ವಾಣಿಜ್ಯ

ಈ ಎಲ್ಲಾ ಬದಲಾವಣೆ ಮಾಡಲು ಡಿಸೆಂಬರ್‌ ತಿಂಗಳೇ ಕೊನೆಯ ಅವಕಾಶ; ಮಿಸ್‌ ಮಾಡಬೇಡಿ

ಇಂದು ( ನವೆಂಬರ್‌ 30 ) ವರ್ಷದ ಹನ್ನೊಂದನೇ ತಿಂಗಳು ಮುಕ್ತಾಯಗೊಳ್ಳಲಿದ್ದು, ನಾಳೆಯಿಂದ ವರ್ಷದ ಅಂತಿಮ ತಿಂಗಳು ಶುರುವಾಗಲಿದೆ. ಹಲವಾರು ಮಂದಿ ವರ್ಷದ ಕೊನೆಯ ತಿಂಗಳನ್ನು ಎಂಜಾಯ್‌ ಮಾಡಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಪ್ಲಾನ್‌ನಲ್ಲಿದ್ದಾರೆ. ಇನ್ನು ಈ ತಿಂಗಳು ಮುಕ್ತಾಯವಾಗುವ ಜತೆ ಕೆಲ ಪ್ರಮುಖ ಕಾರ್ಯಗಳ ಅವಧಿಯೂ ಸಹ ಮುಕ್ತಾಯವಾಗುವ ಸಾಧ್ಯತೆಗಳಿವೆ.

ಹೌದು, ಉಚಿತ ಆಧಾರ ತಿದ್ದುಪಡಿ, ಬ್ಯಾಂಕ್‌ ಲಾಕರ್‌ ಒಪ್ಪಂದ ನವೀಕರಣ, ಮ್ಯೂಚುವಲ್‌ ಫಂಡ್‌ ಹಾಗೂ ಮತ್ತು ಡಿಮ್ಯಾಟ್‌ ಖಾತೆಯ ನಾಮಿನೇಷನ್‌ಗೆ ನೀಡಲಾಗಿರುವ ಗಡುವು ಈ ತಿಂಗಳಲ್ಲಿ ಮುಕ್ತಾಯವಾಗಲಿದೆ. ಹಾಗಿದ್ದರೆ ಈ ಎಲ್ಲಾ ಕಾರ್ಯಗಳಿಗೆ ಅಂತಿಮ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯಬೇಕೆಂದರೆ ಈ ಕೆಳಗಿನ ವಿವರವನ್ನು ಓದಿ..

ಉಚಿತ ಆಧಾರ್‌ ಅಪ್‌ಗ್ರೇಡ್‌

ಆಧಾರ್‌ ಕಾರ್ಡ್‌ನಲ್ಲಿನ ನಿಮ್ಮ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಇದೇ ಡಿಸೆಂಬರ್‌ 14 ಕೊನೆಯ ದಿನವಾಗಿದೆ. ವಿಶಿಷ್ಟ ಗುರುತಿನ ಪ್ರಾಧಿಕಾರ ಈ ದಿನಾಂಕವನ್ನು ಕೊನೆಯ ದಿನಾಂಕ ಎಂದು ಗಡುವು ನೀಡಿದ್ದು ಹತ್ತು ವರ್ಷಗಳ ಹಳೆಯ ಆಧಾರ್‌ ಕಾರ್ಡ್‌ಗಳನ್ನು ಅಪ್‌ಡೇಟ್‌ ಮಾಡಿಸಿಕೊಳ್ಳುವಂತೆ ತಿಳಿಸಿತ್ತು. ಈ ಹಿಂದೆ ಹಲವಾರು ಬಾರಿ ಇದೇ ರೀತಿ ಕೊನೆಯ ದಿನಾಂಕ ಎಂಬ ಗಡುವು ನೀಡಲಾಗಿತ್ತಾದರೂ ಅವಧಿ ಮತ್ತಷ್ಟು ವಿಸ್ತರಣೆಯಾಗುತ್ತಾ ಬಂದಿತ್ತು. ಆದರೆ ಈ ಬಾರಿ ಕೊನೆಯ ದಿನವಾಗುವ ಸಾಧ್ಯತೆಯಿದೆ.

ಲಾಕರ್‌ ಠೇವಣಿ

ಲಾಕರ್‌ ಠೇವಣಿ ಹೊಂದಿರುವವರ ಜತೆಗೆ ಪರಿಷ್ಕೃತ ಒಪ್ಪಂದಕ್ಕೆ ಸಹಿ ಹಾಕಲು ಡಿಸೆಂಬರ್‌ 31 ಕೊನೆಯ ದಿನಾಂಕ ಎಂದು ಆರ್‌ಬಿಐ ಗಡುವು ನೀಡಿದೆ.

ಮ್ಯೂಚುವಲ್‌ ಫಂಡ್‌, ಡಿಮ್ಯಾಟ್‌ ನಾಮಿನೇಷನ್‌

ಮ್ಯೂಚುವಲ್‌ ಫಂಡ್‌ ಹಾಗೂ ಡಿಮ್ಯಾಟ್‌ ಖಾತೆ ಹೊಂದಿರುವವರು ನಾಮಿನಿಗಳನ್ನು ಆಯ್ಕೆ ಮಾಡಲು ಡಿಸೆಂಬರ್‌ 31 ಕೊನೆಯ ದಿನಾಂಕವಾಗಿರಲಿದೆ. ಈ ಹಿಂದೆ ಸೆಪ್ಟೆಂಬರ್‌ 30 ಈ ನಾಮಿನೇಷನ್‌ ಮಾಡಲು ಕೊನೆಯ ದಿನಾಂಕ ಎಂದು ಸೆಬಿ ತಿಳಿಸಿತ್ತು ಹಾಗೂ ಬಳಿಕ ಗಡುವನ್ನು ಡಿಸೆಂಬರ್‌ 31ರವರೆಗೂ ವಿಸ್ತರಣೆ ಮಾಡಲಾಗಿತ್ತು. ಇನ್ನು ಈ ಬಾರಿ ನಾಮಿನೇಷನ್‌ ಮಾಡದಿದ್ದರೆ ಖಾತೆ ನಿಷ್ಕ್ರಿಯಗೊಳ್ಳಲಿದೆ ಎಂದೂ ಸಹ ಸೆಬಿ ತಿಳಿಸಿದೆ.

ಇನ್‌ಆಕ್ಟಿವ್ ಯುಪಿಐ ಐಡಿಗಳು

ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಹಾಗೂ ಬ್ಯಾಂಕ್‌ ಯುಪಿಐಗಳಂತಹ ಪಾವತಿ ಅಪ್ಲಿಕೇಶನ್‌ಗಳಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಯುಪಿಐ ಐಡಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಈ ಕೆಲಸಕ್ಕೆ ಡಿಸೆಂಬರ್‌ 31 ಕೊನೆಯ ದಿನಾಂಕವಾಗಿದೆ.

 

andolana

Share
Published by
andolana
Tags: businesstech

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago