ವಾಣಿಜ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದೆ ಏರ್‌ಟೆಲ್ 5G

ಮೈಸೂರು : ಭಾರತದ ಜನಪ್ರಿಯ ಹಾಗೂ ಅತಿದೊಡ್ಡ ಟೆಲಿಕಾಂ ಆಪರೇಟರ್ ಗಳಲ್ಲಿ ಒಂದಾಗಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕ ರಾಜ್ಯದ 31 ಜಿಲ್ಲೆಗಳಿಗೂ 5G ಸೇವೆಯನ್ನು ವಿಸ್ತರಿಸುತ್ತಿದೆ. ಈಗಾಗಲೇ ಏರ್‌ಟೆಲ್ 5G ಸೇವೆಯ ಅಳವಡಿಕೆ ಬಹಳ ತ್ವರಿತವಾಗಿ ಆಗುತ್ತಿದೆ.

ಈವರೆಗೆ ದೇಶದಾದ್ಯಂತ 24.4 ಕೋಟಿ ಏರ್‌ಟೆಲ್ ಬಳಕೆದಾರರು ಇದ್ದಾರೆ. ಇವರಲ್ಲಿ 5G ಸೇವೆ ಬಳಕೆ ಮಾಡುತ್ತಿರುವವರ ಸಂಖ್ಯೆ 5 ಕೋಟಿಗೂ ಹೆಚ್ಚಿದೆ. ಕೇವಲ ಕರ್ನಾಟಕದಲ್ಲಿಯೇ 51 ಲಕ್ಷ ಗ್ರಾಹಕರು 5G ಸೇವೆಯ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕದ 31 ಜಿಲ್ಲೆಗಳಿಗೂ ಕೂಡ 5G ನೆಟ್‌ವರ್ಕ್ ಅಳವಡಿಸುವುದಾಗಿ ತಿಳಿಸಿದೆ.

ಕರ್ನಾಟಕದಲ್ಲಿ ಮೊದಲ ಹೈ ಸ್ಪೀಡ್‌ 5G ಇಂಟರ್ನೆಟ್‌ ಅಳವಡಿಸಿರುವ ಹೆಗ್ಗಳಿಕೆ ಏರ್‌ಟೆಲ್ ಸಂಸ್ಥೆಗೆ ಸಲ್ಲುತ್ತದೆ ಎಂದು ಏರ್‌ಟೆಲ್ ಕಂಪನಿಯ ಕರ್ನಾಟಕದ ಮುಖ್ಯಸ್ಥ ವಿವೇಕ್‌ ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಿನಲ್ಲಿ ಏರ್‌ಟೆಲ್ 5G ಇಂಟರ್ನೆಟ್‌ ಸೇವೆಯನ್ನು ಶುರು ಮಾಡಿತ್ತು. ಒಂದೇ ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 5G ಸೇವೆಯನ್ನು ಏರ್‌ಟೆಲ್ ವಿಸ್ತರಿಸುತ್ತಿದೆ.

ಈ ಕುರಿತು ಏರ್‌ಟೆಲ್ ಟೆಲಿಕಾಂ ಸಂಸ್ಥೆ ನೆನ್ನೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಹಂಪಿಯಂತಹ ಪ್ರವಾಸಿ ಸ್ಥಳಗಳು,ಮತ್ತು ರಾಜ್ಯದ ತುತ್ತ ತುದಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟದಲ್ಲೂ ಏರ್‌ಟೆಲ್ 5G ಸೇವೆ ಸಿಗಲಿದೆ ಎಂದು ಹೇಳಿಕೊಂಡಿದೆ.

ಜಿಯೋ ಪ್ರಭಲ ಪೈಪೋಟಿ : ಏರ್‌ಟೆಲ್ ಗೆ ಸರಿಸಾಟಿಯಾಗಿ ರಿಲಯನ್ಸ್ ಜಿಯೋ ಬೆಳೆದು ನಿಂತಿದ್ದು, ಏರ್‌ಟೆಲ್ ಸಂಸ್ಥೆಗೆ ಪ್ರಭಲ ಪೈಪೋಟಿ ನೀಡುತ್ತಿದೆ. ಏರ್‌ಟೆಲ್ ನಂತೆಯೇ ಜಿಯೋ ಕೂಡ 5G ನೆಟ್ವರ್ಕ್‌ ಸೇವೆಯನ್ನು ಸಮರ್ಪಕವಾಗಿ ಪೂರೈಸುತ್ತಿದೆ. ಖಾಸಗಿ ಸಂಸ್ಥೆಯೊಂದು ನಡೆಸಿದ ಸರ್ವೆಯಲ್ಲಿ ಜಿಯೋ ನೆಟ್ವರ್ಕ್‌ ದೇಶದ ಅತಿವೇಗದ 5G ನೆಟ್ವರ್ಕ್‌ ಎಂಬುದು ತಿಳಿದುಬಂದಿದೆ.

lokesh

Share
Published by
lokesh

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

4 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago