ವಾಣಿಜ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದೆ ಏರ್‌ಟೆಲ್ 5G

ಮೈಸೂರು : ಭಾರತದ ಜನಪ್ರಿಯ ಹಾಗೂ ಅತಿದೊಡ್ಡ ಟೆಲಿಕಾಂ ಆಪರೇಟರ್ ಗಳಲ್ಲಿ ಒಂದಾಗಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕ ರಾಜ್ಯದ 31 ಜಿಲ್ಲೆಗಳಿಗೂ 5G ಸೇವೆಯನ್ನು ವಿಸ್ತರಿಸುತ್ತಿದೆ. ಈಗಾಗಲೇ ಏರ್‌ಟೆಲ್ 5G ಸೇವೆಯ ಅಳವಡಿಕೆ ಬಹಳ ತ್ವರಿತವಾಗಿ ಆಗುತ್ತಿದೆ.

ಈವರೆಗೆ ದೇಶದಾದ್ಯಂತ 24.4 ಕೋಟಿ ಏರ್‌ಟೆಲ್ ಬಳಕೆದಾರರು ಇದ್ದಾರೆ. ಇವರಲ್ಲಿ 5G ಸೇವೆ ಬಳಕೆ ಮಾಡುತ್ತಿರುವವರ ಸಂಖ್ಯೆ 5 ಕೋಟಿಗೂ ಹೆಚ್ಚಿದೆ. ಕೇವಲ ಕರ್ನಾಟಕದಲ್ಲಿಯೇ 51 ಲಕ್ಷ ಗ್ರಾಹಕರು 5G ಸೇವೆಯ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕದ 31 ಜಿಲ್ಲೆಗಳಿಗೂ ಕೂಡ 5G ನೆಟ್‌ವರ್ಕ್ ಅಳವಡಿಸುವುದಾಗಿ ತಿಳಿಸಿದೆ.

ಕರ್ನಾಟಕದಲ್ಲಿ ಮೊದಲ ಹೈ ಸ್ಪೀಡ್‌ 5G ಇಂಟರ್ನೆಟ್‌ ಅಳವಡಿಸಿರುವ ಹೆಗ್ಗಳಿಕೆ ಏರ್‌ಟೆಲ್ ಸಂಸ್ಥೆಗೆ ಸಲ್ಲುತ್ತದೆ ಎಂದು ಏರ್‌ಟೆಲ್ ಕಂಪನಿಯ ಕರ್ನಾಟಕದ ಮುಖ್ಯಸ್ಥ ವಿವೇಕ್‌ ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಿನಲ್ಲಿ ಏರ್‌ಟೆಲ್ 5G ಇಂಟರ್ನೆಟ್‌ ಸೇವೆಯನ್ನು ಶುರು ಮಾಡಿತ್ತು. ಒಂದೇ ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 5G ಸೇವೆಯನ್ನು ಏರ್‌ಟೆಲ್ ವಿಸ್ತರಿಸುತ್ತಿದೆ.

ಈ ಕುರಿತು ಏರ್‌ಟೆಲ್ ಟೆಲಿಕಾಂ ಸಂಸ್ಥೆ ನೆನ್ನೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಹಂಪಿಯಂತಹ ಪ್ರವಾಸಿ ಸ್ಥಳಗಳು,ಮತ್ತು ರಾಜ್ಯದ ತುತ್ತ ತುದಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟದಲ್ಲೂ ಏರ್‌ಟೆಲ್ 5G ಸೇವೆ ಸಿಗಲಿದೆ ಎಂದು ಹೇಳಿಕೊಂಡಿದೆ.

ಜಿಯೋ ಪ್ರಭಲ ಪೈಪೋಟಿ : ಏರ್‌ಟೆಲ್ ಗೆ ಸರಿಸಾಟಿಯಾಗಿ ರಿಲಯನ್ಸ್ ಜಿಯೋ ಬೆಳೆದು ನಿಂತಿದ್ದು, ಏರ್‌ಟೆಲ್ ಸಂಸ್ಥೆಗೆ ಪ್ರಭಲ ಪೈಪೋಟಿ ನೀಡುತ್ತಿದೆ. ಏರ್‌ಟೆಲ್ ನಂತೆಯೇ ಜಿಯೋ ಕೂಡ 5G ನೆಟ್ವರ್ಕ್‌ ಸೇವೆಯನ್ನು ಸಮರ್ಪಕವಾಗಿ ಪೂರೈಸುತ್ತಿದೆ. ಖಾಸಗಿ ಸಂಸ್ಥೆಯೊಂದು ನಡೆಸಿದ ಸರ್ವೆಯಲ್ಲಿ ಜಿಯೋ ನೆಟ್ವರ್ಕ್‌ ದೇಶದ ಅತಿವೇಗದ 5G ನೆಟ್ವರ್ಕ್‌ ಎಂಬುದು ತಿಳಿದುಬಂದಿದೆ.

lokesh

Share
Published by
lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago