ವಾಣಿಜ್ಯ

ರಿಲಯನ್ಸ್ ನಿಂದ ಪಶ್ಚಿಮ ಬಂಗಾಳದಲ್ಲಿ 20,000 ಕೋಟಿ ಹೂಡಿಕೆ

ಕೊಲ್ಕತ್ತಾ : ರಿಲಯನ್ಸ್ ಕಂಪನಿ ಪಶ್ಚಿಮ ಬಂಗಾಳದಲ್ಲಿ 20.000 ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ 7ನೇ ಬೆಂಗಾಲ್ ಗ್ಲೋಬಲ್ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಮುಕೇಶ್ ಅಂಬಾನಿಯವರು, ರಿಲಯನ್ಸ್ ಇದುವರೆಗೂ ಪಶ್ಚಿಮ ಬಂಗಾಳದಲ್ಲಿ 45,000 ಕೋಟಿ ಬಂಡವಾಳವನ್ನು ಹೂಡಿಕೆ ಮಾಡಿದೆ.

ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚುವರಿಯಾಗಿ 20 ಸಾವಿರ ಕೋಟಿ ರೂ. ಬಂಡವಾಳವನ್ನು ಹೆಚ್ಚುವರಿಯಾಗಿ ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ನಾವು ಜಿಯೋ ಮೂಲಕ ದೇಶದ ಮೂಲೆ ಮೂಲೆಗಳಿಗೆ 5G ತಂತ್ರಜ್ಞಾನವನ್ನು ಒದಗಿಸುತ್ತಿದ್ದೇವೆ. ಈಗ ಹೂಡಿಕೆ ಮಾಡಲು ಸಿದ್ಧವಾಗಿರುವ 20 ಸಾವಿರ ಕೋಟಿ ರೂ ಹಣವನ್ನು ಟೆಲಿಕಾಂ, ಜೈವಿಕ ಇಂಧನ ಮತ್ತು ರಿಟೇಲ್ ಗೆ ವ್ಯಯಿಸಲಾಗುವುದು ಎಂದು ತಿಳಿಸಿದ್ದಾರೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ : ರಿಲಯನ್ಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ರೂ.ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.ಕೇವಲ 15.000 ಸಾವಿರ ರೂ. ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಈವರೆಗೆ ಅಧಿಕೃತವಾಗಿ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

lokesh

Share
Published by
lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

4 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

5 hours ago