ವಾಣಿಜ್ಯ

ಅಮೆಜಾನ್ ನಿಂದ ನೂರಾರು ಮಂದಿಯ ಉದ್ಯೋಗಕ್ಕೆ ಕತ್ತರಿ

ಪ್ರಸಿದ್ಧ ಅಮೆಜಾನ್ ಕಂಪನಿ ತನ್ನ ಅಲೆಕ್ಸಾ ಘಟಕದಿಂದ ನೂರಾರು ಮಂದಿ ಉದ್ಯೋಗಿಗಳ ಕೆಲಸಕ್ಕೆ ಕತ್ತರಿ ಹಾಕಿದೆ.

Amazon.com ತನ್ನ ಅಲೆಕ್ಸಾ ವಾಯ್ಸ್ ಘಟಕದ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಘೋಷಿಸಿದೆ.

ಇದರ ಪ್ರಕಾರ ನೂರಾರು ಮಂದಿ ಉದ್ಯೋಗಿಗಳ ಜೀವನದ ಮೇಲೆ ಇದು ಪರಿಣಾಮ ಬೀರಲಿದೆ. ಹೀಗೆ ಧಿಡೀರನೆ ಕೆಲಸದಿಂದ ವಜಾಗೊಳಿಸುವುದರಿಂದ ಉದ್ಯೋಗಿಗಳು ಹಾಗೂ ಅವರ ಕುಟುಂಬಸ್ಥರು ಸಂಕಷ್ಟಕ್ಕೀಡಾಗಲಿದ್ದಾರೆ. ಎಂಬುದನ್ನು ಸ್ಪಷ್ಟೀಕರಿಸಲು ಕಂಪನಿಯ ವಕ್ತಾರರು ನಿರಾಕರಿಸಿದ್ದಾರೆ.

ವ್ಯಾಪಾರ ಹಾಗೂ ಆದ್ಯತೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಲುವಾಗಿ ನಾವು ನಮ್ಮ ಕೆಲವು ಪ್ರಯತ್ನಗಳನ್ನು ಬದಲಾಯಿಸುತ್ತಿದ್ದೇವೆ. ಇದು ಗ್ರಾಹಕರಿಗೆ ಅತಿ ಮುಖ್ಯವಾಗಿದೆ. ಸಂಪನ್ಮೂಲಗಳನ್ನು ಹೆಚ್ಚಿಸುವುದು ಮತ್ತು ಉತ್ಪಾದಕ ಎಐ ಮೇಲೆ ಕೇಂದ್ರೀಕರಿಸಿದ ಪ್ರಯತ್ನಗಳನ್ನು ಕೂಡ ಇದರಲ್ಲಿ ಒಳಗೊಳ್ಳುತ್ತದೆ ಎಂದು ಕಂಪನಿಯ ಉಪಾಧ್ಯಕ್ಷ ಡೇನಿಯಲ್ ರೌಶ್ ತಿಳಿಸಿದ್ದಾರೆ.

ಅಮೆಜಾನ್ ಕಂಪನಿ ತನ್ನ ಮ್ಯೂಸಿಕ್ ಹಾಗೂ ಗೇಮಿಂಗ್ ಮತ್ತು ಕೆಲವು ಸಂಪನ್ಮೂಲ ವಿಭಾಗಗಳನ್ನು ಒಳಗೊಂಡಂತೆ, ಕಳೆದ ಕೆಲ ದಿನಗಳ ಹಿಂದೆ ಹಲವು ವಿಭಾಗಗಳನ್ನು ಹಿಂದಕ್ಕೆ ಪಡೆದಿತ್ತು. ಇದರ ಪರಿಣಾಮವಾಗಿ ಆಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಉದ್ಯೋಗಕ್ಕೂ ಕುತ್ತು ತಂದಿತ್ತು.

ಹಲವು ಕಂಪನಿಗಳು ಸಂಪನ್ಮೂಲಗಳ ಉತ್ಪಾದನೆಯನ್ನು ಎಐ ಗೆ ವರ್ಗಾಯಿಸುತ್ತಿವೆ. ಈ ಎಐ ಸಾಫ್ಟ್ ಕೋಡ್ ರಚಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗೂ ಸಣ್ಣ ಪ್ರಾಂಪ್ಟ್ ಗಳನ್ನು ನೀಡಿದರೆ ದೀರ್ಘವಾದ ಪಠ್ಯ ಪ್ರತಿಕ್ರಿಯೆಯನ್ನು ನೀಡುತ್ತದೆ.

ಅಲೆಕ್ಸಾ ಎಂಬುದು ಅಮೆಜಾನ್ ಕಂಪನಿಯ ಒಂದು ಸಂಗೀತ ಸಾಧನ. ಈ ಅಲೆಕ್ಸಾ ವನ್ನು ಸಂಗೀತ ಕೇಳಲು, ಪ್ರಶ್ನೆಗಳಿಗೆ ಉತ್ತರವನ್ನು ಹುಡುಕಲು ಅಲಾರಾಂ ಹೊಂದಿಸಲು ಇನ್ನು ಮುಂತಾದವುಗಳಿಗೆ ಬಳಸಬಹುದಾಗಿದೆ. ಅಮೆಜಾನ್ ಕಂಪನಿ ವಿಶ್ವದಾದ್ಯಂತ ಪ್ರಖ್ಯಾತಿ ಪಡೆದಿರುವ ಸಾಫ್ಟ್ವೇರ್ ಕಂಪನಿಯಾಗಿದೆ.

lokesh

Share
Published by
lokesh
Tags: alexaamazone

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago