ಅಂಕಣಗಳು

ರಾಜ್ಯ ಸರ್ಕಾರಕ್ಕೆ ಆರು ತಿಂಗಳು; ಜನರು ದೌರ್ಭಾಗ್ಯ ಎದುರಿಸುವಂತಾಗಿದೆ

• ಆರ್.ರಘು ಕೌಟಿಲ್ಯ

ರಾಜ್ಯದಲ್ಲಿ ಸರ್ಕಾರ ಬದಲಾಗಿದೆ. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೊಳ್ಳಲು ರಾಜ್ಯದಲ್ಲಿ ನೂತನ ಸರ್ಕಾರದ ಕೊಡುಗೆ ಏನಿದೆ? ಎಂದು ಪ್ರಶ್ನಿಸಿಕೊಂಡರೆ, ನೂತನ ಸರ್ಕಾರ ಬಂದಾಗಿನಿಂದ ಜನರು ಸಂಕಷ್ಟ ವನ್ನೇ ಎದುರಿಸಿದ್ದಾರೆ ವಿನಾ ಜನಜೀವನ ಸುಧಾರಿಸಿದ ಉದಾಹರಣೆಗಳಿಲ್ಲ ಎಂಬ ಉತ್ತರವಿದೆ.

ಕಳೆದ 6 ತಿಂಗಳುಗಳಿಂದ ಸರ್ಕಾರದ ಪ್ರತಿಯೊಂದು ಯೋಜನೆಯೂ ವೈಫಲ್ಯ ಕಂಡಿದೆ. ‘ಕೆಲಸ ಮಾಡಿದ್ದು ಒಂದಿಷ್ಟು, ಪ್ರಚಾರ ಮಾತ್ರ ಊರಷ್ಟು ‘ ಎನ್ನುವಂತೆ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರವನ್ನು ಮಾಡಿತೇ ವಿನಾ ಉತ್ಪನ್ನ ಆಧಾರಿತ ಅಭಿವೃದ್ಧಿಯನ್ನಾಗಲಿ ಅಥವಾ ಜನರಿಗೆ, ಯುವ ಸಮೂಹಕ್ಕೆ ಬದುಕು ಕಟ್ಟಿಕೊಡುವ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ.
ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರದ ಛಾಯೆ ಆವರಿಸಿತ್ತು. ಮುಂಗಾರು ಅಭಾವ ತಲೆದೋರಿತ್ತು. ಇರುವ ಕಾವೇರಿ ನೀರು ನಮಗೆ ಸಾಕಾಗುತ್ತಾ ಎಂದು ಯೋಚಿಸುವ ಬೆನ್ನಲ್ಲೇ ಸರ್ಕಾರ ಮರು ಮಾತಾಡದೆ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ರಾಜ್ಯದ ರೈತ ರನ್ನು ಸಂಕಷ್ಟಕ್ಕೆ ಸಿಲುಕಿಸಿ ಕೃಷಿ ಚಟುವಟಿಕೆ ಕುಂಠಿತವಾಗುವಂತೆ ಮಾಡಿತು. ಕಾವೇರಿ ವಿಚಾರವಾಗಿ ನಡೆದ ರೈತ ಚಳವಳಿಗಳನ್ನೂ ಹತ್ತಿಕ್ಕಿ ರೈತರನ್ನು ಜೈಲಿಗಟ್ಟಿದ ರೈತ ವಿರೋಧಿ ಸರ್ಕಾರ ಎಂಬ ಹಣೆಪಟ್ಟಿ ಹೊಂದಿದೆ.

ಕಳೆದ 6 ತಿಂಗಳುಗಳಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿ ನೆಲಕಚ್ಚಿದೆ. ಸಿಎಂ ತವರು ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಬಗ್ಗೆ ಸ್ವತಃ ಪಕ್ಷದ ಸಚಿವ ಪ್ರಿಯಾಂಕ್ ಖರ್ಗೆಯವರೇ ಹೇಳಿಕೊಂಡಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ ಗ್ಯಾರಂಟಿ ಯೋಜನೆಗಳ ಜಾರಿಗೆ ಯಾವ ದೂರದೃಷ್ಟಿಯೂ ಇಲ್ಲದೆ ಜಾರಿಗೊಳಿಸಿ ಸಾಕಷ್ಟು ತೊಂದರೆಯನ್ನೇ ಸೃಷ್ಟಿಸಿದೆ.

‘ಶಕ್ತಿ’ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಸರ್ಕಾರ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ತಂದೊಡ್ಡಿದೆ. ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ವಿದ್ಯುತ್ ಬಿಲ್ ವಿಪರೀತ ಏರಿಕೆ ಮಾಡಿದೆ. ಅಲ್ಲದೆ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಮಹಿಳೆಯರಿಗೆ ಕೇವಲ ಒಂದು ತಿಂಗಳ ಕಂತು ಹಣ ಮಾತ್ರ ಬಂದಿದೆ. ನಂತರ ಅದೂ ಇಲ್ಲ. ಇನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ನೀಡಬೇಕಿದ್ದ ಯುವನಿಧಿ ಯೋಜನೆ ಸದ್ದಿಲ್ಲದಂತಾಗಿದೆ. ಒಟ್ಟಾರೆ ಈ ಉಚಿತ ಭಾಗ್ಯಗಳಿಂದ ಜನರು ಪರೋಕ್ಷವಾಗಿ ದೌರ್ಭಾಗ್ಯ ಎದುರಿಸುವಂತಾಗಿದೆ.

ಸರ್ಕಾರಕ್ಕೆ ಮಹಿಳಾ ಸಬಲೀಕರಣ ಮಾಡುವ ಉದ್ದೇಶ ಇದ್ದಿದ್ದರೆ ಗುಡಿ ಕೈಗಾರಿಕೆ, ಗೃಹ ಕೈಗಾರಿಕೆ ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡಬಹುದಿತ್ತಲ್ಲವೇ? ಫಸಲ್ ಬಿಮಾ ಯೋಜನೆಯಡಿ ರೈತರಿಗೆ ನರೇಂದ್ರ ಮೋದಿ ಸರ್ಕಾರ ನೀಡುತ್ತಿದ್ದ 6,000 ರೂ.ಗಳಿಗೆ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ 4,000 ರೂ. ಸೇರಿಸಿ 10,000 ರೂ. ನೀಡುತ್ತಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯ ಸರ್ಕಾರದ 4,000 ರೂ.ಗಳನ್ನು ಕಡಿತಗೊಳಿಸಿದೆ.

ಇನ್ನು ರಾಷ್ಟ್ರೀಯ ಶಿಕ್ಷಣ ನೀತಿ ಏನು? ಅದರಲ್ಲಿರುವ ಅಂಶಗಳೇನು ಎಂಬುದನ್ನು ಚರ್ಚಿಸದೆಯೇ ಅದನ್ನು ಹಿಂಪಡೆದಿದೆ. ಮಕ್ಕಳಿಗೆ ಬದುಕಲು, ವೃತ್ತಿ ಮಾರ್ಗಗಳನ್ನು ತೋರಿಸುವ ವೈಜ್ಞಾನಿಕ ಶಿಕ್ಷಣ ಪದ್ಧತಿಯನ್ನು ನಿಲ್ಲಿಸಿ ಬೇಡದ ವಿಚಾರಗಳನ್ನು ಮಕ್ಕಳ ತಲೆಗೆ ತುಂಬುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.
(ಲೇಖಕರು, ರಾಜ್ಯ ಬಿಜೆಪಿ ಮುಖಂಡರು)

andolanait

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

6 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

7 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

8 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

8 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

8 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

9 hours ago