ಅಂಕಣಗಳು

ವಾರಾಂತ್ಯ ವಿಶೇಷ: ಪ್ರಳಯ ಸೂಚಕ ಏಕಶಿಲಾ ಗಣಪ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ.

ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎನ್ನಲಾದ ಈ ಏಕಶಿಲಾ ಗಣಪನ ವಿಗ್ರಹವನ್ನು ಬಂಡೆ ಗಣಪ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದ್ದು, ಪ್ರಳಯ ಗಣಪ ಎಂಬ ವಿಶಿಷ್ಟ ಹೆಸರೂ ಇದೆ. 16 ಅಡಿ
ಎತ್ತರವಿರುವ ಈ ವಿಗ್ರಹ ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿನವರೆಗೆ ತಿರುಗುತ್ತಿದ್ದು, ಅದು ಪೂರ್ತಿಯಾಗಿ ತಿರುಗಿದರೆ ಪ್ರಳಯವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಆದ್ದರಿಂದಲೇ ಇದನ್ನು ಪ್ರಳಯ ಸೂಚಕ ಗಣಪ ಎಂದೂ ಕರೆಯುತ್ತಾರೆ.

ಮೇಲುಕೋಟೆ ಬೆಟ್ಟದ ಮೇಲಿನ ಯೋಗಾನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಮತ್ತು ಮೆಟ್ಟಿಲುಗಳ ನಿರ್ಮಾಣದ ವೇಳೆ ಅನಾಹುತಗಳು ಸಂಭವಿಸುತ್ತಿದ್ದಾಗ ಜ್ಯೋತಿಷಿಯೊಬ್ಬರ ಮಾರ್ಗದರ್ಶನದಂತೆ ಇಲ್ಲಿ ಗಣಪನ ವಿಗ್ರಹ ನಿರ್ಮಿಸಲಾಯಿತು ಎನ್ನಲಾಗಿದೆ.

ಮೈಸೂರು ಮತ್ತು ವಿಜಯನಗರದ ಅರಸರ ಆಳ್ವಿಕೆಯ ಕಾಲದಲ್ಲಿ ಮೇಲುಕೋಟೆಯಲ್ಲಿ ಬೆಟ್ಟದ ಮೇಲಿನ ಯೋಗಾ ನರಸಿಂಹಸ್ವಾಮಿ ದೇವಾಲಯ ನಿರ್ಮಾಣದಲ್ಲಿ, ನಾನಾ ಅನಾಹುತಗಳು ನಡೆದು, ಜತೆಗೆ ಬೆಟ್ಟಕ್ಕೆ ಹತ್ತಲು ಮೆಟ್ಟಿಲುಗಳ ನಿರ್ಮಾಣದ ಕಾರ್ಯವೂ ಸರಿಯಾಗಿ ನಡೆಯದೆ ಹಲವು ವಿಘ್ನಗಳಾಗಿದ್ದವಂತೆ. ಆದ್ದರಿಂದ ಬೆಟ್ಟದ ಬುಡದಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದರೆ ವಿಘ್ನಗಳು ನಿವಾರಣೆಯಾಗಬಹುದು ಎಂದು ಬೆಟ್ಟದ ಬುಡದಲ್ಲಿ ಏಕಶಿಲಾ ಗಣಪನ ವಿಗ್ರಹ ನಿರ್ಮಾಣ ಮಾಡಲಾಗಿದೆ. ಈ ರೀತಿ ಏಕಶಿಲಾ ಗಣಪನ ವಿಗ್ರಹ ಕರ್ನಾಟಕದ ಯಾವುದೇ ದೇವಾಲಯಗಳಲ್ಲೂ ಕಂಡು ಬರುವುದಿಲ್ಲ ಎಂಬುದು ಮತ್ತೊಂದು ವಿಶೇಷ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

4 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

14 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

18 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

19 hours ago