಪ್ಪಾಜಿ, ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಎಂಬ ಕಿವಿ ಮಾತನ್ನೂ ಹೇಳುತ್ತಾರೆ.

‘ನಿಮ್ಮ ದುಡಿಮೆಯಲ್ಲಿ ಒಂದಷ್ಟು ಕೂಡಿಟ್ಟು, ಸ್ಕೂಟರ್ ತೆಗೆದುಕೊಳ್ಳಬಹುದಲ್ಲಾ’ ಎಂದು ಅನೇಕರು ಸಲಹೆ ನೀಡಿದ್ದರು. ಅದಕ್ಕಿವರು ‘ಜೀವನಪೂರ್ತಿ ನನ್ ಜೊತೆಗೆ ನನ್ ರಥನೂ ಇರ್ಬೇಕು’ ಎನ್ನುತ್ತಾ, ಸೈಕಲ್ ಜೊತೆಗಿನ ಬಾಂಧವ್ಯವನ್ನು ಸ್ಮರಿಸಿಕೊಳ್ಳುತ್ತಾರೆ.

 

ಆಂದೋಲನ ಡೆಸ್ಕ್

Recent Posts

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

3 mins ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

2 hours ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

3 hours ago

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

3 hours ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

15 hours ago