ಪಿಎಂ ಕಿಸಾನ್ ಯೋಜನೆಗೆ ಅಂತಿಮ ಗಡುವು

* ದೇಶದ ರೈತರಿಗೆ ವಾರ್ಷಿಕ ೬,೦೦೦ ರು. ಸಹಾಯಧನವನ್ನು ಒದಗಿಸುವ ಪಿಎಂ ಕಿಸಾನ್ ಯೋಜನೆ
* ಕೆವೈಸಿ ಮಾಡಿಸಿಕೊಳ್ಳುವ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಜು. ೩೧ರವರೆಗೆ ವಿಸ್ತರಿಸಿದೆ
* ಇ-ಕೆವೈಸಿ ಒಟಿಪಿ ಆಧಾರಿತವಾಗಿರುತ್ತದೆ

ದೇಶದ ರೈತರಿಗೆ ವಾರ್ಷಿಕ ೬,೦೦೦ ರು. ಸಹಾಯಧನವನ್ನು ಒದಗಿಸುವ ಪಿಎಂ ಕಿಸಾನ್ ಯೋಜನೆಯ ಕೆವೈಸಿ ಮಾಡಿಸಿಕೊಳ್ಳುವ ಅಂತಿಮ ಗಡುವನ್ನು ಕೇಂದ್ರ ಸರ್ಕಾರ ಜು. ೩೧ರವರೆಗೆ ವಿಸ್ತರಿಸಿದೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್‌ನ ೧೧ನೇ ಕಂತಿನಲ್ಲಿ ೧೦ ಕೋಟಿ ರೈತರಿಗಾಗಿ ೨೧,೦೦೦ ಕೋಟಿ ರು. ಸಹಾಯಧನ ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ. ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ರೈತರು ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಒಟಿಪಿ ಆಧಾರಿತವಾಗಿರುತ್ತದೆ.

ಕೆವೈಸಿ ಮಾಡಿಸಿಕೊಳ್ಳುವ ಅಂತಿಮ ಗಡುವು ಮೇ ೩೧ ರಿಂದ ಜು. ೩೧ಕ್ಕೆ ವಿಸ್ತರಿಸಲಾಗಿದೆ ಎಂದು ಪಿಎಂ ಕಿಸಾನ್ ಪೋರ್ಟಲ್ ತಿಳಿಸಿದೆ.

ಪಿಎಂ ಕಿಸಾನ್ ಸಮ್ಮಾನ್
ಪಿಎಂ-ಕಿಸಾನ್ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇದು ಫೆಬ್ರವರಿ ೨೪, ೨೦೧೯ ರಂದು ಪ್ರಾರಂಭವಾಯಿತು. ಯೋಜನೆಯು ಆರಂಭದಲ್ಲಿ ೨ ಹೆಕ್ಟೇರ್‌ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆಉದ್ದೇಶಿಸಲಾಗಿತ್ತು, ಆದರೆ ೦೧.೦೬.೨೦೧೯ ರಿಂದ ಜಾರಿಗೆ ಬರುವಂತೆ, ಎಲ್ಲಾ ಭೂಹಿಡುವಳಿ ರೈತರನ್ನು ಒಳಗೊಳ್ಳಲು ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಯಿತು. ಯೋಜನೆಯ ಪ್ರಕಾರ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ರೂ.೬೦೦೦ ಆರ್ಥಿಕ ಲಾಭವನ್ನು ನೇರ ಲಾಭ ವರ್ಗಾವಣೆ ಮೂಲಕ ದೇಶಾದ್ಯಂತದ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಫಲಾನುಭವಿಗಳ ಪಟ್ಟಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಪಂಚಾಯತ್ ಗಳ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗುತ್ತದೆ. ಹೀಗಾಗಿ ಈ ಯೋಜನೆಯ ಪ್ರೋಂಜನ ಪಡೆಯುವ ರೈತ ಕುಟುಂಬಗಳು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪರಿಶೀಲಿಸಬಹುದು. ಇಲ್ಲವೇ ಆನ್ ಲೈನ್ ನಲ್ಲಿ ಕೂಡ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಬಹುದು. ಇವೆರಡರ ಹೊರತಾಗಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕೂಡ ಅರ್ಹ ರೈತರಿಗೆ ಎಸ್‌ಎಂಎಸ್ ಅಲರ್ಟ್ ಕಳುಹಿಸುತ್ತವೆ. ಈ ಕುರಿತು ಆನ್ ಲೈನ್ ನಲ್ಲಿ ಪರಿಶೀಲಿಸಬಹುದು.

 

andolana

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

2 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

14 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago