ಅಂಕಣಗಳು

ವಾರಾಂತ್ಯ ವಿಶೇಷ: ಪ್ರಳಯ ಸೂಚಕ ಏಕಶಿಲಾ ಗಣಪ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ.

ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎನ್ನಲಾದ ಈ ಏಕಶಿಲಾ ಗಣಪನ ವಿಗ್ರಹವನ್ನು ಬಂಡೆ ಗಣಪ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದ್ದು, ಪ್ರಳಯ ಗಣಪ ಎಂಬ ವಿಶಿಷ್ಟ ಹೆಸರೂ ಇದೆ. 16 ಅಡಿ
ಎತ್ತರವಿರುವ ಈ ವಿಗ್ರಹ ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿನವರೆಗೆ ತಿರುಗುತ್ತಿದ್ದು, ಅದು ಪೂರ್ತಿಯಾಗಿ ತಿರುಗಿದರೆ ಪ್ರಳಯವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಆದ್ದರಿಂದಲೇ ಇದನ್ನು ಪ್ರಳಯ ಸೂಚಕ ಗಣಪ ಎಂದೂ ಕರೆಯುತ್ತಾರೆ.

ಮೇಲುಕೋಟೆ ಬೆಟ್ಟದ ಮೇಲಿನ ಯೋಗಾನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಮತ್ತು ಮೆಟ್ಟಿಲುಗಳ ನಿರ್ಮಾಣದ ವೇಳೆ ಅನಾಹುತಗಳು ಸಂಭವಿಸುತ್ತಿದ್ದಾಗ ಜ್ಯೋತಿಷಿಯೊಬ್ಬರ ಮಾರ್ಗದರ್ಶನದಂತೆ ಇಲ್ಲಿ ಗಣಪನ ವಿಗ್ರಹ ನಿರ್ಮಿಸಲಾಯಿತು ಎನ್ನಲಾಗಿದೆ.

ಮೈಸೂರು ಮತ್ತು ವಿಜಯನಗರದ ಅರಸರ ಆಳ್ವಿಕೆಯ ಕಾಲದಲ್ಲಿ ಮೇಲುಕೋಟೆಯಲ್ಲಿ ಬೆಟ್ಟದ ಮೇಲಿನ ಯೋಗಾ ನರಸಿಂಹಸ್ವಾಮಿ ದೇವಾಲಯ ನಿರ್ಮಾಣದಲ್ಲಿ, ನಾನಾ ಅನಾಹುತಗಳು ನಡೆದು, ಜತೆಗೆ ಬೆಟ್ಟಕ್ಕೆ ಹತ್ತಲು ಮೆಟ್ಟಿಲುಗಳ ನಿರ್ಮಾಣದ ಕಾರ್ಯವೂ ಸರಿಯಾಗಿ ನಡೆಯದೆ ಹಲವು ವಿಘ್ನಗಳಾಗಿದ್ದವಂತೆ. ಆದ್ದರಿಂದ ಬೆಟ್ಟದ ಬುಡದಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದರೆ ವಿಘ್ನಗಳು ನಿವಾರಣೆಯಾಗಬಹುದು ಎಂದು ಬೆಟ್ಟದ ಬುಡದಲ್ಲಿ ಏಕಶಿಲಾ ಗಣಪನ ವಿಗ್ರಹ ನಿರ್ಮಾಣ ಮಾಡಲಾಗಿದೆ. ಈ ರೀತಿ ಏಕಶಿಲಾ ಗಣಪನ ವಿಗ್ರಹ ಕರ್ನಾಟಕದ ಯಾವುದೇ ದೇವಾಲಯಗಳಲ್ಲೂ ಕಂಡು ಬರುವುದಿಲ್ಲ ಎಂಬುದು ಮತ್ತೊಂದು ವಿಶೇಷ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago