ವಾಣಿಜ್ಯ

ರಿಲಯನ್ಸ್ ನಿಂದ ಪಶ್ಚಿಮ ಬಂಗಾಳದಲ್ಲಿ 20,000 ಕೋಟಿ ಹೂಡಿಕೆ

ಕೊಲ್ಕತ್ತಾ : ರಿಲಯನ್ಸ್ ಕಂಪನಿ ಪಶ್ಚಿಮ ಬಂಗಾಳದಲ್ಲಿ 20.000 ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ 7ನೇ ಬೆಂಗಾಲ್ ಗ್ಲೋಬಲ್ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಮುಕೇಶ್ ಅಂಬಾನಿಯವರು, ರಿಲಯನ್ಸ್ ಇದುವರೆಗೂ ಪಶ್ಚಿಮ ಬಂಗಾಳದಲ್ಲಿ 45,000 ಕೋಟಿ ಬಂಡವಾಳವನ್ನು ಹೂಡಿಕೆ ಮಾಡಿದೆ.

ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚುವರಿಯಾಗಿ 20 ಸಾವಿರ ಕೋಟಿ ರೂ. ಬಂಡವಾಳವನ್ನು ಹೆಚ್ಚುವರಿಯಾಗಿ ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ನಾವು ಜಿಯೋ ಮೂಲಕ ದೇಶದ ಮೂಲೆ ಮೂಲೆಗಳಿಗೆ 5G ತಂತ್ರಜ್ಞಾನವನ್ನು ಒದಗಿಸುತ್ತಿದ್ದೇವೆ. ಈಗ ಹೂಡಿಕೆ ಮಾಡಲು ಸಿದ್ಧವಾಗಿರುವ 20 ಸಾವಿರ ಕೋಟಿ ರೂ ಹಣವನ್ನು ಟೆಲಿಕಾಂ, ಜೈವಿಕ ಇಂಧನ ಮತ್ತು ರಿಟೇಲ್ ಗೆ ವ್ಯಯಿಸಲಾಗುವುದು ಎಂದು ತಿಳಿಸಿದ್ದಾರೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ : ರಿಲಯನ್ಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ರೂ.ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.ಕೇವಲ 15.000 ಸಾವಿರ ರೂ. ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಈವರೆಗೆ ಅಧಿಕೃತವಾಗಿ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

lokesh

Share
Published by
lokesh

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

36 seconds ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

9 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

19 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

24 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

34 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

43 mins ago