ವಾಣಿಜ್ಯ

ಈ ಎಲ್ಲಾ ಬದಲಾವಣೆ ಮಾಡಲು ಡಿಸೆಂಬರ್‌ ತಿಂಗಳೇ ಕೊನೆಯ ಅವಕಾಶ; ಮಿಸ್‌ ಮಾಡಬೇಡಿ

ಇಂದು ( ನವೆಂಬರ್‌ 30 ) ವರ್ಷದ ಹನ್ನೊಂದನೇ ತಿಂಗಳು ಮುಕ್ತಾಯಗೊಳ್ಳಲಿದ್ದು, ನಾಳೆಯಿಂದ ವರ್ಷದ ಅಂತಿಮ ತಿಂಗಳು ಶುರುವಾಗಲಿದೆ. ಹಲವಾರು ಮಂದಿ ವರ್ಷದ ಕೊನೆಯ ತಿಂಗಳನ್ನು ಎಂಜಾಯ್‌ ಮಾಡಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಪ್ಲಾನ್‌ನಲ್ಲಿದ್ದಾರೆ. ಇನ್ನು ಈ ತಿಂಗಳು ಮುಕ್ತಾಯವಾಗುವ ಜತೆ ಕೆಲ ಪ್ರಮುಖ ಕಾರ್ಯಗಳ ಅವಧಿಯೂ ಸಹ ಮುಕ್ತಾಯವಾಗುವ ಸಾಧ್ಯತೆಗಳಿವೆ.

ಹೌದು, ಉಚಿತ ಆಧಾರ ತಿದ್ದುಪಡಿ, ಬ್ಯಾಂಕ್‌ ಲಾಕರ್‌ ಒಪ್ಪಂದ ನವೀಕರಣ, ಮ್ಯೂಚುವಲ್‌ ಫಂಡ್‌ ಹಾಗೂ ಮತ್ತು ಡಿಮ್ಯಾಟ್‌ ಖಾತೆಯ ನಾಮಿನೇಷನ್‌ಗೆ ನೀಡಲಾಗಿರುವ ಗಡುವು ಈ ತಿಂಗಳಲ್ಲಿ ಮುಕ್ತಾಯವಾಗಲಿದೆ. ಹಾಗಿದ್ದರೆ ಈ ಎಲ್ಲಾ ಕಾರ್ಯಗಳಿಗೆ ಅಂತಿಮ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯಬೇಕೆಂದರೆ ಈ ಕೆಳಗಿನ ವಿವರವನ್ನು ಓದಿ..

ಉಚಿತ ಆಧಾರ್‌ ಅಪ್‌ಗ್ರೇಡ್‌

ಆಧಾರ್‌ ಕಾರ್ಡ್‌ನಲ್ಲಿನ ನಿಮ್ಮ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಇದೇ ಡಿಸೆಂಬರ್‌ 14 ಕೊನೆಯ ದಿನವಾಗಿದೆ. ವಿಶಿಷ್ಟ ಗುರುತಿನ ಪ್ರಾಧಿಕಾರ ಈ ದಿನಾಂಕವನ್ನು ಕೊನೆಯ ದಿನಾಂಕ ಎಂದು ಗಡುವು ನೀಡಿದ್ದು ಹತ್ತು ವರ್ಷಗಳ ಹಳೆಯ ಆಧಾರ್‌ ಕಾರ್ಡ್‌ಗಳನ್ನು ಅಪ್‌ಡೇಟ್‌ ಮಾಡಿಸಿಕೊಳ್ಳುವಂತೆ ತಿಳಿಸಿತ್ತು. ಈ ಹಿಂದೆ ಹಲವಾರು ಬಾರಿ ಇದೇ ರೀತಿ ಕೊನೆಯ ದಿನಾಂಕ ಎಂಬ ಗಡುವು ನೀಡಲಾಗಿತ್ತಾದರೂ ಅವಧಿ ಮತ್ತಷ್ಟು ವಿಸ್ತರಣೆಯಾಗುತ್ತಾ ಬಂದಿತ್ತು. ಆದರೆ ಈ ಬಾರಿ ಕೊನೆಯ ದಿನವಾಗುವ ಸಾಧ್ಯತೆಯಿದೆ.

ಲಾಕರ್‌ ಠೇವಣಿ

ಲಾಕರ್‌ ಠೇವಣಿ ಹೊಂದಿರುವವರ ಜತೆಗೆ ಪರಿಷ್ಕೃತ ಒಪ್ಪಂದಕ್ಕೆ ಸಹಿ ಹಾಕಲು ಡಿಸೆಂಬರ್‌ 31 ಕೊನೆಯ ದಿನಾಂಕ ಎಂದು ಆರ್‌ಬಿಐ ಗಡುವು ನೀಡಿದೆ.

ಮ್ಯೂಚುವಲ್‌ ಫಂಡ್‌, ಡಿಮ್ಯಾಟ್‌ ನಾಮಿನೇಷನ್‌

ಮ್ಯೂಚುವಲ್‌ ಫಂಡ್‌ ಹಾಗೂ ಡಿಮ್ಯಾಟ್‌ ಖಾತೆ ಹೊಂದಿರುವವರು ನಾಮಿನಿಗಳನ್ನು ಆಯ್ಕೆ ಮಾಡಲು ಡಿಸೆಂಬರ್‌ 31 ಕೊನೆಯ ದಿನಾಂಕವಾಗಿರಲಿದೆ. ಈ ಹಿಂದೆ ಸೆಪ್ಟೆಂಬರ್‌ 30 ಈ ನಾಮಿನೇಷನ್‌ ಮಾಡಲು ಕೊನೆಯ ದಿನಾಂಕ ಎಂದು ಸೆಬಿ ತಿಳಿಸಿತ್ತು ಹಾಗೂ ಬಳಿಕ ಗಡುವನ್ನು ಡಿಸೆಂಬರ್‌ 31ರವರೆಗೂ ವಿಸ್ತರಣೆ ಮಾಡಲಾಗಿತ್ತು. ಇನ್ನು ಈ ಬಾರಿ ನಾಮಿನೇಷನ್‌ ಮಾಡದಿದ್ದರೆ ಖಾತೆ ನಿಷ್ಕ್ರಿಯಗೊಳ್ಳಲಿದೆ ಎಂದೂ ಸಹ ಸೆಬಿ ತಿಳಿಸಿದೆ.

ಇನ್‌ಆಕ್ಟಿವ್ ಯುಪಿಐ ಐಡಿಗಳು

ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಹಾಗೂ ಬ್ಯಾಂಕ್‌ ಯುಪಿಐಗಳಂತಹ ಪಾವತಿ ಅಪ್ಲಿಕೇಶನ್‌ಗಳಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಯುಪಿಐ ಐಡಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಈ ಕೆಲಸಕ್ಕೆ ಡಿಸೆಂಬರ್‌ 31 ಕೊನೆಯ ದಿನಾಂಕವಾಗಿದೆ.

 

andolana

Share
Published by
andolana
Tags: businesstech

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago