ಅಂಕಣಗಳು

ವಾರಾಂತ್ಯ ವಿಶೇಷ: ಪ್ರಳಯ ಸೂಚಕ ಏಕಶಿಲಾ ಗಣಪ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ.

ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎನ್ನಲಾದ ಈ ಏಕಶಿಲಾ ಗಣಪನ ವಿಗ್ರಹವನ್ನು ಬಂಡೆ ಗಣಪ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದ್ದು, ಪ್ರಳಯ ಗಣಪ ಎಂಬ ವಿಶಿಷ್ಟ ಹೆಸರೂ ಇದೆ. 16 ಅಡಿ
ಎತ್ತರವಿರುವ ಈ ವಿಗ್ರಹ ಉತ್ತರ ದಿಕ್ಕಿನಿಂದ ಪಶ್ಚಿಮ ದಿಕ್ಕಿನವರೆಗೆ ತಿರುಗುತ್ತಿದ್ದು, ಅದು ಪೂರ್ತಿಯಾಗಿ ತಿರುಗಿದರೆ ಪ್ರಳಯವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಆದ್ದರಿಂದಲೇ ಇದನ್ನು ಪ್ರಳಯ ಸೂಚಕ ಗಣಪ ಎಂದೂ ಕರೆಯುತ್ತಾರೆ.

ಮೇಲುಕೋಟೆ ಬೆಟ್ಟದ ಮೇಲಿನ ಯೋಗಾನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಮತ್ತು ಮೆಟ್ಟಿಲುಗಳ ನಿರ್ಮಾಣದ ವೇಳೆ ಅನಾಹುತಗಳು ಸಂಭವಿಸುತ್ತಿದ್ದಾಗ ಜ್ಯೋತಿಷಿಯೊಬ್ಬರ ಮಾರ್ಗದರ್ಶನದಂತೆ ಇಲ್ಲಿ ಗಣಪನ ವಿಗ್ರಹ ನಿರ್ಮಿಸಲಾಯಿತು ಎನ್ನಲಾಗಿದೆ.

ಮೈಸೂರು ಮತ್ತು ವಿಜಯನಗರದ ಅರಸರ ಆಳ್ವಿಕೆಯ ಕಾಲದಲ್ಲಿ ಮೇಲುಕೋಟೆಯಲ್ಲಿ ಬೆಟ್ಟದ ಮೇಲಿನ ಯೋಗಾ ನರಸಿಂಹಸ್ವಾಮಿ ದೇವಾಲಯ ನಿರ್ಮಾಣದಲ್ಲಿ, ನಾನಾ ಅನಾಹುತಗಳು ನಡೆದು, ಜತೆಗೆ ಬೆಟ್ಟಕ್ಕೆ ಹತ್ತಲು ಮೆಟ್ಟಿಲುಗಳ ನಿರ್ಮಾಣದ ಕಾರ್ಯವೂ ಸರಿಯಾಗಿ ನಡೆಯದೆ ಹಲವು ವಿಘ್ನಗಳಾಗಿದ್ದವಂತೆ. ಆದ್ದರಿಂದ ಬೆಟ್ಟದ ಬುಡದಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದರೆ ವಿಘ್ನಗಳು ನಿವಾರಣೆಯಾಗಬಹುದು ಎಂದು ಬೆಟ್ಟದ ಬುಡದಲ್ಲಿ ಏಕಶಿಲಾ ಗಣಪನ ವಿಗ್ರಹ ನಿರ್ಮಾಣ ಮಾಡಲಾಗಿದೆ. ಈ ರೀತಿ ಏಕಶಿಲಾ ಗಣಪನ ವಿಗ್ರಹ ಕರ್ನಾಟಕದ ಯಾವುದೇ ದೇವಾಲಯಗಳಲ್ಲೂ ಕಂಡು ಬರುವುದಿಲ್ಲ ಎಂಬುದು ಮತ್ತೊಂದು ವಿಶೇಷ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago