ಅಂಕಣಗಳು

ವಾರಾಂತ್ಯ ವಿಶೇಷ: ಪ್ರಳಯ ಸೂಚಕ ಏಕಶಿಲಾ ಗಣಪ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ.

ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎನ್ನಲಾದ ಈ ಏಕಶಿಲಾ ಗಣಪನ ವಿಗ್ರಹವನ್ನು ಬಂಡೆ ಗಣಪ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದ್ದು, ಪ್ರಳಯ ಗಣಪ ಎಂಬ ವಿಶಿಷ್ಟ ಹೆಸರೂ ಇದೆ. 16 ಅಡಿ
ಎತ್ತರವಿರುವ ಈ ವಿಗ್ರಹ ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿನವರೆಗೆ ತಿರುಗುತ್ತಿದ್ದು, ಅದು ಪೂರ್ತಿಯಾಗಿ ತಿರುಗಿದರೆ ಪ್ರಳಯವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಆದ್ದರಿಂದಲೇ ಇದನ್ನು ಪ್ರಳಯ ಸೂಚಕ ಗಣಪ ಎಂದೂ ಕರೆಯುತ್ತಾರೆ.

ಮೇಲುಕೋಟೆ ಬೆಟ್ಟದ ಮೇಲಿನ ಯೋಗಾನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಮತ್ತು ಮೆಟ್ಟಿಲುಗಳ ನಿರ್ಮಾಣದ ವೇಳೆ ಅನಾಹುತಗಳು ಸಂಭವಿಸುತ್ತಿದ್ದಾಗ ಜ್ಯೋತಿಷಿಯೊಬ್ಬರ ಮಾರ್ಗದರ್ಶನದಂತೆ ಇಲ್ಲಿ ಗಣಪನ ವಿಗ್ರಹ ನಿರ್ಮಿಸಲಾಯಿತು ಎನ್ನಲಾಗಿದೆ.

ಮೈಸೂರು ಮತ್ತು ವಿಜಯನಗರದ ಅರಸರ ಆಳ್ವಿಕೆಯ ಕಾಲದಲ್ಲಿ ಮೇಲುಕೋಟೆಯಲ್ಲಿ ಬೆಟ್ಟದ ಮೇಲಿನ ಯೋಗಾ ನರಸಿಂಹಸ್ವಾಮಿ ದೇವಾಲಯ ನಿರ್ಮಾಣದಲ್ಲಿ, ನಾನಾ ಅನಾಹುತಗಳು ನಡೆದು, ಜತೆಗೆ ಬೆಟ್ಟಕ್ಕೆ ಹತ್ತಲು ಮೆಟ್ಟಿಲುಗಳ ನಿರ್ಮಾಣದ ಕಾರ್ಯವೂ ಸರಿಯಾಗಿ ನಡೆಯದೆ ಹಲವು ವಿಘ್ನಗಳಾಗಿದ್ದವಂತೆ. ಆದ್ದರಿಂದ ಬೆಟ್ಟದ ಬುಡದಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದರೆ ವಿಘ್ನಗಳು ನಿವಾರಣೆಯಾಗಬಹುದು ಎಂದು ಬೆಟ್ಟದ ಬುಡದಲ್ಲಿ ಏಕಶಿಲಾ ಗಣಪನ ವಿಗ್ರಹ ನಿರ್ಮಾಣ ಮಾಡಲಾಗಿದೆ. ಈ ರೀತಿ ಏಕಶಿಲಾ ಗಣಪನ ವಿಗ್ರಹ ಕರ್ನಾಟಕದ ಯಾವುದೇ ದೇವಾಲಯಗಳಲ್ಲೂ ಕಂಡು ಬರುವುದಿಲ್ಲ ಎಂಬುದು ಮತ್ತೊಂದು ವಿಶೇಷ.

andolanait

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

1 hour ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

1 hour ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

2 hours ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

2 hours ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

2 hours ago