ಅಂಕಣಗಳು

ಹೊಸದಿಕ್ಕಿನತ್ತ ಚಲಿಸುತ್ತಿದೆ ರಾಜ್ಯ ರಾಜಕಾರಣ

ಅಧಿಕಾರ ಹಂಚಿಕೆ ವಿಫಲವಾದರೆ ಮಧ್ಯಂತರ ಚುನಾವಣೆಗೆ ಅಮಿತ್ ಶಾ ತಂತ್ರಗಾರಿಕೆ

ಕೆಲ ದಿನಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸುತ್ತಿರುವ ಚಟುವಟಿಕೆ ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಏಕೆಂದರೆ ಕೆಲ ದಿನಗಳ ಅವಧಿಯಲ್ಲಿ ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಪ್ರತ್ಯೇಕವಾಗಿ ಕರೆಸಿಕೊಂಡ ಅಮಿತ್ ಶಾ ರಾಜ್ಯ ರಾಜಕಾರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಮೂಲಗಳ ಪ್ರಕಾರ, ಎಚ್.ಡಿ.ಕುಮಾರಸ್ವಾಮಿ , ಬಿ.ವೈ.ವಿಜಯೇಂದ್ರ ಮತ್ತು ಆರ್.ಅಶೋಕ್ ಅವರ ಬಳಿ ಅಮಿತ್ ಶಾ ಚರ್ಚಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಭವಿಸಬಹುದಾದ ಬೆಳವಣಿಗೆಗಳ ಬಗ್ಗೆ. ವಸ್ತುಸ್ಥಿತಿಯೆಂದರೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಅವರ ಜಾಗದಲ್ಲಿ ಮುಂದುವರಿದರೆ ಬಿಜೆಪಿ ವರಿಷ್ಠರಿಗೆ ತುಂಬ ಕೆಲಸವೇನೂ ಇಲ್ಲ. ಆದರೆ ಈ ವರ್ಷಾಂತ್ಯದ ಹೊತ್ತಿಗೆ ಬಿಹಾರ ವಿಧಾನಸಭಾ ಚುನಾವಣೆ ಮುಗಿದ ನಂತರ ಕರ್ನಾಟಕದ ರಾಜಕಾರಣದಲ್ಲಿ ಘಟಸೋಟ ಸಂಭವಿಸುತ್ತದೆ ಎಂಬುದು ಬಿಜೆಪಿ ನಾಯಕರ ಅಂದಾಜು. ಅರ್ಥಾತ್ ಮುಖ್ಯಮಂತ್ರಿ ಹುದ್ದೆಗಾಗಿ ಕಾತರಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹೇರಿ ಸಿಎಂ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಲು ಹೊರಟಿದ್ದಾರೆ. ಆದರೆ ಅವರ ಕೈಗೆ ಅಧಿಕಾರ ಕೊಡಲು ಸಿದ್ದರಾಮಯ್ಯ ಅವರು ತಯಾರಿಲ್ಲ.

ಎಲ್ಲಕ್ಕಿಂತ ಮುಖ್ಯವಾಗಿ ಕರ್ನಾಟಕದಲ್ಲಿ ಪಕ್ಷ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ತಮ್ಮ ಮತ್ತು ಡಿಕೆಶಿ ನಡುವೆ ಒಪ್ಪಂದವಾಗಿದೆ ಎಂಬುದನ್ನೇ ಸಿದ್ದರಾಮಯ್ಯ ಅವರು ಒಪ್ಪುತ್ತಿಲ್ಲ. ಮತ್ತು ಈ ಬಗ್ಗೆ ದಿಲ್ಲಿಗೇ ನುಗ್ಗಿ ಸಿದ್ದರಾಮಯ್ಯ ಅವರು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಮೊದಲನೆಯದಾಗಿ, ತಮ್ಮ ಮತ್ತು ಡಿಕೆಶಿ ನಡುವೆ ಅಽಕಾರ ಹಂಚಿಕೆ ಒಪ್ಪಂದವಾಗಿದೆ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಎರಡನೆಯದಾಗಿ, ಪಕ್ಷದ ಶಾಸಕಾಂಗದಲ್ಲಿ ತಮ್ಮ ಬಲ ಹೆಚ್ಚೇ ಹೊರತು, ಡಿಕೆಶಿ ಅವರದಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ಹುಲಿಗಳ ಸಂರಕ್ಷಣೆ; ಆದಿವಾಸಿಗಳ ಹಿತರಕ್ಷಣೆ ನಡುವೆ ಇರಲಿ ಸಮನ್ವಯ

ಇದೇ ರೀತಿ ಪಕ್ಷದ ಶಾಸಕಾಂಗ ನಾಯಕನ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ತಾವು ಡಿಕೆಶಿಯನ್ನು ಮಣಿಸಿರುವುದಾಗಿ ಹೇಳಿದ ಸಿದ್ದರಾಮಯ್ಯ ಅವರು ಇಂತಹ ಮಾತುಗಳ ಮೂಲಕ ಪಕ್ಷದ ಹೈಕಮಾಂಡ್‌ಗೆ ಪರೋಕ್ಷ ಸಂದೇಶ ರವಾನಿಸಿದರು. ಅದೆಂದರೆ, ಪಕ್ಷದ ಶಾಸಕಾಂಗ ನಾಯಕನ ಆಯ್ಕೆ ಆಗಬೇಕಿರುವುದು ಶಾಸಕಾಂಗ ಸಭೆಯಲ್ಲೇ ಹೊರತು ಬೇರೆಲ್ಲೂ ಅಲ್ಲ ಎಂಬುದು. ಅರ್ಥಾತ್, ಮುಂದಿನ ದಿನಗಳಲ್ಲಿ ಸಿಎಂ ಹುದ್ದೆಯನ್ನು ಬಿಟ್ಟುಕೊಡಲು ಸೋನಿಯಾ ಗಾಂಧಿ ಅವರಾಗಲಿ, ರಾಹುಲ್ ಗಾಂಧಿ ಅವರಾಗಲಿ ತಮ್ಮನ್ನು ಕೋರಿದರೆ ಭವಿಷ್ಯದ ನಾಯಕನ ಆಯ್ಕೆ ಶಾಸಕಾಂಗ ಸಭೆಯಲ್ಲೇ ನಡೆಯಬೇಕು ಎಂಬುದು ಸಿದ್ದರಾಮಯ್ಯನವರ ಸ್ಪಷ್ಟ ನಿಲುವು. ಒಂದು ವೇಳೆ ವರಿಷ್ಠರು ಇದನ್ನು ಒಪ್ಪಿದರೆ ಸಿದ್ದರಾಮಯ್ಯ ಅವರು ಅನುಮಾನಕ್ಕೆ ಆಸ್ಪದವೇ ಇಲ್ಲದಂತೆ ದಲಿತ ನಾಯಕರೊಬ್ಬರ ಬೆನ್ನಿಗೆ ನಿಲ್ಲುತ್ತಾರೆ ಮತ್ತು ಅವರನ್ನು ಭವಿಷ್ಯದ ಮುಖ್ಯಮಂತ್ರಿ ಹುದ್ದೆಗೆ ತರಲು ಅಣಿಯಾಗುತ್ತಾರೆ.

ಈ ಅಂಶ ತಿಳಿದಿರುವುದರಿಂದಲೇ ಕಾಂಗ್ರೆಸ್ ಪಕ್ಷದ ದಲಿತ ನಾಯಕರು, ಮುಂದಿನ ಮುಖ್ಯಮಂತ್ರಿ ಹುದ್ದೆ ತಮಗೆ ದಕ್ಕಬೇಕು ಎಂದು ಪಟ್ಟು ಹಿಡಿದಿರುವುದು ಮತ್ತು ಬೃಹತ್ ಸಮಾವೇಶವೊಂದನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವುದು. ವಾಸ್ತವವಾಗಿ ಸಿದ್ದರಾಮಯ್ಯ ಅವರ ಈ ಇಂಗಿತ ಜಾರಿಯಾದರೆ ಭವಿಷ್ಯದ ಮುಖ್ಯಮಂತ್ರಿ ಹುದ್ದೆಗೆ ದಲಿತ ನಾಯಕರೇ ಬರುತ್ತಾರೆ. ಮತ್ತು ಈ ಹುದ್ದೆಯ ಮೇಲೆ ಕಣ್ಣಿಟ್ಟ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿಯಾಗಲಿದೆ. ಆದರೆ ಇಲ್ಲೊಂದು ಧರ್ಮಸಂಕಟವೂ ಇದೆ. ಅದೆಂದರೆ, ಭವಿಷ್ಯದ ಶಾಸಕಾಂಗ ನಾಯಕನ ಆಯ್ಕೆ ಶಾಸಕಾಂಗ ಸಭೆಯಲ್ಲೇ ನಡೆಯಬೇಕು ಎಂದಾದರೆ, ಡಿಕೆಶಿಗೆ ಅವಕಾಶ ಸಿಗುವುದಿಲ್ಲ ಎಂಬುದು ಒಂದಾದರೆ, ಡಿಕೆಶಿ ಭವಿಷ್ಯದ ಮುಖ್ಯಮಂತ್ರಿ ಹುದ್ದೆಗೆ ಬರಲು ಸಾಧ್ಯವಿಲ್ಲ ಎಂದಾದರೆ ಸಿದ್ದರಾಮಯ್ಯ ಅವರನ್ನು ಬದಲಿಸುವುದು ಏಕೆ ಎಂಬುದು ಮತ್ತೊಂದು. ಹೀಗಾಗಿ ಸಿದ್ದರಾಮಯ್ಯ ಅವರ ಲೆಕ್ಕಾಚಾರದ ಪ್ರಕಾರ, ಶಾಸಕಾಂಗ ನಾಯಕನ ಆಯ್ಕೆ ಶಾಸಕಾಂಗ ಪಕ್ಷದಲ್ಲೇ ನಡೆಯುತ್ತದೆ ಎಂದಾದರೆ ಡಿಕೆಶಿ ಅದನ್ನು ಒಪ್ಪುವುದಿಲ್ಲ. ಏಕೆಂದರೆ ಸಿದ್ದರಾಮಯ್ಯ ಅವರು ಕೆಳಗಿಳಿದು ತಾವು ಸಿಎಂ ಆಗುವುದಾದರೆ ಬೇರೆ ಮಾತು. ಆದರೆ ಶಾಸಕಾಂಗ ಸಭೆಯಲ್ಲೇ ನಾಯಕನ ಆಯ್ಕೆ ನಡೆಯಬೇಕು ಎಂದಾದರೆ ಡಿಕೆಶಿ ಮುಂದಿರುವ ಅವಕಾಶ ಕಡಿಮೆಯಾಗುತ್ತದೆ.

ಹೀಗಾಗಿ ಡಿಕೆಶಿ ಇದನ್ನು ಒಪ್ಪವುದಿಲ್ಲ. ಅಲ್ಲದೇ ವರಿಷ್ಠರೇನಾದರೂ ಇಂತಹ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಡಿಕೆಶಿ ತಿರುಗಿ ಬೀಳುತ್ತಾರೆ. ಡಿಕೆಶಿ ತಿರುಗಿ ಬಿದ್ದರೆ ಸರ್ಕಾರ ಅಸ್ಥಿರವಾಗುತ್ತದೆ ಎಂದಲ್ಲ, ಆದರೆ ಸಿಎಂ ಹುದ್ದೆಗಾಗಿ ಜಪಿಸುತ್ತಿರುವ ಡಿಕೆಶಿ ಬಂಡಾಯಕ್ಕೆ ಮುಂದಾಗುವುದಂತೂ ನಿಶ್ಚಿತ. ಡಿಕೆಶಿ ಬಂಡಾಯ ಹೂಡಿದರೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಪತ್ತಿಗೆ ಸಿಲುಕುವುದಿಲ್ಲ. ಏಕೆಂದರೆ, ಶಾಸಕಾಂಗ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಬಲ ಹೆಚ್ಚು. ಬಿಜೆಪಿ ವರಿಷ್ಠರ ಅನುಮಾನವೆಂದರೆ, ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಡಿಕೆಶಿ ದೊಡ್ಡ ಪ್ರಮಾಣದ ಬಂಡವಾಳ ಹೂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಬಾರಿ ಸಿಎಂ ಹುದ್ದೆ ದಕ್ಕಿಸಿಕೊಡುವ ಇಚ್ಛೆ ಸೋನಿಯಾ ಮತ್ತು ಪ್ರಿಯಾಂಕ ಗಾಂಧಿ ಅವರಲ್ಲಿದೆ.

ಇದನ್ನು ಓದಿ: ಗಗನಚುಕ್ಕಿ ಚಲಪಾತೋತ್ಸವಕ್ಕೆ ವರ್ಣರಂಚಿತ ತೆರೆ

ಹೀಗಾಗಿ ಬಿಹಾರ ವಿಧಾನಸಭೆ ಚುನಾವಣೆ ಮುಗಿದ ನಂತರ ಅವರು, ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಅವರನ್ನು ಕೋರುವ ಸಾಧ್ಯತೆ ಜಾಸ್ತಿ. ಹೀಗೆ ಕೋರಿದಾಗ ಸಿದ್ದರಾಮಯ್ಯ ಅವರು ಭವಿಷ್ಯದ ನಾಯಕನ ಆಯ್ಕೆ ಶಾಸಕಾಂಗ ಪಕ್ಷದಲ್ಲೇ ನಡೆಯಲಿ ಎನ್ನುತ್ತಾರೆ. ಆದರೆ ಸೋನಿಯಾ ಗಾಂಧಿ ಅವರು ಇದನ್ನು ಒಪ್ಪದೆ ಹೋದರೆ ಸರ್ಕಾರಕ್ಕೆ ಗಂಡಾಂತರ ಶುರುವಾಗುತ್ತದೆ ಎಂಬುದು ಬಿಜೆಪಿ ವರಿಷ್ಠರ ಲೆಕ್ಕಾಚಾರ. ಇಂತಹ ಲೆಕ್ಕಾಚಾರ ಇರುವುದರಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಸಿಕ್ಕ ನಂತರ ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ನಾಯಕರು ಕ್ರಿಯಾಶೀಲರಾಗಿದ್ದಾರೆ. ಬಿಜೆಪಿ ನಾಯಕರು ಭವಿಷ್ಯದ ಸಿದ್ಧತೆಗಾಗಿ ತುರ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಿದ್ದಾರೆ. ಈ ಚರ್ಚೆಯ ಮೂಲ ಉದ್ದೇಶ ಮಧ್ಯಂತರ ಚುನಾವಣೆಗೆ ಅಣಿಯಾಗಿ ಎಂಬುದೇ ಹೊರತು ಬೇರೇನಿಲ್ಲ.

ಪರಿಣಾಮ ಯುದ್ಧ ಕಾಲದಲ್ಲಿ ಶಸಾಭ್ಯಾಸ ಮಾಡುವುದಕ್ಕಿಂತ ಮುಂಚಿತವಾಗಿಯೇ ಶಸಾಭ್ಯಾಸ ಮಾಡುವುದು ಒಳ್ಳೆಯದು ಎಂಬುದು ಅವರ ಯೋಚನೆ. ಪರಿಣಾಮ ಕರ್ನಾಟಕದ ರಾಜಕಾರಣ ಹೊಸ ದಿಕ್ಕಿನತ್ತ ಚಲಿಸುತ್ತಿದೆ. ಮುಂದೇನು ಕತೆಯೋ?

” ಮುಂದಿನ ದಿನಗಳಲ್ಲಿ ಸಿಎಂ ಹುದ್ದೆಯನ್ನು ಬಿಟ್ಟುಕೊಡಲು ಸೋನಿಯಾ ಗಾಂಧಿ ಅವರಾಗಲಿ, ರಾಹುಲ್ ಗಾಂಧಿ ಅವರಾಗಲಿ ತಮ್ಮನ್ನು ಕೋರಿದರೆ ಭವಿಷ್ಯದ ನಾಯಕನ ಆಯ್ಕೆ ಶಾಸಕಾಂಗ ಸಭೆಯಲ್ಲೇ ನಡೆಯಬೇಕು ಎಂಬುದು ಸಿದ್ದರಾಮಯ್ಯನವರ ಸ್ಪಷ್ಟ ನಿಲುವು.”

-ಬೆಂಗಳೂರು ಡೈರಿ 
ಆರ್.ಟಿ.ವಿಠ್ಠಲಮೂರ್ತಿ 

ಆಂದೋಲನ ಡೆಸ್ಕ್

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

3 hours ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

3 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

3 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

3 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

3 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

3 hours ago