ವಾಣಿಜ್ಯ

ಅಮೆಜಾನ್ ನಿಂದ ನೂರಾರು ಮಂದಿಯ ಉದ್ಯೋಗಕ್ಕೆ ಕತ್ತರಿ

ಪ್ರಸಿದ್ಧ ಅಮೆಜಾನ್ ಕಂಪನಿ ತನ್ನ ಅಲೆಕ್ಸಾ ಘಟಕದಿಂದ ನೂರಾರು ಮಂದಿ ಉದ್ಯೋಗಿಗಳ ಕೆಲಸಕ್ಕೆ ಕತ್ತರಿ ಹಾಕಿದೆ.

Amazon.com ತನ್ನ ಅಲೆಕ್ಸಾ ವಾಯ್ಸ್ ಘಟಕದ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಘೋಷಿಸಿದೆ.

ಇದರ ಪ್ರಕಾರ ನೂರಾರು ಮಂದಿ ಉದ್ಯೋಗಿಗಳ ಜೀವನದ ಮೇಲೆ ಇದು ಪರಿಣಾಮ ಬೀರಲಿದೆ. ಹೀಗೆ ಧಿಡೀರನೆ ಕೆಲಸದಿಂದ ವಜಾಗೊಳಿಸುವುದರಿಂದ ಉದ್ಯೋಗಿಗಳು ಹಾಗೂ ಅವರ ಕುಟುಂಬಸ್ಥರು ಸಂಕಷ್ಟಕ್ಕೀಡಾಗಲಿದ್ದಾರೆ. ಎಂಬುದನ್ನು ಸ್ಪಷ್ಟೀಕರಿಸಲು ಕಂಪನಿಯ ವಕ್ತಾರರು ನಿರಾಕರಿಸಿದ್ದಾರೆ.

ವ್ಯಾಪಾರ ಹಾಗೂ ಆದ್ಯತೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಲುವಾಗಿ ನಾವು ನಮ್ಮ ಕೆಲವು ಪ್ರಯತ್ನಗಳನ್ನು ಬದಲಾಯಿಸುತ್ತಿದ್ದೇವೆ. ಇದು ಗ್ರಾಹಕರಿಗೆ ಅತಿ ಮುಖ್ಯವಾಗಿದೆ. ಸಂಪನ್ಮೂಲಗಳನ್ನು ಹೆಚ್ಚಿಸುವುದು ಮತ್ತು ಉತ್ಪಾದಕ ಎಐ ಮೇಲೆ ಕೇಂದ್ರೀಕರಿಸಿದ ಪ್ರಯತ್ನಗಳನ್ನು ಕೂಡ ಇದರಲ್ಲಿ ಒಳಗೊಳ್ಳುತ್ತದೆ ಎಂದು ಕಂಪನಿಯ ಉಪಾಧ್ಯಕ್ಷ ಡೇನಿಯಲ್ ರೌಶ್ ತಿಳಿಸಿದ್ದಾರೆ.

ಅಮೆಜಾನ್ ಕಂಪನಿ ತನ್ನ ಮ್ಯೂಸಿಕ್ ಹಾಗೂ ಗೇಮಿಂಗ್ ಮತ್ತು ಕೆಲವು ಸಂಪನ್ಮೂಲ ವಿಭಾಗಗಳನ್ನು ಒಳಗೊಂಡಂತೆ, ಕಳೆದ ಕೆಲ ದಿನಗಳ ಹಿಂದೆ ಹಲವು ವಿಭಾಗಗಳನ್ನು ಹಿಂದಕ್ಕೆ ಪಡೆದಿತ್ತು. ಇದರ ಪರಿಣಾಮವಾಗಿ ಆಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಉದ್ಯೋಗಕ್ಕೂ ಕುತ್ತು ತಂದಿತ್ತು.

ಹಲವು ಕಂಪನಿಗಳು ಸಂಪನ್ಮೂಲಗಳ ಉತ್ಪಾದನೆಯನ್ನು ಎಐ ಗೆ ವರ್ಗಾಯಿಸುತ್ತಿವೆ. ಈ ಎಐ ಸಾಫ್ಟ್ ಕೋಡ್ ರಚಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗೂ ಸಣ್ಣ ಪ್ರಾಂಪ್ಟ್ ಗಳನ್ನು ನೀಡಿದರೆ ದೀರ್ಘವಾದ ಪಠ್ಯ ಪ್ರತಿಕ್ರಿಯೆಯನ್ನು ನೀಡುತ್ತದೆ.

ಅಲೆಕ್ಸಾ ಎಂಬುದು ಅಮೆಜಾನ್ ಕಂಪನಿಯ ಒಂದು ಸಂಗೀತ ಸಾಧನ. ಈ ಅಲೆಕ್ಸಾ ವನ್ನು ಸಂಗೀತ ಕೇಳಲು, ಪ್ರಶ್ನೆಗಳಿಗೆ ಉತ್ತರವನ್ನು ಹುಡುಕಲು ಅಲಾರಾಂ ಹೊಂದಿಸಲು ಇನ್ನು ಮುಂತಾದವುಗಳಿಗೆ ಬಳಸಬಹುದಾಗಿದೆ. ಅಮೆಜಾನ್ ಕಂಪನಿ ವಿಶ್ವದಾದ್ಯಂತ ಪ್ರಖ್ಯಾತಿ ಪಡೆದಿರುವ ಸಾಫ್ಟ್ವೇರ್ ಕಂಪನಿಯಾಗಿದೆ.

lokesh

Share
Published by
lokesh
Tags: alexaamazone

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

3 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

3 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

3 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago