ಅಂಕಣಗಳು

ವಾರಾಂತ್ಯ ವಿಶೇಷ: ಪ್ರಳಯ ಸೂಚಕ ಏಕಶಿಲಾ ಗಣಪ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ.

ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎನ್ನಲಾದ ಈ ಏಕಶಿಲಾ ಗಣಪನ ವಿಗ್ರಹವನ್ನು ಬಂಡೆ ಗಣಪ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದ್ದು, ಪ್ರಳಯ ಗಣಪ ಎಂಬ ವಿಶಿಷ್ಟ ಹೆಸರೂ ಇದೆ. 16 ಅಡಿ
ಎತ್ತರವಿರುವ ಈ ವಿಗ್ರಹ ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿನವರೆಗೆ ತಿರುಗುತ್ತಿದ್ದು, ಅದು ಪೂರ್ತಿಯಾಗಿ ತಿರುಗಿದರೆ ಪ್ರಳಯವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಆದ್ದರಿಂದಲೇ ಇದನ್ನು ಪ್ರಳಯ ಸೂಚಕ ಗಣಪ ಎಂದೂ ಕರೆಯುತ್ತಾರೆ.

ಮೇಲುಕೋಟೆ ಬೆಟ್ಟದ ಮೇಲಿನ ಯೋಗಾನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಮತ್ತು ಮೆಟ್ಟಿಲುಗಳ ನಿರ್ಮಾಣದ ವೇಳೆ ಅನಾಹುತಗಳು ಸಂಭವಿಸುತ್ತಿದ್ದಾಗ ಜ್ಯೋತಿಷಿಯೊಬ್ಬರ ಮಾರ್ಗದರ್ಶನದಂತೆ ಇಲ್ಲಿ ಗಣಪನ ವಿಗ್ರಹ ನಿರ್ಮಿಸಲಾಯಿತು ಎನ್ನಲಾಗಿದೆ.

ಮೈಸೂರು ಮತ್ತು ವಿಜಯನಗರದ ಅರಸರ ಆಳ್ವಿಕೆಯ ಕಾಲದಲ್ಲಿ ಮೇಲುಕೋಟೆಯಲ್ಲಿ ಬೆಟ್ಟದ ಮೇಲಿನ ಯೋಗಾ ನರಸಿಂಹಸ್ವಾಮಿ ದೇವಾಲಯ ನಿರ್ಮಾಣದಲ್ಲಿ, ನಾನಾ ಅನಾಹುತಗಳು ನಡೆದು, ಜತೆಗೆ ಬೆಟ್ಟಕ್ಕೆ ಹತ್ತಲು ಮೆಟ್ಟಿಲುಗಳ ನಿರ್ಮಾಣದ ಕಾರ್ಯವೂ ಸರಿಯಾಗಿ ನಡೆಯದೆ ಹಲವು ವಿಘ್ನಗಳಾಗಿದ್ದವಂತೆ. ಆದ್ದರಿಂದ ಬೆಟ್ಟದ ಬುಡದಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದರೆ ವಿಘ್ನಗಳು ನಿವಾರಣೆಯಾಗಬಹುದು ಎಂದು ಬೆಟ್ಟದ ಬುಡದಲ್ಲಿ ಏಕಶಿಲಾ ಗಣಪನ ವಿಗ್ರಹ ನಿರ್ಮಾಣ ಮಾಡಲಾಗಿದೆ. ಈ ರೀತಿ ಏಕಶಿಲಾ ಗಣಪನ ವಿಗ್ರಹ ಕರ್ನಾಟಕದ ಯಾವುದೇ ದೇವಾಲಯಗಳಲ್ಲೂ ಕಂಡು ಬರುವುದಿಲ್ಲ ಎಂಬುದು ಮತ್ತೊಂದು ವಿಶೇಷ.

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

32 mins ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

34 mins ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

37 mins ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

40 mins ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

46 mins ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

50 mins ago