ತೋಟಗಾರಿಕೆ ಇಲಾಖೆಯಲ್ಲಿ ರೈತನಿಗೆ ಸಬ್ಸಿಡಿ

 

  ರೈತನ ಆದಾಯ ಧ್ವಿಗುಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಳಿಂದ ಹಲವಾರು ಯೋಜನೆ

ದಾ.ರಾ.ಮಹೇಶ್, ವೀರನಹೊಸಹಳ್ಳಿ.

ಸರ್ಕಾರಿ ಇಲಾಖೆಗಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.

ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಈ ಯೋಜನೆಗಳಿಂದ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.
ರೈತಾಪಿ ವರ್ಗಕ್ಕೆ ತೋಟಗಾರಿಕೆ ಇಲಾಖೆಯಿಂದ ಸಾಕಷ್ಟು ಸೌಲಭ್ಯ ಸಿಗುತ್ತದೆ. ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ನೀಡಲು ಇಲಾಖೆಯ ವತಿಯಿಂದ ಸಬ್ಸಿಡಿ ಸಿಗುತ್ತದೆ.

ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ನೀರಾವರಿ ಹೊಂದಿರುವ ಹಾಗೂ ನೀರಾವರಿ ಮಾಡಲಿಚ್ಚಿಸುವ ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ರೈತರಿಗೆ ವಿವಿಧ ತೋಟಗಾರಿಕೆ ಬೆಳೆಗಳ ಘಟಕ ನಿರ್ಮಾಣಕ್ಕೆ ಸಹಾಯಧನ ಸಿಗುವುದು. ಸಾಮಾನ್ಯ ವರ್ಗದ ರೈತರಿಗೆ ಶೇ. ೪೦ ರಷ್ಟು ಸಬ್ಸಿಡಿ ಸಿಗುತ್ತದೆ. ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. ೫೦ ರಿಂದ ಶೇ.೯೦ ರಷ್ಟು ಸಹಾಯಧನ ಸಿಗುತ್ತದೆ.

ಯಾವ ಯಾವ ತೋಟಗಾರಿಕೆ ಬೆಳೆಗೆ ಸಬ್ಸಿಡಿ ಸಿಗುತ್ತದೆ?
ತೋಟಗಾರಿಕೆ ಮಾಡುತ್ತಿರುವ ಹಾಗೂ ತೋಟಗಾರಿಕೆ ಮಾಡಲಿಚ್ಚಿಸುವ ರೈತರಿಗೆ ದಾಳಿಂಬೆ, ಮಾವು, ಬಾಳೆ, ಸಪೋಟಾ, ಗೇರು, ಸೀತಾಫಲ, ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಸಿಗುತ್ತದೆ. ಇದರೊಂದಿಗೆ ಈರುಳ್ಳಿ ಶೇಖರಣಾ ಘಟಕ, ಅರಿಶಿಣ ಸಂಸ್ಕರಣಾ ಘಟಕ, ಹಣ್ಣು ಮಾಗಿಸುವ ಘಟಕ, ಜೇನು ಕೃಷಿ, ತೋಟಗಾರಿಕೆ ಬೆಳೆಗಳಿಗೆ ಪಾಲಿಹೌಸ್ ನಿರ್ಮಾಣಕ್ಕೆ ರೈತರಿಗೆ ಸಹಾಯಧನ ಸಿಗುತ್ತದೆ.

ಗುಲಾಬಿ ಹೂವು, ಸುಗಂಧರಾಜ, ಚೆಂಡುಹೂವು, ಸೇವಂತಿಗೆ, ಮಲ್ಲಿಗೆ ಹೂವು, ಕನಕಾಂಬರಿ ಸೇರಿದಂತೆ ಇನ್ನಿತರ ಹೂವುಗಳ ಪ್ರದೇಶ ವಿಸ್ತರಣೆಗೂ ರೈತರಿಗೆ ಸಹಾಯಧನ ಸಿಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ೨೦ ಹೆಚ್.ಪಿ ಟ್ರ್ಯಾಕ್ಟರ್ ಖರೀದಿಗೂ ಸಹಾಯಧನ ಸಿಗುತ್ತದೆ. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಸಿಗುತ್ತದೆ.

ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು?
ತೋಟಗಾರಿಕೆ ಇಲಾಖೆಯ ವತಿಯಿಂದ ರೈತರು ತೋಟಗಾರಿಕೆ ಬೆಳೆಗಳಿಗೆ ಸೌಲಭ್ಯ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಯಾವ ಬೆಳೆಗೆ ಸಹಾಯಧನ ಪಡೆಯಲಿಚ್ಚಿಸುವಿರೋ ಅದರ ಬಗ್ಗೆ ವಿಚಾರಿಸಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು.

ಸಬ್ಸಿಡಿ ಪಡೆಯಲು ಯಾವ ದಾಖಲೆ ಬೇಕು?
೧.ರೈತರಿಗೆ ಸ್ವಂತ ಜಮೀನು ಇರಬೇಕು.
೨. ನೀರಾವರಿ ಸೌಲಭ್ಯ ಇರಬೇಕು. ರೈತರು ಆಧಾರ್ ಕಾರ್ಡ್ ಹೊಂದಿರಬೇಕು.
೩. ಇತ್ತೀಚಿನ ಭಾವಚಿತ್ರ
೪. ಬ್ಯಾಂಕಿನ ಪಾಸ್ ಬುಕ್ ಝರಾಕ್ಸ್ ಪ್ರತಿ
೫. ಜಮೀನಿನ ಪಹಣಿ ಹೊಂದಿರಬೇಕು.
೬. ಮತದಾರ ಗುರುತಿನ ಚೀಟಿ ಹೊಂದಿರಬೇಕು. ಗಣಕೀಕರಣ ಬೆಳೆ ದೃಢೀಕರಣ ಪತ್ರ ಹೊಂದಿರಬೇಕು.
೭. ಫಲಾನುಭವಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು.
೮. ಫಲಾನುಭವಿ ಜಂಟಿ ಖಾತೆ ಹೊಂದಿದಲ್ಲಿ ಕುಟುಂಬದವರ ಒಪ್ಪಿಗೆಪತ್ರ, ಜಂಟಿ ಖಾತೆ ಹೊಂದಿರುವ ಇತರೆರೈತರು ಎನ್‌ಓಸಿ ನೀಡಿರಬೇಕು. ನೋಟರಿ ಕಡ್ಡಾಯವಾಗಿರುತ್ತದೆ.

ಸಹಾಯಕ ನಿರ್ದೇಶಕಿ ನೇತ್ರಾವತಿ, ಹುಣಸೂರು ತಾ. (ಪಿಪಿ)

 ನಮ್ಮ ಇಲಾಖೆಯ ವತಿಯಿಂದ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ಲಭ್ಯತೆಯ ಆಧಾರ ಮೇಲೆ ಸೌಲಭ್ಯ ಒದಗಿಸಲಾಗುವುದು. ಅಂದರೆ ಅರ್ಜಿಗಳು ಹೆಚ್ಚಿಗೆ ಬಂದಾಗ ಹಿರಿತನದ ಆಧಾರದ ಮೇಲೆ ಹಿಂದೆ ತೋಟಗಾರಿಕೆ ಇಲಾಖೆಯ ವತಿಯಿಂದ ಸೌಲಭ್ಯ ಪಡೆದಿರಬಾರದು. ಅಂತಹ ರೈತರಿಗೆ ಆದ್ಯತೆ ನೀಡಲು ಅವಕಾಶವಿರುತ್ತದೆ.

andolana

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

1 hour ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

2 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

4 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

7 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

8 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

9 hours ago