ವಾಣಿಜ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದೆ ಏರ್‌ಟೆಲ್ 5G

ಮೈಸೂರು : ಭಾರತದ ಜನಪ್ರಿಯ ಹಾಗೂ ಅತಿದೊಡ್ಡ ಟೆಲಿಕಾಂ ಆಪರೇಟರ್ ಗಳಲ್ಲಿ ಒಂದಾಗಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕ ರಾಜ್ಯದ 31 ಜಿಲ್ಲೆಗಳಿಗೂ 5G ಸೇವೆಯನ್ನು ವಿಸ್ತರಿಸುತ್ತಿದೆ. ಈಗಾಗಲೇ ಏರ್‌ಟೆಲ್ 5G ಸೇವೆಯ ಅಳವಡಿಕೆ ಬಹಳ ತ್ವರಿತವಾಗಿ ಆಗುತ್ತಿದೆ.

ಈವರೆಗೆ ದೇಶದಾದ್ಯಂತ 24.4 ಕೋಟಿ ಏರ್‌ಟೆಲ್ ಬಳಕೆದಾರರು ಇದ್ದಾರೆ. ಇವರಲ್ಲಿ 5G ಸೇವೆ ಬಳಕೆ ಮಾಡುತ್ತಿರುವವರ ಸಂಖ್ಯೆ 5 ಕೋಟಿಗೂ ಹೆಚ್ಚಿದೆ. ಕೇವಲ ಕರ್ನಾಟಕದಲ್ಲಿಯೇ 51 ಲಕ್ಷ ಗ್ರಾಹಕರು 5G ಸೇವೆಯ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕದ 31 ಜಿಲ್ಲೆಗಳಿಗೂ ಕೂಡ 5G ನೆಟ್‌ವರ್ಕ್ ಅಳವಡಿಸುವುದಾಗಿ ತಿಳಿಸಿದೆ.

ಕರ್ನಾಟಕದಲ್ಲಿ ಮೊದಲ ಹೈ ಸ್ಪೀಡ್‌ 5G ಇಂಟರ್ನೆಟ್‌ ಅಳವಡಿಸಿರುವ ಹೆಗ್ಗಳಿಕೆ ಏರ್‌ಟೆಲ್ ಸಂಸ್ಥೆಗೆ ಸಲ್ಲುತ್ತದೆ ಎಂದು ಏರ್‌ಟೆಲ್ ಕಂಪನಿಯ ಕರ್ನಾಟಕದ ಮುಖ್ಯಸ್ಥ ವಿವೇಕ್‌ ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಿನಲ್ಲಿ ಏರ್‌ಟೆಲ್ 5G ಇಂಟರ್ನೆಟ್‌ ಸೇವೆಯನ್ನು ಶುರು ಮಾಡಿತ್ತು. ಒಂದೇ ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 5G ಸೇವೆಯನ್ನು ಏರ್‌ಟೆಲ್ ವಿಸ್ತರಿಸುತ್ತಿದೆ.

ಈ ಕುರಿತು ಏರ್‌ಟೆಲ್ ಟೆಲಿಕಾಂ ಸಂಸ್ಥೆ ನೆನ್ನೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಹಂಪಿಯಂತಹ ಪ್ರವಾಸಿ ಸ್ಥಳಗಳು,ಮತ್ತು ರಾಜ್ಯದ ತುತ್ತ ತುದಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟದಲ್ಲೂ ಏರ್‌ಟೆಲ್ 5G ಸೇವೆ ಸಿಗಲಿದೆ ಎಂದು ಹೇಳಿಕೊಂಡಿದೆ.

ಜಿಯೋ ಪ್ರಭಲ ಪೈಪೋಟಿ : ಏರ್‌ಟೆಲ್ ಗೆ ಸರಿಸಾಟಿಯಾಗಿ ರಿಲಯನ್ಸ್ ಜಿಯೋ ಬೆಳೆದು ನಿಂತಿದ್ದು, ಏರ್‌ಟೆಲ್ ಸಂಸ್ಥೆಗೆ ಪ್ರಭಲ ಪೈಪೋಟಿ ನೀಡುತ್ತಿದೆ. ಏರ್‌ಟೆಲ್ ನಂತೆಯೇ ಜಿಯೋ ಕೂಡ 5G ನೆಟ್ವರ್ಕ್‌ ಸೇವೆಯನ್ನು ಸಮರ್ಪಕವಾಗಿ ಪೂರೈಸುತ್ತಿದೆ. ಖಾಸಗಿ ಸಂಸ್ಥೆಯೊಂದು ನಡೆಸಿದ ಸರ್ವೆಯಲ್ಲಿ ಜಿಯೋ ನೆಟ್ವರ್ಕ್‌ ದೇಶದ ಅತಿವೇಗದ 5G ನೆಟ್ವರ್ಕ್‌ ಎಂಬುದು ತಿಳಿದುಬಂದಿದೆ.

lokesh

Share
Published by
lokesh

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago