ವಾಣಿಜ್ಯ

ಅಮೆಜಾನ್ ನಿಂದ ನೂರಾರು ಮಂದಿಯ ಉದ್ಯೋಗಕ್ಕೆ ಕತ್ತರಿ

ಪ್ರಸಿದ್ಧ ಅಮೆಜಾನ್ ಕಂಪನಿ ತನ್ನ ಅಲೆಕ್ಸಾ ಘಟಕದಿಂದ ನೂರಾರು ಮಂದಿ ಉದ್ಯೋಗಿಗಳ ಕೆಲಸಕ್ಕೆ ಕತ್ತರಿ ಹಾಕಿದೆ.

Amazon.com ತನ್ನ ಅಲೆಕ್ಸಾ ವಾಯ್ಸ್ ಘಟಕದ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಘೋಷಿಸಿದೆ.

ಇದರ ಪ್ರಕಾರ ನೂರಾರು ಮಂದಿ ಉದ್ಯೋಗಿಗಳ ಜೀವನದ ಮೇಲೆ ಇದು ಪರಿಣಾಮ ಬೀರಲಿದೆ. ಹೀಗೆ ಧಿಡೀರನೆ ಕೆಲಸದಿಂದ ವಜಾಗೊಳಿಸುವುದರಿಂದ ಉದ್ಯೋಗಿಗಳು ಹಾಗೂ ಅವರ ಕುಟುಂಬಸ್ಥರು ಸಂಕಷ್ಟಕ್ಕೀಡಾಗಲಿದ್ದಾರೆ. ಎಂಬುದನ್ನು ಸ್ಪಷ್ಟೀಕರಿಸಲು ಕಂಪನಿಯ ವಕ್ತಾರರು ನಿರಾಕರಿಸಿದ್ದಾರೆ.

ವ್ಯಾಪಾರ ಹಾಗೂ ಆದ್ಯತೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಲುವಾಗಿ ನಾವು ನಮ್ಮ ಕೆಲವು ಪ್ರಯತ್ನಗಳನ್ನು ಬದಲಾಯಿಸುತ್ತಿದ್ದೇವೆ. ಇದು ಗ್ರಾಹಕರಿಗೆ ಅತಿ ಮುಖ್ಯವಾಗಿದೆ. ಸಂಪನ್ಮೂಲಗಳನ್ನು ಹೆಚ್ಚಿಸುವುದು ಮತ್ತು ಉತ್ಪಾದಕ ಎಐ ಮೇಲೆ ಕೇಂದ್ರೀಕರಿಸಿದ ಪ್ರಯತ್ನಗಳನ್ನು ಕೂಡ ಇದರಲ್ಲಿ ಒಳಗೊಳ್ಳುತ್ತದೆ ಎಂದು ಕಂಪನಿಯ ಉಪಾಧ್ಯಕ್ಷ ಡೇನಿಯಲ್ ರೌಶ್ ತಿಳಿಸಿದ್ದಾರೆ.

ಅಮೆಜಾನ್ ಕಂಪನಿ ತನ್ನ ಮ್ಯೂಸಿಕ್ ಹಾಗೂ ಗೇಮಿಂಗ್ ಮತ್ತು ಕೆಲವು ಸಂಪನ್ಮೂಲ ವಿಭಾಗಗಳನ್ನು ಒಳಗೊಂಡಂತೆ, ಕಳೆದ ಕೆಲ ದಿನಗಳ ಹಿಂದೆ ಹಲವು ವಿಭಾಗಗಳನ್ನು ಹಿಂದಕ್ಕೆ ಪಡೆದಿತ್ತು. ಇದರ ಪರಿಣಾಮವಾಗಿ ಆಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಉದ್ಯೋಗಕ್ಕೂ ಕುತ್ತು ತಂದಿತ್ತು.

ಹಲವು ಕಂಪನಿಗಳು ಸಂಪನ್ಮೂಲಗಳ ಉತ್ಪಾದನೆಯನ್ನು ಎಐ ಗೆ ವರ್ಗಾಯಿಸುತ್ತಿವೆ. ಈ ಎಐ ಸಾಫ್ಟ್ ಕೋಡ್ ರಚಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗೂ ಸಣ್ಣ ಪ್ರಾಂಪ್ಟ್ ಗಳನ್ನು ನೀಡಿದರೆ ದೀರ್ಘವಾದ ಪಠ್ಯ ಪ್ರತಿಕ್ರಿಯೆಯನ್ನು ನೀಡುತ್ತದೆ.

ಅಲೆಕ್ಸಾ ಎಂಬುದು ಅಮೆಜಾನ್ ಕಂಪನಿಯ ಒಂದು ಸಂಗೀತ ಸಾಧನ. ಈ ಅಲೆಕ್ಸಾ ವನ್ನು ಸಂಗೀತ ಕೇಳಲು, ಪ್ರಶ್ನೆಗಳಿಗೆ ಉತ್ತರವನ್ನು ಹುಡುಕಲು ಅಲಾರಾಂ ಹೊಂದಿಸಲು ಇನ್ನು ಮುಂತಾದವುಗಳಿಗೆ ಬಳಸಬಹುದಾಗಿದೆ. ಅಮೆಜಾನ್ ಕಂಪನಿ ವಿಶ್ವದಾದ್ಯಂತ ಪ್ರಖ್ಯಾತಿ ಪಡೆದಿರುವ ಸಾಫ್ಟ್ವೇರ್ ಕಂಪನಿಯಾಗಿದೆ.

lokesh

Share
Published by
lokesh
Tags: alexaamazone

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago