ಅಂಕಣಗಳು

ಸಹಕಾರ ಚಳವಳಿಯ ಸಾರ್ಥಕ ಪಯಣ

ಕೆ.ಸಿ.ಎಸ್.ಲಕ್ಷ್ಮೀಪತಯ್ಯ

ಇಡೀ ವಾರ ಅರ್ಥಪೂರ್ಣ ಚರ್ಚೆ; ಮುಂಗಾಣ್ಕೆ ಚಿಂತನೆಗೆ ವೇದಿಕೆಯಾದ ಸಪ್ತಾಹ

ಭಾರತದ ಸಹಕಾರ ಚಳವಳಿ ಆರಂಭವಾಗಿ ೧೧೮ ವರ್ಷಗಳು ಕಳೆದಿವೆ. ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಚಳವಳಿ ಶ್ರಮಿಸುತ್ತಾ ಬಂದಿದೆ. ಗಾತ್ರದಲ್ಲಿ, ವ್ಯಾಪ್ತಿಯಲ್ಲಿ, ಸಾಧನೆಯಲ್ಲಿ ವಿಶ್ವದಲ್ಲೇ ಬೃಹತ್ತಾದುದು ಮಹತ್ತಾದುದೂ ಆಗಿದೆ ಹಾಗೂ ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ಬಡವರ ಮಹಿಳೆಯರ ಆಧಾರ ಸ್ಥಂಭವಾಗಿದೆ.

ಭಾರತದ ಸಹಕಾರ ಚಳವಳಿಯ ಆರೋಗ್ಯಕರ ಬೆಳವಣಿಗೆಗೆ ಹಲವಾರು ನಾಯಕರು ಶ್ರಮಿಸಿದ್ದಾರೆ. ಅಂತಹವರಲ್ಲಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಹರಲಾಲ್ ನೆಹರು ಅವರು ಅಗ್ರಗಣ್ಯರೆನಿಸಿ ಕೊಂಡಿದ್ದಾರೆ. ಸಹಕಾರ ತತ್ವ, ಆಚರಣೆಯಲ್ಲಿ ನೆಹರು ಅವರಿಗೆ ಅಪಾರವಾದ ನಂಬಿಕೆ ಮತ್ತು ನಿಷ್ಠೆ ಇತ್ತು ಆದ್ದರಿಂದ ಅವರು ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ತತ್ವದ ಮೊರೆ ಹೋದರು. ರಾಷ್ಟ್ರದಲ್ಲಿ ಸಹಕಾರ ಚಳವಳಿ ಪ್ರಗತಿಪಥದಲ್ಲಿ ಸಾಗಲು ಕ್ರಮಗಳನ್ನು ಕೈಗೊಂಡರು. ಅವರ ದೂರದೃಷ್ಟಿಯ ಫಲದಿಂದ ಇಂದು ಸಹಕಾರ ಚಳವಳಿ ವೈಶಿಷ್ಟ್ಯಪೂರ್ಣವಾಗಿ ಬೆಳೆದಿದೆ.

೧೯೫೨ರಲ್ಲಿ ಎಂ.ವಿ. ಕೃಷ್ಣಪ್ಪನವರು ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ, ಸದನದಲ್ಲಿ ಸಹಕಾರ ಕ್ಷೇತ್ರದ ಮಹತ್ವ, ದೇಶದ ರೈತರ ಸಮಸ್ಯೆಗಳು ಅವರ ಮೇಲಿನ ಶೋಷಣೆಗಳ ಕುರಿತು ಹಾಗೂ ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಹಾಗೂ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿ ಸಾಧ್ಯವೆಂದು ತಮ್ಮ ಭಾಷಣದಲ್ಲಿ ತಿಳಿಸುತ್ತಾರೆ. ಕೃಷ್ಣಪ್ಪನವರ ಭಾಷಣವನ್ನು ಆಲಿಸಿದ ನೆಹರು ಅವರು ಸಭೆ ಮುಗಿದ ತಕ್ಷಣ ಕೃಷ್ಣಪ್ಪ ಅವರನ್ನು ತಮ್ಮ ಕಚೇರಿಗೆ ಕರೆಯಿಸಿಕೊಂಡರು, ಸಹಕಾರ ಕ್ಷೇತ್ರದ ಬಗ್ಗೆ ಅವರಿಗಿರುವ ಜ್ಞಾನ, ಕಳಕಳಿ ತಿಳಿದು ಮರುದಿನವೇ ಅವರನ್ನು ಕೃಷಿ ಖಾತೆ ಸಚಿವರನ್ನಾಗಿ ನೇಮಕ ಮಾಡುತ್ತಾರೆ.

ನಂತರ ಎಂ.ವಿ.ಕೃಷ್ಣಪ್ಪನವರು ಹಾಲೆಂಡ್ ಮತ್ತು ನೆದರ್‌ಲೆಂಡ್ ದೇಶಗಳಿಗೆ ಅಧ್ಯಯನ ಪ್ರವಾಸ ಮಾಡಿ, ಅಲ್ಲಿರುವ ಹಸುಗಳನ್ನು ಭಾರತಕ್ಕೆ ತಂದು, ಭಾರತದಲ್ಲಿ ಹೈನುಗಾರಿಕೆಗೆ ಹೊಸ ಆಯಾಮವನ್ನು ದೊರಕಿಸಿಕೊಡುತ್ತಾರೆ. ಅದರ ಫಲವಾಗಿ ೧೯೬೫ ರಲ್ಲಿ ಕೆಎಂಎಫ್‌ನ್ನು ಸ್ಥಾಪನೆ ಮಾಡುತ್ತಾರೆ.

ಕೃಷ್ಣಪ್ಪನವರ ಸಹಕಾರ ಕ್ಷೇತ್ರದ ಪ್ರೇರಣೆಯಿಂದಾಗಿ ಜವಾಹರಲಾಲ್ ನೆಹರು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿ ಸಹಕಾರ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿದರು. ನವೆಂಬರ್ ೧೪ ನೆಹರೂ ಅವರ ಹುಟ್ಟು ಹಬ್ಬವಾಗಿದ್ದು, ಅವರು ಸಹಕಾರ ಚಳವಳಿಯ ಬೆಳವಣಿಗೆಗೆ ನೀಡಿದ ಕೊಡುಗೆಯಿಂದ ಅವರ ಹುಟ್ಟುಹಬ್ಬದಂದು ಸಹಕಾರ ಸಪ್ತಾಹ ಆಚರಣೆಯನ್ನು ಮಾಡಲಾಗುತ್ತದೆ.

ಪ್ರತಿವರ್ಷ ಭಾರತದಾದ್ಯಂತ ನವೆಂಬರ್ ೧೪ ರಿಂದ ೨೦ರವರೆಗೆ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ಹಮ್ಮಿಕೊಳ್ಳಲಾಗುತ್ತದೆ. ಈ ಸಪ್ತಾಹದಲ್ಲಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ. ಪ್ರಗತಿಯ ಅವಲೋಕನ ನಡೆಸುತ್ತಾರೆ. ಮುಂದಿನ ಬೆಳವಣಿಗೆಯ ಬಗ್ಗೆ ಚಿಂತನೆ ನಡೆಸುತ್ತಾರೆ. ಹಾಗೆಯೇ, ವೈಫಲ್ಯಗಳಿದ್ದಲ್ಲಿ ಅದನ್ನು ಸರಿಪಡಿಸುವ ಬಗ್ಗೆಯೂ ಪರಸ್ಪರ ಸಮಾಲೋಚನೆಗಳು ನಡೆಯುತ್ತವೆ.

ಹಿಂದಿನಿಂದಲೂ ನವೆಂಬರ್ ೧೪ರಿಂದ ೨೦ರವರೆಗೆ ರಾಜ್ಯದಾದ್ಯಂತ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯುತ್ತಿತ್ತು. ಸಪ್ತಾಹದ ಆಚರಣೆ ಬಹುತೇಕ ಪಟ್ಟಣ ಪ್ರದೇಶಗಳಲ್ಲಿ ವ್ಯವಸ್ಥೆಯಾಗುತ್ತಿತ್ತು, ಕೆಲವೇ ಜನರು ಪಾಲ್ಗೊಳ್ಳುತ್ತಿದ್ದರು. ಸಹಕಾರ ಕ್ಷೇತ್ರದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿಯಬೇಕು. ಸಪ್ತಾಹದ ವ್ಯವಸ್ಥೆ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯಬೇಕು. ಅದಕ್ಕೆ ಮೌಲ್ಯ ತುಂಬಬೇಕಾದರೆ ರಾಜ್ಯದ ಮುಖ್ಯಮಂತ್ರಿಯವರು ಸಪ್ತಾಹವನ್ನು ಉದ್ಘಾಟಿಸಬೇಕು ಎಂಬ ಕಲ್ಪನೆಗೆ ಸಾಕಾರ ರೂಪ ದೊರೆಯಿತು. ಈ ಬಾರಿ ವಿಶೇಷವಾಗಿ ೧೪.೧೧.೨೦೨೫ರಂದು ಬೆಂಗಳೂರಿನಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹವನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿ, ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ವಿತರಣೆ ಮಾಡಿದರು. ಅಂದು ‘ಕಾರ್ಯದಕ್ಷತೆ. ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು’ ಎಂಬ ವಿಷಯದ ಬಗ್ಗೆ ಚರ್ಚಿಸಲಾಯಿತು.

ನ.೧೫ರಂದು ‘ತ್ರಿಭುವನ ಸಹಕಾರ ವಿಶ್ವವಿದ್ಯಾಲಯ, ‘ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ’, ನ.೧೬ರಂದು ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ, ನ.೧೭ರಂದು ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ. ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ. ನ.೧೮ರಂದು ‘ಸಹಕಾರಿ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲವರ್ಗದ ಸಬಲೀಕರಣ (ಕರ ಕುಶಲ, ಕೈಮಗ್ಗ, ಕಾರ್ಮಿಕ, ಮೀನುಗಾರಿಕೆ ಇತ್ಯಾದಿ), ನ.೧೯ರಂದು ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್ ಫಾರಂ, ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ’ ಎಂಬ ವಿಷಯದ ಬಗ್ಗೆ ಚರ್ಚಿಸಲಾಯಿತು. ನ.೨೦ರಂದು ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವ ನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಷಯದ ಮೇಲೆ ಚರ್ಚೆ ನಡೆಯಲಿದೆ. ಒಟ್ಟಾರೆ ಸಹಕಾರಿ ಸಪ್ತಾಹದ ಅವಧಿಯಲ್ಲಿ ಧ್ಯೇಯದ ಬಗ್ಗೆ ನಡೆದ ಅರ್ಥಪೂರ್ಣ ಪರಿಣಾಮಕಾರಿ ಚಿಂತನೆ, ಸಮಾಲೋಚನೆ. ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿದೆ.

(ಲೇಖಕರು, ಬೆಂಗಳೂರಿನಲ್ಲಿ ಸಹಕಾರ ಸಂಘಗಳ ಅಪರ ನಿಬಂಧಕರು)

” ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.೧೪ರಂದು ಬೆಂಗಳೂರಿನಲ್ಲಿ ಆರಂಭವಾಗಿದ್ದು, ನ.೨೦ರಂದು ಚಾಮರಾಜನಗರದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಸಪ್ತಾಹದ ಪ್ರಮುಖ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಘಗಳು’ ಎಂಬುದಾಗಿದೆ.”

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago