ವಾಣಿಜ್ಯ

ರಿಲಯನ್ಸ್ ನಿಂದ ಪಶ್ಚಿಮ ಬಂಗಾಳದಲ್ಲಿ 20,000 ಕೋಟಿ ಹೂಡಿಕೆ

ಕೊಲ್ಕತ್ತಾ : ರಿಲಯನ್ಸ್ ಕಂಪನಿ ಪಶ್ಚಿಮ ಬಂಗಾಳದಲ್ಲಿ 20.000 ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ 7ನೇ ಬೆಂಗಾಲ್ ಗ್ಲೋಬಲ್ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಮುಕೇಶ್ ಅಂಬಾನಿಯವರು, ರಿಲಯನ್ಸ್ ಇದುವರೆಗೂ ಪಶ್ಚಿಮ ಬಂಗಾಳದಲ್ಲಿ 45,000 ಕೋಟಿ ಬಂಡವಾಳವನ್ನು ಹೂಡಿಕೆ ಮಾಡಿದೆ.

ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚುವರಿಯಾಗಿ 20 ಸಾವಿರ ಕೋಟಿ ರೂ. ಬಂಡವಾಳವನ್ನು ಹೆಚ್ಚುವರಿಯಾಗಿ ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ನಾವು ಜಿಯೋ ಮೂಲಕ ದೇಶದ ಮೂಲೆ ಮೂಲೆಗಳಿಗೆ 5G ತಂತ್ರಜ್ಞಾನವನ್ನು ಒದಗಿಸುತ್ತಿದ್ದೇವೆ. ಈಗ ಹೂಡಿಕೆ ಮಾಡಲು ಸಿದ್ಧವಾಗಿರುವ 20 ಸಾವಿರ ಕೋಟಿ ರೂ ಹಣವನ್ನು ಟೆಲಿಕಾಂ, ಜೈವಿಕ ಇಂಧನ ಮತ್ತು ರಿಟೇಲ್ ಗೆ ವ್ಯಯಿಸಲಾಗುವುದು ಎಂದು ತಿಳಿಸಿದ್ದಾರೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ : ರಿಲಯನ್ಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖೇಶ್‌ ಅಂಬಾನಿ ಅವರು ವಾರ್ಷಿಕವಾಗಿ ಸುಮಾರು 70,000 ಕೋಟಿ ರೂ.ಆದಾಯದ ಅವಕಾಶವನ್ನು ಬೆನ್ನಟ್ಟುತ್ತಿದ್ದಾರೆ. ಇನ್ನು ಅದಕ್ಕೆ ಹತ್ತಿರವಾಗುವ ಸಲುವಾಗಿ ಭಾರತದಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದ್ದಾರೆ.ಕೇವಲ 15.000 ಸಾವಿರ ರೂ. ಗೆ ರಿಲಯನ್ಸ್ ಕಂಪನಿಯ ಜಿಯೋ ಲ್ಯಾಪ್‌ಟಾಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಜಿಯೋ ಕಂಪನಿ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆಯ ಕುರಿತಂತೆ ಈವರೆಗೆ ಅಧಿಕೃತವಾಗಿ ಯಾವುದೇ ವಿವರಗಳನ್ನು ನೀಡಿಲ್ಲ. ಸಧ್ಯ ಜಿಯೋ ಬುಕ್‌ ಬಿಡುಗಡೆ ಜೊತೆಗೆ ಈ ವಿಭಾಗವೂ ಕೂಡ ತೆಗೆದುಕೊಳ್ಳುವ ಉದ್ದೇಶ ಸ್ಪಷ್ಟವಾಗಿದೆ. ರಿಲಯನ್ಸ್‌ ಜಿಯೋ ಕಂಪನಿಯು ಲ್ಯಾಪ್‌ಟಾಪ್‌ ಖರೀದಿಯ ಜೊತೆಗೆ ಗ್ರಾಹಕರಿಗೆ 100 GB ಉಚಿತ ಕ್ಲೌಡ್‌ ಸ್ಟೋರೆಜ್‌ ನೀಡಲಿದೆ.

lokesh

Share
Published by
lokesh

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

10 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

10 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

10 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

10 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

10 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

10 hours ago