ಅಂಕಣಗಳು

ಹಿರಿಯರಿಂದ ಕಲಿಯಲು ಹಲವು ವಿಷಯಗಳಿವೆ

• ಸೌಮ್ಯ ಕೋಠಿ, ಮೈಸೂರು

ಹಳೆಯ ಬೇರು ಹೊಸ ಚಿಗುರು ಸೇರಿದರೆ ಮರ ಸೊಬಗು ಎಂಬಂತೆ ಮರವನ್ನು ಎಷ್ಟೇ ಬಾರಿ ಕತ್ತರಿಸಿದರೂ ಬೇರು ಹೊಸ ಹೊಸ ಚಿಗುರಿಗೆ ಅವಕಾಶ ಕೊಡುತ್ತಲೇ ಇರುತ್ತದೆ. ಬೇರು ಗಟ್ಟಿಯಾಗಿದ್ದರೆ ಮರ ಎಷ್ಟು ಬಾರಿಯಾದರೂ ಚಿಗುರಿ ಮತ್ತೇ ಮತ್ತೇ ಬಲಿಷ್ಠವಾಗಿ ಸೊಬಗಿನೊಂದಿಗೆ ನಿಲ್ಲುತ್ತದೆ.

ಇದು ಕುಟುಂಬದಲ್ಲಿಯೂ ಅಷ್ಟೇ. ಹಿರಿಯರ ಮಾರ್ಗದರ್ಶನವಿದ್ದರೆ ಕಿರಿಯರು ಬದುಕು ರೂಪಿಸಿ ಕೊಳ್ಳಲು ಸಾಧ್ಯವಾಗುತ್ತದೆ. ಹಬ್ಬ ಹರಿದಿನ ಗಳಿರಲಿ, ಆಚರಣೆಗಳಿರಲಿ ಅದರ ಹಿಂದಿನ ಕಾರಣಗಳು, ಆಚರಿಸುವ ವಿಧಾನ, ವೈಜ್ಞಾನಿಕ ಹಿನ್ನೆಲೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವವರು ನಮ್ಮ ಹಿರಿಯರು. ಅವುಗಳನ್ನು ಪಾಲಿಸಿದಾಗಲೇ ನಮ್ಮ ಜೀವನ ಮೌಲ್ಯಯುತವಾಗಿರಲು ಸಾಧ್ಯ.

ಈಗ ಹಬ್ಬಗಳ ಆಚರಣೆಯ ವೈಖರಿಯೇ ಬದಲಾಗಿದೆ. ದೀಪಾವಳಿಯಲ್ಲಿ ಎಣ್ಣೆ ಸ್ನಾನ ಮಾಡುವುದು, ಜಾನುವಾರಗಳ ಕಿಚ್ಚು ಹಾಯಿಸುವುದು ಹೀಗೆ ವಿವಿಧ ಹಬ್ಬಗಳಲ್ಲಿ ಅನುಸರಿಸುವ ವಿವಿಧ ಕ್ರಮಗಳು ಕಣ್ಮರೆಯಾಗಿ ಕೇವಲ ಗ್ರಾಮೀಣ ಭಾಗಗಳಿಗೆ ಮಾತ್ರ ಸೀಮಿತವೇನೋ ಎಂಬಂತಾಗಿವೆ. ಅದರ ಲ್ಲಿಯೂ ಹಬ್ಬದ ದಿನಗಳಲ್ಲಿ ತಯಾರಾಗುತ್ತಿದ್ದ ಖಾದ್ಯ ಗಳೂ ಈಗ ರುಚಿಸಲು ಸಿಗುವುದು ಅತೀ ಅಪರೂಪ.

ಹಬ್ಬಗಳು ಬಂತೆಂದರೆ ಒಂದು ವಾರದ ಮುಂಚೆಯೇ ತಯಾರಿಗಳು ಚುರುಕಾಗುತ್ತಿದ್ದವು. ಅಜ್ಜಿ ಕುಳಿತು ಹೇಳಲು, ಅಮ್ಮ ಅದನೆಲ್ಲ ಪಾಲಿಸುತ್ತ ನಮ್ಮ ಸಾಂಪ್ರದಾಯಿಕ ಅಡುಗೆಗಳ ತಯಾರಿ ಮಾಡಿಕೊಳ್ಳುತ್ತಿದ್ದರು. ಗಣಪತಿ ಹಬ್ಬಕ್ಕೆ ಕರಜಿಕಾಯಿ ಹೇಗೆ ಮಾಡಬೇಕು? ದೀಪಾವಳಿಯ ಕಜ್ಜಾಯ ತಯಾರಿಸುವುದು ಹೇಗೆ? ಹಬ್ಬಗಳನ್ನು ಮಾಡುವ ಉದ್ದೇಶವೇನು? ಇದರ ಲಾಭವೇನು? ಎಂಬುದಕ್ಕೆಲ್ಲ ಅಜ್ಜಿ ಉದಾಹರಣೆ ಸಹಿತ ಹೇಳುತ್ತಿದ್ದ ಕಥೆಗಳಲ್ಲಿ ಒಂದಿಷ್ಟು ವಿಜ್ಞಾನವೂ ಅಡಗಿತ್ತು.

ಬದುಕಿನ ಪಾಠದ ಜತೆ ಸಂಸ್ಕಾರ ಕಲಿಸುತ್ತಿದ್ದ ಹಿರಿಯರು ಆಚಾರ-ವಿಚಾರಗಳನ್ನು ಮುಂದಿನ ಪೀಳಿಗೆಗೆ ಕಲಿಸುವ ಗುರುಗಳಾಗಿದ್ದಾರೆ. ಈಗ ಕಾಲ ಬದಲಾಗಿದೆ. ತಲೆಮಾರಿನ ಅಂತರವಿರುವವರು ಒಟ್ಟಿಗೆ ಸಿಗುವುದೇ ಅಪರೂಪವಾಗಿದೆ. ಹಬ್ಬದ ತಯಾರಿಯೂ ಇಲ್ಲ. ಆಚರಣೆಯೂ ಅರ್ಥಬದ್ಧವಾಗಿಲ್ಲ. ಹಬ್ಬದ ತಿನಿಸುಗಳನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿ ತಿನ್ನುವ ಕಾಲವಿದು. ಏಕೆ ಹೀಗಾಯಿತು? ಹಬ್ಬಗಳೇಕೆ ಮಂಕಾದವು? ಆಚರಣೆಯಲ್ಲಿ ಸಂಭ್ರಮವಿಲ್ಲ ಏಕೆ? ದೀಪಾವಳಿ ಎಂದರೆ ಪಟಾಕಿ ಸಿಡಿಸುವುದು, ಗಣೇಶನ ಹಬ್ಬ ಎಂದರೆ ಗಣೇಶನ ಮೂರ್ತಿ ಕೂರಿಸಿ, ವಿಸರ್ಜಿಸುವುದು ಮಾತ್ರವೇ? ಅದಕ್ಕೂ ಮಿಗಿಲಾಗಿ ಪ್ರತಿ ಹಬ್ಬದ ಆಚರಣೆಯಲ್ಲಿಯೂ ಸಾಕಷ್ಟು ಹಿನ್ನೆಲೆಗಳಿವೆ. ಅವುಗಳನೆಲ್ಲ ಕಲಿಸಲು ಹಿರಿಯರಿರಬೇಕು. ಹಿರಿಯರಿಲ್ಲದೆ ಯಾವುದೇ ಆಚರಣೆಗಳು ಪೂರ್ಣಗೊಳ್ಳುವುದಿಲ್ಲ. ಆಚರಣೆಗಳ ಮಹತ್ವ ನಮಗೆ ಆಗಲಿ ನಮ್ಮ ಮಕಳಿಗಾಗಲಿ ತಿಳಿಸಬೇಕು. ಆದರೆ ಈಗ ಆ ಸಂಸ್ಕಾರ ಕಲಿಸುವ ಹಿರಿಯರು ವೃದ್ಧಾಶ್ರಮಗಳನ್ನು ಸೇರುತ್ತಿದ್ದಾರೆ. ಅನಾದಿಕಾಲದಿಂದ ಬಂದ ಆಚರಣೆಗಳು ಹಂತ ಹಂತವಾಗಿ ತೆರೆಮರೆಗೆ ಸರಿಯುತ್ತಿವೆ.

ಜೀವನದ ಜಂಜಾಟದಲ್ಲಿ ಈಜಲಾಗದವರು ಭಾರ ಕಡಿಮೆ ಮಾಡಿಕೊಳ್ಳುವ ಸಲುವಾಗಿ ಹಿರಿಯರನ್ನು ವೃದ್ಧಾಶ್ರಮಗಳಿಗೆ ತಂದು ಬಿಡುತ್ತಾರೆ. ವರ್ಷಕ್ಕೊಮ್ಮೆ ಹೋಗಿ ಮಾತನಾಡಿಸುವುದು, ಹಬ್ಬದ ದಿನಗಳಲ್ಲಿ ಅಲ್ಲಿಗೇ ಹೋಗಿ ಬಟ್ಟೆ, ಸಿಹಿ ಕೊಟ್ಟು ಬರುತ್ತಾರೆಯೇ ವಿನಾ ಅವರೊಂದಿಗೆ ಸಮಯ ಹಂಚಿಕೊಳ್ಳುವುದಿಲ್ಲ. ಜೀವನದ ಅನುಭವದ ಪಾಠ ಕೇಳುವುದಿಲ್ಲ. ಈಗಾದಾಗ ಈಗಿನ ಪೀಳಿಗೆಯ ಮಕ್ಕಳು ಆಚರಣೆಗಳ ಮಹತ್ವವನ್ನು ಕಲಿಯುವುದಾದರೂ ಹೇಗೆ? ಇತ್ತೀಚೆಗೆ ಹೊಸ ಸಂಸ್ಕೃತಿಯೊಂದು ಹೆಚ್ಚಾಗಿದೆ. ಹಿಂದೆ ಕೂಡು ಕುಟುಂಬದಲ್ಲಿರುತ್ತಿದ್ದವರು ವಿಭಾಗವಾಗುತ್ತಿದ್ದರು. ಈಗಂತೂ ಮಕ್ಕಳನ್ನೂ ಹಾಸ್ಟೆಲ್‌ಗಳಿಗೆ ಸೇರಿಸಿ ಕುಟುಂಬ ಗಾತ್ರ ಮತ್ತಷ್ಟು ಚಿಕ್ಕದಾಗುವಂತೆ ಮಾಡಿಕೊಂಡಿ ದ್ದಾರೆ. ಹೀಗಾದರೆ ಮಕ್ಕಳಿಗೆ ಬದುಕಿನ ಪಾಠಗಳು ಸಿಗುವುದಾ ದರೂ ಎಲ್ಲಿ? ಅವಿಭಕ್ತ ಕುಟುಂಬಗಳು ವಿಭಕ್ತವಾ ದಾಗಲೇ ಬಹುತೇಕ ಆಚರಣೆಗಳು ಕಣ್ಮರೆಯಾಗಿವೆ. ಈಗ ಕುಟುಂಬದಿಂದ ಮಕ್ಕಳೂ ದೂರಾದರೆ ಮುಂದಿನ ಪೀಳಿಗೆ ಹೇಗೆ ಸಂಸ್ಕಾರ ಕಲಿಯಲು ಸಾಧ್ಯ. ಹಳೆಯ ಬೇರು ಹೊಸ ಚಿಗುರು ಎಂಬುದು ಕುಟುಂಬಕ್ಕೂ ಅನ್ವಯವಾಗುವ ಒಂದು ನಾಣ್ಣುಡಿ. ಹಿರಿಯರ ಅನುಭವ ಕಿರಿಯರ ಬದುಕಿನ ದಾರಿದೀಪ.

 

ಆಂದೋಲನ ಡೆಸ್ಕ್

Recent Posts

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

34 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

41 mins ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

48 mins ago

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…

53 mins ago

ಓದುಗರ ಪತ್ರ: ಲಂಚದ ಹಾವಳಿಗೆ ಕಡಿವಾಣ ಹಾಕಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…

56 mins ago

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…

59 mins ago