ಇಂದು ( ನವೆಂಬರ್ 30 ) ವರ್ಷದ ಹನ್ನೊಂದನೇ ತಿಂಗಳು ಮುಕ್ತಾಯಗೊಳ್ಳಲಿದ್ದು, ನಾಳೆಯಿಂದ ವರ್ಷದ ಅಂತಿಮ ತಿಂಗಳು ಶುರುವಾಗಲಿದೆ. ಹಲವಾರು ಮಂದಿ ವರ್ಷದ ಕೊನೆಯ ತಿಂಗಳನ್ನು ಎಂಜಾಯ್ ಮಾಡಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಪ್ಲಾನ್ನಲ್ಲಿದ್ದಾರೆ. ಇನ್ನು ಈ ತಿಂಗಳು ಮುಕ್ತಾಯವಾಗುವ ಜತೆ ಕೆಲ ಪ್ರಮುಖ ಕಾರ್ಯಗಳ ಅವಧಿಯೂ ಸಹ ಮುಕ್ತಾಯವಾಗುವ ಸಾಧ್ಯತೆಗಳಿವೆ.
ಹೌದು, ಉಚಿತ ಆಧಾರ ತಿದ್ದುಪಡಿ, ಬ್ಯಾಂಕ್ ಲಾಕರ್ ಒಪ್ಪಂದ ನವೀಕರಣ, ಮ್ಯೂಚುವಲ್ ಫಂಡ್ ಹಾಗೂ ಮತ್ತು ಡಿಮ್ಯಾಟ್ ಖಾತೆಯ ನಾಮಿನೇಷನ್ಗೆ ನೀಡಲಾಗಿರುವ ಗಡುವು ಈ ತಿಂಗಳಲ್ಲಿ ಮುಕ್ತಾಯವಾಗಲಿದೆ. ಹಾಗಿದ್ದರೆ ಈ ಎಲ್ಲಾ ಕಾರ್ಯಗಳಿಗೆ ಅಂತಿಮ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯಬೇಕೆಂದರೆ ಈ ಕೆಳಗಿನ ವಿವರವನ್ನು ಓದಿ..
ಉಚಿತ ಆಧಾರ್ ಅಪ್ಗ್ರೇಡ್
ಆಧಾರ್ ಕಾರ್ಡ್ನಲ್ಲಿನ ನಿಮ್ಮ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಇದೇ ಡಿಸೆಂಬರ್ 14 ಕೊನೆಯ ದಿನವಾಗಿದೆ. ವಿಶಿಷ್ಟ ಗುರುತಿನ ಪ್ರಾಧಿಕಾರ ಈ ದಿನಾಂಕವನ್ನು ಕೊನೆಯ ದಿನಾಂಕ ಎಂದು ಗಡುವು ನೀಡಿದ್ದು ಹತ್ತು ವರ್ಷಗಳ ಹಳೆಯ ಆಧಾರ್ ಕಾರ್ಡ್ಗಳನ್ನು ಅಪ್ಡೇಟ್ ಮಾಡಿಸಿಕೊಳ್ಳುವಂತೆ ತಿಳಿಸಿತ್ತು. ಈ ಹಿಂದೆ ಹಲವಾರು ಬಾರಿ ಇದೇ ರೀತಿ ಕೊನೆಯ ದಿನಾಂಕ ಎಂಬ ಗಡುವು ನೀಡಲಾಗಿತ್ತಾದರೂ ಅವಧಿ ಮತ್ತಷ್ಟು ವಿಸ್ತರಣೆಯಾಗುತ್ತಾ ಬಂದಿತ್ತು. ಆದರೆ ಈ ಬಾರಿ ಕೊನೆಯ ದಿನವಾಗುವ ಸಾಧ್ಯತೆಯಿದೆ.
ಲಾಕರ್ ಠೇವಣಿ
ಲಾಕರ್ ಠೇವಣಿ ಹೊಂದಿರುವವರ ಜತೆಗೆ ಪರಿಷ್ಕೃತ ಒಪ್ಪಂದಕ್ಕೆ ಸಹಿ ಹಾಕಲು ಡಿಸೆಂಬರ್ 31 ಕೊನೆಯ ದಿನಾಂಕ ಎಂದು ಆರ್ಬಿಐ ಗಡುವು ನೀಡಿದೆ.
ಮ್ಯೂಚುವಲ್ ಫಂಡ್, ಡಿಮ್ಯಾಟ್ ನಾಮಿನೇಷನ್
ಮ್ಯೂಚುವಲ್ ಫಂಡ್ ಹಾಗೂ ಡಿಮ್ಯಾಟ್ ಖಾತೆ ಹೊಂದಿರುವವರು ನಾಮಿನಿಗಳನ್ನು ಆಯ್ಕೆ ಮಾಡಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿರಲಿದೆ. ಈ ಹಿಂದೆ ಸೆಪ್ಟೆಂಬರ್ 30 ಈ ನಾಮಿನೇಷನ್ ಮಾಡಲು ಕೊನೆಯ ದಿನಾಂಕ ಎಂದು ಸೆಬಿ ತಿಳಿಸಿತ್ತು ಹಾಗೂ ಬಳಿಕ ಗಡುವನ್ನು ಡಿಸೆಂಬರ್ 31ರವರೆಗೂ ವಿಸ್ತರಣೆ ಮಾಡಲಾಗಿತ್ತು. ಇನ್ನು ಈ ಬಾರಿ ನಾಮಿನೇಷನ್ ಮಾಡದಿದ್ದರೆ ಖಾತೆ ನಿಷ್ಕ್ರಿಯಗೊಳ್ಳಲಿದೆ ಎಂದೂ ಸಹ ಸೆಬಿ ತಿಳಿಸಿದೆ.
ಇನ್ಆಕ್ಟಿವ್ ಯುಪಿಐ ಐಡಿಗಳು
ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಗೂಗಲ್ಪೇ, ಫೋನ್ಪೇ, ಪೇಟಿಎಂ ಹಾಗೂ ಬ್ಯಾಂಕ್ ಯುಪಿಐಗಳಂತಹ ಪಾವತಿ ಅಪ್ಲಿಕೇಶನ್ಗಳಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಯುಪಿಐ ಐಡಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಈ ಕೆಲಸಕ್ಕೆ ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…