ತೋಟಗಾರಿಕೆ ಇಲಾಖೆಯಲ್ಲಿ ರೈತನಿಗೆ ಸಬ್ಸಿಡಿ

 

  ರೈತನ ಆದಾಯ ಧ್ವಿಗುಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಳಿಂದ ಹಲವಾರು ಯೋಜನೆ

ದಾ.ರಾ.ಮಹೇಶ್, ವೀರನಹೊಸಹಳ್ಳಿ.

ಸರ್ಕಾರಿ ಇಲಾಖೆಗಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.

ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಈ ಯೋಜನೆಗಳಿಂದ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯ ಕೊರತೆಯಿಂದಾಗಿ ಎಷ್ಟೋ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.
ರೈತಾಪಿ ವರ್ಗಕ್ಕೆ ತೋಟಗಾರಿಕೆ ಇಲಾಖೆಯಿಂದ ಸಾಕಷ್ಟು ಸೌಲಭ್ಯ ಸಿಗುತ್ತದೆ. ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ನೀಡಲು ಇಲಾಖೆಯ ವತಿಯಿಂದ ಸಬ್ಸಿಡಿ ಸಿಗುತ್ತದೆ.

ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ನೀರಾವರಿ ಹೊಂದಿರುವ ಹಾಗೂ ನೀರಾವರಿ ಮಾಡಲಿಚ್ಚಿಸುವ ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ರೈತರಿಗೆ ವಿವಿಧ ತೋಟಗಾರಿಕೆ ಬೆಳೆಗಳ ಘಟಕ ನಿರ್ಮಾಣಕ್ಕೆ ಸಹಾಯಧನ ಸಿಗುವುದು. ಸಾಮಾನ್ಯ ವರ್ಗದ ರೈತರಿಗೆ ಶೇ. ೪೦ ರಷ್ಟು ಸಬ್ಸಿಡಿ ಸಿಗುತ್ತದೆ. ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. ೫೦ ರಿಂದ ಶೇ.೯೦ ರಷ್ಟು ಸಹಾಯಧನ ಸಿಗುತ್ತದೆ.

ಯಾವ ಯಾವ ತೋಟಗಾರಿಕೆ ಬೆಳೆಗೆ ಸಬ್ಸಿಡಿ ಸಿಗುತ್ತದೆ?
ತೋಟಗಾರಿಕೆ ಮಾಡುತ್ತಿರುವ ಹಾಗೂ ತೋಟಗಾರಿಕೆ ಮಾಡಲಿಚ್ಚಿಸುವ ರೈತರಿಗೆ ದಾಳಿಂಬೆ, ಮಾವು, ಬಾಳೆ, ಸಪೋಟಾ, ಗೇರು, ಸೀತಾಫಲ, ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಸಿಗುತ್ತದೆ. ಇದರೊಂದಿಗೆ ಈರುಳ್ಳಿ ಶೇಖರಣಾ ಘಟಕ, ಅರಿಶಿಣ ಸಂಸ್ಕರಣಾ ಘಟಕ, ಹಣ್ಣು ಮಾಗಿಸುವ ಘಟಕ, ಜೇನು ಕೃಷಿ, ತೋಟಗಾರಿಕೆ ಬೆಳೆಗಳಿಗೆ ಪಾಲಿಹೌಸ್ ನಿರ್ಮಾಣಕ್ಕೆ ರೈತರಿಗೆ ಸಹಾಯಧನ ಸಿಗುತ್ತದೆ.

ಗುಲಾಬಿ ಹೂವು, ಸುಗಂಧರಾಜ, ಚೆಂಡುಹೂವು, ಸೇವಂತಿಗೆ, ಮಲ್ಲಿಗೆ ಹೂವು, ಕನಕಾಂಬರಿ ಸೇರಿದಂತೆ ಇನ್ನಿತರ ಹೂವುಗಳ ಪ್ರದೇಶ ವಿಸ್ತರಣೆಗೂ ರೈತರಿಗೆ ಸಹಾಯಧನ ಸಿಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ೨೦ ಹೆಚ್.ಪಿ ಟ್ರ್ಯಾಕ್ಟರ್ ಖರೀದಿಗೂ ಸಹಾಯಧನ ಸಿಗುತ್ತದೆ. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಸಿಗುತ್ತದೆ.

ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು?
ತೋಟಗಾರಿಕೆ ಇಲಾಖೆಯ ವತಿಯಿಂದ ರೈತರು ತೋಟಗಾರಿಕೆ ಬೆಳೆಗಳಿಗೆ ಸೌಲಭ್ಯ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಯಾವ ಬೆಳೆಗೆ ಸಹಾಯಧನ ಪಡೆಯಲಿಚ್ಚಿಸುವಿರೋ ಅದರ ಬಗ್ಗೆ ವಿಚಾರಿಸಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು.

ಸಬ್ಸಿಡಿ ಪಡೆಯಲು ಯಾವ ದಾಖಲೆ ಬೇಕು?
೧.ರೈತರಿಗೆ ಸ್ವಂತ ಜಮೀನು ಇರಬೇಕು.
೨. ನೀರಾವರಿ ಸೌಲಭ್ಯ ಇರಬೇಕು. ರೈತರು ಆಧಾರ್ ಕಾರ್ಡ್ ಹೊಂದಿರಬೇಕು.
೩. ಇತ್ತೀಚಿನ ಭಾವಚಿತ್ರ
೪. ಬ್ಯಾಂಕಿನ ಪಾಸ್ ಬುಕ್ ಝರಾಕ್ಸ್ ಪ್ರತಿ
೫. ಜಮೀನಿನ ಪಹಣಿ ಹೊಂದಿರಬೇಕು.
೬. ಮತದಾರ ಗುರುತಿನ ಚೀಟಿ ಹೊಂದಿರಬೇಕು. ಗಣಕೀಕರಣ ಬೆಳೆ ದೃಢೀಕರಣ ಪತ್ರ ಹೊಂದಿರಬೇಕು.
೭. ಫಲಾನುಭವಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು.
೮. ಫಲಾನುಭವಿ ಜಂಟಿ ಖಾತೆ ಹೊಂದಿದಲ್ಲಿ ಕುಟುಂಬದವರ ಒಪ್ಪಿಗೆಪತ್ರ, ಜಂಟಿ ಖಾತೆ ಹೊಂದಿರುವ ಇತರೆರೈತರು ಎನ್‌ಓಸಿ ನೀಡಿರಬೇಕು. ನೋಟರಿ ಕಡ್ಡಾಯವಾಗಿರುತ್ತದೆ.

ಸಹಾಯಕ ನಿರ್ದೇಶಕಿ ನೇತ್ರಾವತಿ, ಹುಣಸೂರು ತಾ. (ಪಿಪಿ)

 ನಮ್ಮ ಇಲಾಖೆಯ ವತಿಯಿಂದ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ಲಭ್ಯತೆಯ ಆಧಾರ ಮೇಲೆ ಸೌಲಭ್ಯ ಒದಗಿಸಲಾಗುವುದು. ಅಂದರೆ ಅರ್ಜಿಗಳು ಹೆಚ್ಚಿಗೆ ಬಂದಾಗ ಹಿರಿತನದ ಆಧಾರದ ಮೇಲೆ ಹಿಂದೆ ತೋಟಗಾರಿಕೆ ಇಲಾಖೆಯ ವತಿಯಿಂದ ಸೌಲಭ್ಯ ಪಡೆದಿರಬಾರದು. ಅಂತಹ ರೈತರಿಗೆ ಆದ್ಯತೆ ನೀಡಲು ಅವಕಾಶವಿರುತ್ತದೆ.

andolana

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

3 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

3 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

4 hours ago