ರೈತನ ಆದಾಯ ಧ್ವಿಗುಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಳಿಂದ ಹಲವಾರು ಯೋಜನೆ
ದಾ.ರಾ.ಮಹೇಶ್, ವೀರನಹೊಸಹಳ್ಳಿ.
ಸರ್ಕಾರಿ ಇಲಾಖೆಗಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.
ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಈ ಯೋಜನೆಗಳಿಂದ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.
ರೈತಾಪಿ ವರ್ಗಕ್ಕೆ ತೋಟಗಾರಿಕೆ ಇಲಾಖೆಯಿಂದ ಸಾಕಷ್ಟು ಸೌಲಭ್ಯ ಸಿಗುತ್ತದೆ. ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ನೀಡಲು ಇಲಾಖೆಯ ವತಿಯಿಂದ ಸಬ್ಸಿಡಿ ಸಿಗುತ್ತದೆ.
ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ನೀರಾವರಿ ಹೊಂದಿರುವ ಹಾಗೂ ನೀರಾವರಿ ಮಾಡಲಿಚ್ಚಿಸುವ ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.
ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ರೈತರಿಗೆ ವಿವಿಧ ತೋಟಗಾರಿಕೆ ಬೆಳೆಗಳ ಘಟಕ ನಿರ್ಮಾಣಕ್ಕೆ ಸಹಾಯಧನ ಸಿಗುವುದು. ಸಾಮಾನ್ಯ ವರ್ಗದ ರೈತರಿಗೆ ಶೇ. ೪೦ ರಷ್ಟು ಸಬ್ಸಿಡಿ ಸಿಗುತ್ತದೆ. ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. ೫೦ ರಿಂದ ಶೇ.೯೦ ರಷ್ಟು ಸಹಾಯಧನ ಸಿಗುತ್ತದೆ.
ಯಾವ ಯಾವ ತೋಟಗಾರಿಕೆ ಬೆಳೆಗೆ ಸಬ್ಸಿಡಿ ಸಿಗುತ್ತದೆ?
ತೋಟಗಾರಿಕೆ ಮಾಡುತ್ತಿರುವ ಹಾಗೂ ತೋಟಗಾರಿಕೆ ಮಾಡಲಿಚ್ಚಿಸುವ ರೈತರಿಗೆ ದಾಳಿಂಬೆ, ಮಾವು, ಬಾಳೆ, ಸಪೋಟಾ, ಗೇರು, ಸೀತಾಫಲ, ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಸಿಗುತ್ತದೆ. ಇದರೊಂದಿಗೆ ಈರುಳ್ಳಿ ಶೇಖರಣಾ ಘಟಕ, ಅರಿಶಿಣ ಸಂಸ್ಕರಣಾ ಘಟಕ, ಹಣ್ಣು ಮಾಗಿಸುವ ಘಟಕ, ಜೇನು ಕೃಷಿ, ತೋಟಗಾರಿಕೆ ಬೆಳೆಗಳಿಗೆ ಪಾಲಿಹೌಸ್ ನಿರ್ಮಾಣಕ್ಕೆ ರೈತರಿಗೆ ಸಹಾಯಧನ ಸಿಗುತ್ತದೆ.
ಗುಲಾಬಿ ಹೂವು, ಸುಗಂಧರಾಜ, ಚೆಂಡುಹೂವು, ಸೇವಂತಿಗೆ, ಮಲ್ಲಿಗೆ ಹೂವು, ಕನಕಾಂಬರಿ ಸೇರಿದಂತೆ ಇನ್ನಿತರ ಹೂವುಗಳ ಪ್ರದೇಶ ವಿಸ್ತರಣೆಗೂ ರೈತರಿಗೆ ಸಹಾಯಧನ ಸಿಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ೨೦ ಹೆಚ್.ಪಿ ಟ್ರ್ಯಾಕ್ಟರ್ ಖರೀದಿಗೂ ಸಹಾಯಧನ ಸಿಗುತ್ತದೆ. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಸಿಗುತ್ತದೆ.
ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು?
ತೋಟಗಾರಿಕೆ ಇಲಾಖೆಯ ವತಿಯಿಂದ ರೈತರು ತೋಟಗಾರಿಕೆ ಬೆಳೆಗಳಿಗೆ ಸೌಲಭ್ಯ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಯಾವ ಬೆಳೆಗೆ ಸಹಾಯಧನ ಪಡೆಯಲಿಚ್ಚಿಸುವಿರೋ ಅದರ ಬಗ್ಗೆ ವಿಚಾರಿಸಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು.
ಸಬ್ಸಿಡಿ ಪಡೆಯಲು ಯಾವ ದಾಖಲೆ ಬೇಕು?
೧.ರೈತರಿಗೆ ಸ್ವಂತ ಜಮೀನು ಇರಬೇಕು.
೨. ನೀರಾವರಿ ಸೌಲಭ್ಯ ಇರಬೇಕು. ರೈತರು ಆಧಾರ್ ಕಾರ್ಡ್ ಹೊಂದಿರಬೇಕು.
೩. ಇತ್ತೀಚಿನ ಭಾವಚಿತ್ರ
೪. ಬ್ಯಾಂಕಿನ ಪಾಸ್ ಬುಕ್ ಝರಾಕ್ಸ್ ಪ್ರತಿ
೫. ಜಮೀನಿನ ಪಹಣಿ ಹೊಂದಿರಬೇಕು.
೬. ಮತದಾರ ಗುರುತಿನ ಚೀಟಿ ಹೊಂದಿರಬೇಕು. ಗಣಕೀಕರಣ ಬೆಳೆ ದೃಢೀಕರಣ ಪತ್ರ ಹೊಂದಿರಬೇಕು.
೭. ಫಲಾನುಭವಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು.
೮. ಫಲಾನುಭವಿ ಜಂಟಿ ಖಾತೆ ಹೊಂದಿದಲ್ಲಿ ಕುಟುಂಬದವರ ಒಪ್ಪಿಗೆಪತ್ರ, ಜಂಟಿ ಖಾತೆ ಹೊಂದಿರುವ ಇತರೆರೈತರು ಎನ್ಓಸಿ ನೀಡಿರಬೇಕು. ನೋಟರಿ ಕಡ್ಡಾಯವಾಗಿರುತ್ತದೆ.
ನಮ್ಮ ಇಲಾಖೆಯ ವತಿಯಿಂದ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ಲಭ್ಯತೆಯ ಆಧಾರ ಮೇಲೆ ಸೌಲಭ್ಯ ಒದಗಿಸಲಾಗುವುದು. ಅಂದರೆ ಅರ್ಜಿಗಳು ಹೆಚ್ಚಿಗೆ ಬಂದಾಗ ಹಿರಿತನದ ಆಧಾರದ ಮೇಲೆ ಹಿಂದೆ ತೋಟಗಾರಿಕೆ ಇಲಾಖೆಯ ವತಿಯಿಂದ ಸೌಲಭ್ಯ ಪಡೆದಿರಬಾರದು. ಅಂತಹ ರೈತರಿಗೆ ಆದ್ಯತೆ ನೀಡಲು ಅವಕಾಶವಿರುತ್ತದೆ.
ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…
ರಾತ್ರಿ ಪಾಳಿಯಲ್ಲಿ ನರ್ಸ್ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…
ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…
ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…
ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…