ಅಂಕಣಗಳು

ಮನೆಯಲ್ಲಿಯೇ ಇವೆ ಚಳಿಗೆ ಪರಿಹಾರಗಳು

• ರಮ್ಯ ಅರವಿಂದ್

ಚರ್ಮದ ಕಾಂತಿಯ ರಕ್ಷಣೆಗೆ ನಾವು ನಾನಾ ಕಸರತ್ತುಗಳನ್ನು ಮಾಡುತ್ತೇವೆ. ಅದರಲ್ಲಿಯೂ ಚಳಿಗಾಲ ಬಂತು ಎಂದರೆ ಸಾಕು ಚರ್ಮ ಒಡೆಯುವುದನ್ನು ತಡೆಗಟ್ಟುವುದು ದೊಡ್ಡ ಸವಾಲು. ಇದಕ್ಕಾಗಿ ಸಾವಿರಾರೂ ರೂ. ವ್ಯಯಿಸಿ ವಿವಿಧ ಕ್ರೀಮ್‌ಗಳನ್ನು ಖರೀದಿಸಿ ಬಳಸುತ್ತೇವೆ. ಕೆಲ ಬಾರಿ ಅವು ಅಡ್ಡಪರಿಣಾಮ ಬೀರಿರುವ ಉದಾಹರಣೆಗಳಿವೆ ಆದರೆ ಯಾವುದೇ ಅಡ್ಡ ಪರಿಣಾಮಗಳು ಬೀರದ ಮನೆಯಲ್ಲಿಯೇ ಸಾಕಷ್ಟು ಪರಿಹಾರಗಳು ಇದ್ದು, ಅವುಗಳನ್ನು ಬಳಸಿದರೆ ನಾವು ನಮ್ಮ ಚರ್ಮ ಒಡೆಯುವುದನ್ನು ತಪ್ಪಿಸಬಹುದಾಗಿದೆ.

ಜೇನುತುಪ್ಪ
ಜೇನುತುಪ್ಪದಲ್ಲಿ ಚರ್ಮದಲ್ಲಿ ತೇವಾಂಶ ಕಡಿಮೆಯಾಗುವುದನ್ನು ತಡೆಯುವ ಸಾಮರ್ಥ್ಯವಿದೆ. ಜೇನಿನಲ್ಲಿರುವ ಕ್ಯೂಮೆಕ್ಟಂಟ್‌ಗಳು ಚರ್ಮದಿಂದ ತೇವಾಂಶ ಕಡಿಮೆಯಾಗಿ ಚರ್ಮ ಒಡೆಯುವುದನ್ನು ತಡೆಯುತ್ತವೆ. ಅಲ್ಲದೆ ತಂಪಾಗಿ ಬೀಸುವ ಗಾಳಿಯಿಂದ ನಿಮ್ಮ ಚರ್ಮ ಒಡೆಯುವುದರಿಂದ ಜೇನುತುಪ್ಪವು ಅದನ್ನು ಪೋಷಿಸಿ ನೈಸರ್ಗಿಕ ಎಕ್ ಫೋಲಿಯೇಟರ್ ಆಗಿ ಕೆಲಸ ಮಾಡಲಿದೆ. ಅಲ್ಲದೆ ನಿಮ್ಮ ಚರ್ಮವನ್ನು ಮೃದು ಮತ್ತು ಹೊಳೆಯುವಂತೆ ಮಾಡಿ ಚರ್ಮದ ಕಾಂತಿಯನ್ನು ಕಾಪಾಡುತ್ತದೆ. ಬಳಸುವುದು ಹೇಗೆ?: ಹೊರಗಡೆ ಹೋಗಿ ಬಂದ ಬಳಿಕ ಮುಖವನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ನಂತರ ಒಂದು ಚಮಚ ಜೇನುತುಪ್ಪವನ್ನು ಮುಖಕ್ಕೆ ಹಚ್ಚಿಕೊಂಡು 10 ನಿಮಿಷಗಳ ಕಾಲ ಹಾಗೆಯೇ ಬಿಡಬೇಕು. ನಂತರ ಕೆಲ ಕಾಲ ಅದನ್ನು ಮೃದುವಾಗಿ ಮಸಾಜ್ ಮಾಡಿಕೊಳ್ಳಬೇಕು. ಆನಂತರ ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆಯಬೇಕು.

ಆಲೂಗಡ್ಡೆ
ಆಲೂಗಡ್ಡೆಯೂ ನಿಮ್ಮ ಚರ್ಮದ ರಕ್ಷಣೆಗೆ ಉತ್ತಮ ಮನೆ ಮದ್ದು. ಇದು ನಿಮ್ಮ ಚರ್ಮವನ್ನು ಸ್ವಚ್ಛಗೊಳಿಸಿ ಚರ್ಮಕ್ಕೆ ಕೋಮಲಾಂಶ ನೀಡುವಲ್ಲಿ ಸಹಕಾರಿಯಾಗಿದೆ. ಮೊದಲು ಆಲೂಗಡ್ಡೆಯನ್ನು ತೆಗೆದುಕೊಂಡು ಅದನ್ನು ಸ್ವಚ್ಛಗೊಳಿಸಿ ನಂತರ ತುರಿದುಕೊಳ್ಳಬೇಕು. ನಂತರ ಆ ಆಲೂಗಡ್ಡೆ ತುರಿಯನ್ನು ಮುಖಕ್ಕೆ ಹಾಕಿ ಮೃದುವಾಗಿ ಮಸಾಜ್ ಮಾಡಿಕೊಳ್ಳಬೇಕು. ಇದರ ಜತೆಗೆ ಐಸ್ ಕ್ಯೂಬ್ ಇದ್ದರೆ ಅದರಲ್ಲಿಯೂ ಮಸಾಜ್ ಮಾಡಿಕೊಳ್ಳಬಹುದು. ಇದರಿಂದ ನಿಮ್ಮ ಮುಖ ಚರ್ಮ ಮತ್ತಷ್ಟು ಮೃದುವಾಗಲಿದೆ. ಜತೆಗೆ ಕಾಂತಿಯೂ ಹೆಚ್ಚಾಗಲಿದೆ. ಚಳಿಗಾಲದಲ್ಲಿ ನಿಮ್ಮ ಮುಖ ಒಡೆಯುವುದೂ ತಪ್ಪಲಿದೆ.

ಕೊಬ್ಬರಿ ಎಣ್ಣೆ
ನಮಗೆಲ್ಲ ತಿಳಿದಿರುವಂತೆ ಒಡೆದ ಚರ್ಮಕ್ಕೆ ಉತ್ತಮ ಮನೆ ಮದ್ದು ಎಂದರೆ ಅದು ಕೊಬ್ಬರಿ ಎಣ್ಣೆ. ಕೊಬ್ಬರಿ ಎಣ್ಣೆ ದೇಹಕ್ಕೆ ಒಂದು ಉತ್ತಮ ಮಾಯಿಶ್ಚರೈಸರ್ ಇದ್ದಂತೆ. ದೇಹದ ಒಡೆದ ಚರ್ಮಗಳ ಭಾಗಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಮೃದುವಾಗಿ ಮಸಾಜ್ ಮಾಡಬೇಕು. ನಂತರ ಕೆಲ ಕಾಲ ಅದನ್ನು ಹಾಗೆಯೇ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿದರೆ ಅದು ದೇಹಕ್ಕೆ ನೈಸರ್ಗಿಕ ಮಾಯಿಶ್ಚರೈಸರ್ ನೀಡಿದಂತೆ ಆಗಬಹುದು.

ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಹಾಕಿಕೊಂಡು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ತುರಿಕೆ ಹಾಗೂ ಕೆರೆತದಂತಹ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳ ಬಹುದು.

ಹೆಚ್ಚಿನ ಬಿಸಿ ನೀರು ಕೂಡ ಚರ್ಮಕ್ಕೆ ಹಾನಿ: ಕೆಲವೊಮ್ಮೆ ಹೆಚ್ಚಿನ ಬಿಸಿ ನೀರು ಕೂಡ ನಿಮ್ಮ ಚರ್ಮ ಒಡೆಯಲು ಮತ್ತು ಒಣಗಲು ಕಾರಣವಾಗಬಹುದು. ಆದ್ದರಿಂದ ಸ್ನಾನ ಮಾಡಲು ಆದಷ್ಟು ಬೆಚ್ಚಗಿನ ನೀರನ್ನು ಬಳಸಿದರೆ ಅದು ದೇಹಕ್ಕೆ ಒಳ್ಳೆಯದು. ಹೆಚ್ಚಿನ ಜನರು ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡಲು ಇಚ್ಛೆ ಪಡುತ್ತಾರೆ. ಆದರೆ ಅದು ಚರ್ಮವನ್ನು ಸುಡುವುದರಿಂದ ಚರ್ಮದಲ್ಲಿನ ತೇವಾಂಶ ಕಡಿಮೆಯಾಗಿ ಚರ್ಮ ಒಡೆಯಲು ಆರಂಭಿ ಸುತ್ತದೆ. ಅಲ್ಲದೆ ಅದು ಚರ್ಮಕ್ಕೆ ಹಾನಿಯೂ ಕೂಡ. ಬಿಸಿ ನೀರು ಚರ್ಮದ ಮಾಯಿಶ್ಚರೈಸ್ ಅನ್ನು ತೆಗೆದುಹಾಕುತ್ತದೆ. ಅಲ್ಲದೆ ಅಷ್ಟು ಬಿಸಿ ನೀರಿನಿಂದ ತಲೆ ಸ್ನಾನ ಮಾಡುವುದರಿಂದಲೂ ಕೂದಲಿನ ಬುಡ ದುರ್ಬಲವಾಗಿ ಕೂದಲು ಉದುರುವ ಸಮಸ್ಯೆಯೂ ಕಾಡಲಿದೆ. ಆದ್ದರಿಂದ ಸ್ಥಾನ ಮಾಡುವಾಗ ಉಗುರು ಬೆಚ್ಚಗಿನ ನೀರನ್ನು ಬಳಸುವುದು ಉತ್ತಮ.
(abhigna.ramya@gmail.com)

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago